ಗಾಳಿ-ಮಳೆ: ಮರ ಬಿದ್ದು ವ್ಯಕ್ತಿಗೆ ಗಾಯ
Team Udayavani, May 11, 2020, 12:13 PM IST
ಆನಂದಪುರ: ಆನಂದಪುರದಲ್ಲಿ ಭಾನುವಾರ ಸಂಜೆ ಸುಮಾರು ಒಂದು ತಾಸು ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಿದೆ. ಸುತ್ತಮುತ್ತಲಿನ ಎಡೆಹಳ್ಳಿ, ಆಚಾಪುರ, ಗಿಳಾಲಗುಂಡಿ, ಲಕ್ಕವಳ್ಳಿ, ಮುಂಬಾಳು, ಹೊಸೂರು, ಹೊಸಕೊಪ್ಪ, ಕಣ್ಣೂರು, ಇರುವಕ್ಕಿ ಭಾಗದಲ್ಲಿ ಮಳೆಯಾಗಿದೆ.
ಸಾಗರ: ತಾಲೂಕಿನ ಹಲವು ಕಡೆಗಳಲ್ಲಿ ಭಾನುವಾರ ಭಾರೀ ಗಾಳಿ-ಮಳೆ ಸುರಿದಿದ್ದು, ವಿದ್ಯುತ್ ಸಂಪರ್ಕದ ಕಂಬಗಳು ಧರೆಗುರುಳಿವೆ. ಮರ ಬಿದ್ದು ವ್ಯಕ್ತಿಯೊಬ್ಬ ಗಾಯಗೊಂಡಿದ್ದಾರೆ.
ಪಟ್ಟಣದ ಎಸ್ಎನ್ ನಗರದಲ್ಲಿ ಹಾಗೂ ಆವಿನಹಳ್ಳಿ ರಸ್ತೆಯಲ್ಲಿ ತಲಾ 2 ವಿದ್ಯುತ್ ಕಂಬಗಳು ಮುರಿದಿದ್ದು, ಬಹಳಷ್ಟು ಕಡೆಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿವೆ. ಎಸ್ಎನ್ ನಗರದ ರಕ್ತೇಶ್ವರಿ ದೇವಸ್ಥಾನದ ಬಳಿ ವಿದ್ಯುತ್ ಕಂಬವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಜನ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ತೆರವುಗೊಳಿಸುವ ಕಾರ್ಯವನ್ನು ಇಲಾಖೆ ನಡೆಸುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇಲ್ಲಿನ ಆವಿನಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಚಿಪ್ಪಳಿಗೆ ತೆರಳುತ್ತಿದ್ದ ಹಾನಂಬಿ ರಸ್ತೆಯ ವಾಸಿ ತಾಹೀರ್ ಎಂಬುವವರ ಮೇಲೆ ರಸ್ತೆ ಪಕ್ಕದ ಮರ ಬಿದ್ದು, ತಲೆಗೆ ಗಂಭೀರವಾದ ಪೆಟ್ಟಾಗಿದೆ. ಸ್ಥಳೀಯರು ತಕ್ಷಣ ಅವರನ್ನು ಇಲ್ಲಿನ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ