ಸಾಗರ: ಅರಣ್ಯ ಭೂಮಿ ಸಾಗುವಳಿ ಅರ್ಜಿ ವಜಾ; ಧರಣಿ


Team Udayavani, Jan 27, 2022, 5:34 PM IST

23farmers

ಸಾಗರ: ಅರಣ್ಯ ಭೂಮಿ ಸಾಗುವಳಿ ಅರ್ಜಿಯನ್ನು ವಜಾಗೊಳಿಸುತ್ತಿರುವ ಆಡಳಿತದ ನಿರ್ಧಾರವನ್ನು ಖಂಡಿಸಿ ಗುರುವಾರ ರೈತ ಸಂಘ ಮತ್ತು ಪಾರಂಪರಿಕಾ ಅರಣ್ಯಹಕ್ಕು ಹೋರಾಟ ಸಮಿತಿ ಹೊಸೂರು ಗ್ರಾಮ ಪಂಚಾಯಿತಿ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ಜಿಲ್ಲೆಯಲ್ಲಿ ಅರಣ್ಯಭೂಮಿ ಸಾಗುವಳಿ ಮಾಡಿದವರ ಅರ್ಜಿಯನ್ನು ಅರಣ್ಯ ಹಕ್ಕು ಉಪವಿಭಾಗ ಮಟ್ಟದ ಸಮಿತಿ ವಜಾಗೊಳಿಸುತ್ತಿದೆ. ನಮ್ಮಲ್ಲಿ ಸುಮಾರು ಎರಡೂವರೆ ಸಾವಿರ ಅರ್ಜಿಯನ್ನು ಎಸಿ ವಜಾಗೊಳಿಸುವ ಮೂಲಕ ರೈತರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ. ಹಲವು ದಶಕಗಳಿಂದ ಅರಣ್ಯಭೂಮಿಯನ್ನು ಸಾಗುವಳಿ ಮಾಡುತ್ತಾ, ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ ರೈತರು ಈಗ ಒಕ್ಕಲೆಬ್ಬಿಸುವ ಭೀತಿಯಲ್ಲಿದ್ದಾರೆ. ಉಪವಿಭಾಗಾಧಿಕಾರಿಗಳ ಈ ನಡೆ ಖಂಡನೀಯ ಎಂದರು.

ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅರಣ್ಯ ಭೂಮಿ ಸಾಗುವಳಿ ಮಾಡಿದವರ 500ಕ್ಕೂ ಹೆಚ್ಚು ರೈತರ ಅರ್ಜಿ ತಿರಸ್ಕೃತವಾಗಿದೆ. ಈ ಭಾಗದಲ್ಲಿ ಬಹುತೇಕ ಕುಟುಂಬಗಳು ಮುಳುಗಡೆ ಸಂತ್ರಸ್ತರಾಗಿದ್ದು 70 ವರ್ಷಗಳ ಹಿಂದೆ ಇಲ್ಲಿಗೆ ಬಂದು ನೆಲೆ ಕಂಡುಕೊಂಡಿದ್ದಾರೆ. 1954-55ರಲ್ಲಿ ಇಲ್ಲಿಗೆ ಬಂದು ಸಾಗುವಳಿ ಮಾಡಿಕೊಂಡಿದ್ದಾರೆ. ಮೂರು ತಲೆಮಾರಿನಿಂದಲೂ ಸಾಗುವಳಿ ಮಾಡಿಕೊಂಡವರಿದ್ದಾರೆ. ಸಾಗುವಳಿ ಮಾಡುತ್ತಿರುವ ರೈತರಿಗೆ ಈತನಕ ಹಕ್ಕುಪತ್ರ ನೀಡಿಲ್ಲ. 2 ಸಾವಿರ ಎಕರೆ ಮೀಸಲಿಟ್ಟಿದ್ದೇವೆ ಎಂದು ಸರ್ಕಾರ ಹೇಳುತ್ತದೆ. ಆದರೆ ಈತನಕ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡಿಲ್ಲ. 2006ರಲ್ಲಿ ಅರಣ್ಯ ಹಕ್ಕು ಕಾಯ್ದೆ ಬಂದಿದೆ. ಆದರೆ ಸಾಗುವಳಿದಾರರಿಗೆ ಈತನಕ ಹಕ್ಕುಪತ್ರ ಕೊಡದ ನಿಷ್ಕ್ರಿಯ ಜನಪ್ರತಿನಿಧಿಗಳು ನಮ್ಮ ನಡುವೆ ಇರುವುದು ಖಂಡನೀಯ ಎಂದರು.

ಕಳೆದ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದು ಪಾರಂಪಾರಿಕ ಅರಣ್ಯ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 25 ವರ್ಷ ಸಾಗುವಳಿ ಮಾಡಿದರೆ ಹಕ್ಕು ಕೊಡಬಹುದು ಎಂದು ನಿರ್ಧರಿಸಲಾಗಿದೆ. ಈತನಕ ಹಕ್ಕುಪತ್ರ ಕೊಟ್ಟಿಲ್ಲ. ಕಳೆದ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪ ಹೊರತುಪಡಿಸಿ ಇತರ ಯಾವುದೇ ಜನಪ್ರತಿನಿಧಿಗಳು ಸದನದ ಒಳಗೆ ಅರಣ್ಯಭೂಮಿ ಸಾಗುವಳಿದಾರರ ಬಗ್ಗೆ ಧ್ವನಿ ಎತ್ತಿಲ್ಲ. ಐಎಎಸ್, ಐಎಫ್‌ಎಸ್ ಅಧಿಕಾರಿಗಳಿಗೆ ಅರಣ್ಯ ಭೂಮಿ ಸಾಗುವಳಿದಾರರು, ಮುಳುಗಡೆ ಸಂತ್ರಸ್ತರ ಬಗ್ಗೆ ಕಾಳಜಿ ಇಲ್ಲ. ಹಕ್ಕುಪತ್ರ ಇಲ್ಲದೆ ಇರುವುದರಿಂದ ರೈತರು ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಉಪವಿಭಾಗೀಯ ಮಟ್ಟದ ಅರಣ್ಯಹಕ್ಕು ಸಮಿತಿ ಕೂಡಲೇ ತಿರಸ್ಕೃತವಾದ ಅರ್ಜಿಗಳನ್ನು ಪುನರ್ ಪರಿಶೀಲನೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಮಲೆನಾಡು ಭೂಹಕ್ಕು ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ಮಾತನಾಡಿ, ಅರಣ್ಯಭೂಮಿ ಸಾಗುವಳಿದಾರರಿಗೆ ಮತ್ತು ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ವಿಫಲವಾಗಿರುವ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಹಾಲಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಹಿಂದೆ ಯುಪಿಎ ಸರ್ಕಾರ ಇದ್ದಾಗ ಸಂಸದರು ಅರಣ್ಯ ಭೂಮಿ ಮಂಜೂರು ಮಾಡಲು ಇರುವ 75 ವರ್ಷ ಮಿತಿ ತೆಗೆದು, 25 ವರ್ಷಕ್ಕೆ ಇಳಿಸಬೇಕು ಎಂದು ಹೋರಾಟ ಮಾಡಿದ್ದರು. ಈಗ ಅವರದ್ದೇ ಸರ್ಕಾರವಿದ್ದರೂ ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಪ್ರಯತ್ನಿಸದೆ ಇರುವುದು ಅವರ ಅಸಮರ್ಥತೆಗೆ ಸಾಕ್ಷಿಯಾಗಿದೆ. 25 ವರ್ಷ ದಾಖಲೆ ಪಡೆದು ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಕೊಡಲು ಅಗತ್ಯ ಕಾನೂನು ತಿದ್ದುಪಡಿ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು, ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶರತ್, ಹೋರಾಟ ಸಮಿತಿಯ ಹುರಳಿ ನಾರಾಯಣಪ್ಪ, ಕನ್ನಪ್ಪ, ಗಣಪತಿಯಪ್ಪ, ರಮೇಶ್ ಕೆ.ಟಿ. ಐಗಿನಬೈಲು, ರವಿ ಬಿಳಿಸಿರಿ, ರಾಜು ದೇವಾಡಿ, ಈಳಿ ಮಂಜುನಾಥ್, ವಸಂತಕುಮಾರ್ ಎನ್.ಡಿ., ಮಹ್ಮದ್ ಖಾಸಿಂ, ಎಲ್.ವಿ.ಸುಭಾಷ್, ವೀರಭದ್ರಪ್ಪ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ

Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ

Eid Procession: ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

madhu-bangarappa

Shimoga incident; ಕಾನೂನುಬದ್ಧ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ: ಮಧುಬಂಗಾರಪ್ಪ

Shivamogga ಸಹಜ ಸ್ಥಿತಿಯತ್ತ ರಾಗಿಗುಡ್ಡ; 40ಕ್ಕೂ ಹೆಚ್ಚು ಕಿಡಿಗೇಡಿಗಳು ವಶಕ್ಕೆ

Shivamogga ಸಹಜ ಸ್ಥಿತಿಯತ್ತ ರಾಗಿಗುಡ್ಡ; 40ಕ್ಕೂ ಹೆಚ್ಚು ಕಿಡಿಗೇಡಿಗಳು ವಶಕ್ಕೆ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.