ಕೆಎಫ್ಡಿ ಲಸಿಕೆಗೆ ಜನಪ್ರತಿನಿಧಿಗಳ ದೌಡು!
ಸ್ವತಃ ತಾವೇ ಮಂಗನ ಕಾಯಿಲೆ ಲಸಿಕೆ ತೆಗೆದುಕೊಂಡು ಜನರಿಗೆ ಧೈರ್ಯ ತುಂಬಿದ ಶಾಸಕ ಹಾಲಪ್ಪ
Team Udayavani, Jan 18, 2020, 5:42 PM IST
ಸಾಗರ: ತಾಲೂಕಿನ ತುಮರಿಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಂಗನ ಕಾಯಿಲೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಎಚ್. ಹಾಲಪ್ಪ ತಾವೇ ಚುಚ್ಚುಮದ್ದು ಪಡೆಯುವ ಮೂಲಕ ಈ ಭಾಗದಲ್ಲಿ ಲಸಿಕೆ ಕುರಿತಾಗಿ ಇರುವ ಅಪನಂಬಿಕೆಗಳನ್ನು ತೊಡೆದುಹಾಕುವ ಪ್ರಯತ್ನ ನಡೆಸಿದರು.
ಇದೇ ವೇಳೆ ಖುದ್ದು ತಾಲೂಕು ಆರೋಗ್ಯಾಧಿಕಾರಿ ಡಾ| ಮುನಿ ವೆಂಕಟರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ರಾಜೇಶ್ ಸುರಗಿಹಳ್ಳಿ ಅವರಿಗೆ ಲಸಿಕೆ ಹಾಕಿದ್ದು ಕೂಡ ಗಮನಾರ್ಹವಾಗಿತ್ತು. ತುಮರಿ ಗ್ರಾಪಂ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ್ ಕರೂರು ಕೂಡ ಎರಡನೇ ಸುತ್ತಿನ ಲಸಿಕೆ ತೆಗೆದುಕೊಂಡರು. ಶಾಸಕ ಹಾಲಪ್ಪ ವಿದ್ಯಾರ್ಥಿಗಳಿಗೆ ಕೆಎಫ್ಡಿ ಕುರಿತ ಜಾಗೃತಿ ಕರಪತ್ರ ಹಾಗೂ ಡಿಎಂಪಿ ಆಯಿಲ್ ವಿತರಣೆ ಮಾಡಿ, ಜನರಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖ ಎಂದು ಮಕ್ಕಳಿಗೆ ಸ್ಫೂರ್ತಿ ತುಂಬಿದರು.
ಕಳೆದ ಡಿಸೆಂಬರ್ನಲ್ಲಿ ಕೆಎಫ್ಡಿಯ ಶಿವಮೊಗ್ಗ ಘಟಕದ ಕಾರ್ಯಕರ್ತರು ಈ ಭಾಗದಲ್ಲಿ ವ್ಯಾಪಕ ಜಾಗೃತಿಗೆ ಪ್ರಯತ್ನಿಸಿದ್ದರು. ಆದರೆ ಕೇವಲ 20 ನಾಗರಿಕರು ಲಸಿಕೆ ಹಾಕಿಸಿಕೊಂಡಿದ್ದರು. ಆದರೆ ಈ ಭಾಗದ ಶೀಗೇಮಕ್ಕಿಯ ಹೂವಮ್ಮ ಮಂಗನ ಕಾಯಿಲೆಗೆ ಬಲಿಯಾದ ನಂತರ ಚಿತ್ರಣ ಬದಲಾಗಿದೆ.
ಶುಕ್ರವಾರ ಮಾರಲಗೋಡು ಪ್ರದೇಶದಲ್ಲಿ ನಡೆದ ಲಸಿಕೆ ಕಾರ್ಯಕ್ರಮದಲ್ಲಿ 236 ಜನ ಗ್ರಾಮಸ್ಥರಲ್ಲಿ ಶೇ. 95ರಷ್ಟು ಜನ ಲಸಿಕೆ ಹಾಕಿಸಿಕೊಂಡರು. ಪರ ಊರಿನಲ್ಲಿರುವ ಹಾಗೂ ವಿದ್ಯಾರ್ಥಿಗಳು ತರಗತಿಗೆ ಪಾಲ್ಗೊಳ್ಳಬೇಕಾದ ಹಿನ್ನೆಲೆಯಲ್ಲಿ 90 ಜನ ಲಸಿಕೆ ಹಾಕಿಸಿಕೊಳ್ಳುವುದರಿಂದ ತಪ್ಪಿದಂತಾಗಿದೆ. ಆರೋಗ್ಯ ಇಲಾಖೆ ಕೂಡ ಲಸಿಕೆ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೆಎಫ್ಡಿ ವಿಭಾಗದ ಡಾ| ಕಿರಣ್ ಕೂಡ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಆರೋಪಗಳಿಗೆ ಬಿಎಸ್ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ
Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ
Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ
Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!