ಸಿಗಂದೂರು ಲಾಂಚ್ ಸಿಬ್ಬಂದಿಗೆ 9 ತಿಂಗಳಿನಿಂದ ವೇತನ ಇಲ್ಲ!


Team Udayavani, Sep 3, 2021, 7:11 PM IST

sagara news

ಸಾಗರ: ತಾಲೂಕಿನ ಹಿನ್ನೀರಿನ ವ್ಯಾಪ್ತಿಯ ಲಾಂಚ್ ಸೇವೆಯಲ್ಲಿ  ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 19 ಸಿಬ್ಬಂದಿಗೆ ಕಳೆದ 9 ತಿಂಗಳಿನಿಂದ ಸಂಬಳ ನೀಡಿಲ್ಲ. ಲಾಕ್ ಡೌನ್ ಸಂದರ್ಭದ ಸಂಕಟ ಸೇರಿದಂತೆ ಸಂಬಳ ಇಲ್ಲದೆ ಕುಟುಂಬ ನಿರ್ವಹಣೆಗೆ ಸಿಬ್ಬಂದಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಸಿಬ್ಬಂದಿಗಳಿಂದಾಗಿ ಹಿನ್ನೀರಿನ ಗ್ರಾಮವಾಸಿಗಳಿಗೆ, ಪ್ರವಾಸಿಗರಿಗೆ ಲಾಂಚ್ ಸೇವೆ ಸಹಕಾರಿಯಾಗಿದೆ. ಸಿಗಂದೂರು ಲಾಂಚ್ ವಿಚಾರದಲ್ಲಿ ಆಗಾಗ ಮಾತಿನ ಚಕಮಕಿ, ಹಲ್ಲೆ ಪ್ರಕರಣಗಳನ್ನು ಸಹ ಸಿಬ್ಬಂದಿ ಅನುಭವಿಸುವ ಸ್ಥಿತಿ ಇದೆ. ಆಗಾಗ ಪ್ರಭಾವಿ ವ್ಯಕ್ತಿಗಳ ಕೋರಿಕೆ ಕಾರಣದಿಂದ ಹೆಚ್ಚುವರಿ ಸೇವೆಯನ್ನು ಸಹ ಲಾಂಚ್ ಸಿಬ್ಬಂದಿ ಮಾಡುವ ಸ್ಥಿತಿ ಇದೆ.

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬಹುತೇಕ ಸಿಬ್ಬಂದಿ ಸ್ಥಳೀಯರಾಗಿದ್ದ ಕಾರಣವೂ ಸೇರಿದಂತೆ, ಸ್ಥಳೀಯರ ತುರ್ತು ಸಂದರ್ಭಗಳಲ್ಲಿ ಸಹ ಮಾನವೀಯ ನೆಲೆಯಲ್ಲಿ ಸಿಬ್ಬಂದಿ ಲಾಂಚ್ ಸೇವೆ ಕಲ್ಪಿಸುವ ಸ್ಥಿತಿ ನಿರ್ಮಾಣವಾಗುತ್ತದೆ. ನಿರಂತರವಾಗಿ ಜನವರಿಯಿಂದ ಸೇವೆ ಮಾಡಿದ್ದರೂ ೧೯ ಜನ ಸಿಬ್ಬಂದಿ ಸಂಬಳವಿಲ್ಲದೆ ಕೆಲಸ ಮಾಡುತ್ತಿರುವುದು ವಿಪರ್ಯಾಸ ಎಂದೇ ಇಲ್ಲಿನ ಜನ ಹೇಳುತ್ತಾರೆ.

ಲಾಂಚ್ ಸಿಬ್ಬಂದಿ ವೇತನ ಪಾವತಿ ಸೇರಿದಂತೆ ಸ್ಥಳೀಯ ಜವಾಬ್ದಾರಿ ನಿರ್ವಹಿಸುವ ಕಡವು ಇಲಾಖೆ  ಅಧಿಕಾರಿಗಳು ವೇತನದ ಕುರಿತು ಕಳೆದ 1 ತಿಂಗಳಿನಿಂದ ಸಂಬಳದ ಸಂಬಂಧ ಪತ್ರ ವ್ಯವಹಾರ ಮಾಡುತ್ತಿದ್ದಾರೆ. ವೇತನದ ಒಟ್ಟು ಮೊತ್ತ 2 ಲಕ್ಷ ರೂ.ಕ್ಕಿಂತ ಕಡಿಮೆ ಇದ್ದ ಸಂದರ್ಭದಲ್ಲಿ ಜಿಎಸ್‌ಟಿ ಕಡಿತ ಅಗತ್ಯ ಇಲ್ಲ ಎಂದು ಭಾವಿಸಿದ ಅಧಿಕಾರಿಗಳು ತೆರಿಗೆ ಹಣ ಪರಿಗಣಿಸದೆ ಬಿಲ್ ಮಾಡಿದ್ದಾರೆ. ಆದರೆ ಖಜಾನೆ ಇಲಾಖೆಯ ಅಧಿಕಾರಿಗಳು ರೂ 2 ಲಕ್ಷಕ್ಕಿಂತಲೂ ಕಡಿಮೆ ಇದ್ದರೂ ಜಿಎಸ್‌ಟಿ ಕಡಿತ ಅಗತ್ಯ ಎಂಬ ಕಾನೂನು ನಿಯಮ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಅಧಿಕಾರಿಗಳು ಕಾರವಾರ ಮತ್ತು ಮಂಗಳೂರು ಮಟ್ಟದ ಉನ್ನತ ಅಧಿಕಾರಿಗಳಿಗೆ ಹೊಸದಾಗಿ ಸಂಬಳದ ಕುರಿತಾದ ಬಿಲ್ ಮಾಡಿ ಕಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 1220 ಜನರಿಗೆ ಪಾಸಿಟಿವ್ ಸೋಂಕು | 1175 ಸೋಂಕಿತರು ಗುಣಮುಖ  

ಜಿಎಸ್‌ಟಿ ಕಡಿತದ ಗೊಂದಲದ ಕಾರಣದಿಂದ ಸಿಬ್ಬಂದಿ ವೇತನ ವಿಳಂಬವಾಗಿದ್ದು, ಈ ಬಗ್ಗೆ ಶೀಘ್ರವಾಗಿ ಕಚೇರಿ ಕಾರ್ಯ ಆಗುವಂತೆ ಸ್ಥಳೀಯ ಅಧಿಕಾರಿಗಳು ಕಾಳಜಿ ವಹಿಸಬೇಕಾಗಿದೆ.

ಹಿನ್ನೀರಿನ ಲಾಂಚ್ ಸೇವೆಯ ಚಾಲಕ ಮತ್ತಿತರ ಸಿಬ್ಬಂದಿಗೆ ವಸತಿ ಸಂಬಂಧ ವಸತಿಗೃಹಗಳ ನಿರ್ಮಾಣದ ಅಗತ್ಯತೆ ಬಗ್ಗೆ ಬಹುಕಾಲದಿಂದ ಬೇಡಿಕೆ ಸಲ್ಲಿಸಲಾಗಿದೆ. ಈ ಬಗ್ಗೆ ಹಲವಾರು ಸಂದರ್ಭಗಳಲ್ಲಿ ಜನಪ್ರತಿನಿಧಿಗಳು ಸಹ ಪ್ರಸ್ತಾಪಿಸಿದ್ದಾರೆ. ಆದರೆ ಈಗ ಅಂಬಾರಗೋಡ್ಲು ಮತ್ತು ಕಳಸವಳ್ಳಿ ಸಂಪರ್ಕ  ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸೇತುವೆ ಸೌಲಭ್ಯದ ಹಿನ್ನೆಲೆಯಲ್ಲಿ ಲಾಂಚ್ ಸಿಬ್ಬಂದಿಗೆ ವಸತಿಗೃಹ ನಿರ್ಮಿಸಿ ಕೊಡುವ ಅಗತ್ಯವಿಲ್ಲ ಎಂದು ಇಲಾಖೆ ಯೋಚಿಸಿದಂತಿದೆ. ಆದ್ದರಿಂದ ಸಿಬ್ಬಂದಿ ವಸತಿಗೃಹದ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆ ಇದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡವು ಇಲಾಖೆಯ ಸಾಗರದ ಸಹಾಯಕ ಕಡವು ನಿರೀಕ್ಷಕ ದಾಮೋದರ ನಾಯ್ಕ, 2021ರ ಜನವರಿ ತಿಂಗಳಿನಿಂದ ಲಾಂಚ್ ಸೇವೆಯಲ್ಲಿನ 19 ಸಿಬ್ಬಂದಿಗೆ ವೇತನ ಪಾವತಿಯಾಗಿಲ್ಲ. 2 ಲಕ್ಷದ ಮಿತಿಯೊಳಗಿನ ವೇತನಗಳ ಸಂದರ್ಭ ಜಿಎಸ್‌ಟಿ ಕಡಿತ ಅಗತ್ಯವಿಲ್ಲ ಎಂದು ಬಿಲ್ ಮಾಡಲಾಗಿತ್ತು. ಆದರೆ ಈ ಬಿಲ್ ಸಂದರ್ಭದಲ್ಲಿಯೂ ಜಿಎಸ್‌ಟಿ ಕಡಿತ ಅಗತ್ಯ ಎಂದು ಖಜಾನೆ ಅಧಿಕಾರಿಗಳು ಸೂಚಿಸಿದ್ದಾರೆ. ವೇತನ ಪಾವತಿಗೆ ವಾರದೊಳಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.