ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
Team Udayavani, Oct 24, 2021, 4:50 PM IST
ಸಾಗರ: ಅಕ್ರಮ ಗೋವು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ ಭಾನುವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರಠಾಣೆಗೆ ಮನವಿ ಸಲ್ಲಿಸಲಾಯಿತು.
ಅ. 23ರ ಶನಿವಾರ ಮಧ್ಯರಾತ್ರಿ ಸುಮಾರು 2-30ರ ಸುಮಾರಿಗೆ ನಗರದ ಮಾರಿಕಾಂಬಾ ವೃತ್ತದ ಸಮೀಪ ಕಪ್ಪು ಬಣ್ಣದ ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ ಮೂರು ಜನರು ರಸ್ತೆಯಲ್ಲಿ ಮಲಗಿದ್ದ ಗೋವನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಈ ಬಗ್ಗೆ ಸ್ಥಳೀಯವಾಗಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸಾಗಾಣಿಕೆ ನಡೆಸುತ್ತಿರುವ ದೃಶ್ಯ ದಾಖಲಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ:ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ
ಹಿಂದಿನಿಂದಲೂ ಪಟ್ಟಣ ವ್ಯಾಪ್ತಿಯಲ್ಲಿ ಗೋವು ಕಳ್ಳತನ ಮಾಡುತ್ತಿರುವ ಬಗ್ಗೆ ಯುವಮೋರ್ಚಾ ವತಿಯಿಂದ ದೂರು ನೀಡಲಾಗಿತ್ತು. ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅ. 23ರಂದು ಮತ್ತೆ ಗೋವೊಂದನ್ನು ಗೋಕಳ್ಳರು ಅಕ್ರಮವಾಗಿ ಹೊತ್ತೊಯ್ದಿದ್ದಾರೆ. ತಕ್ಷಣ ಗೋ ಕಳ್ಳಸಾಗಾಣಿಕೆ ಮಾಡುತ್ತಿರುವವರನ್ನು ಬಂಧಿಸಿ, ಸೂಕ್ತ ಕಾನೂನುಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಯುವಮೋರ್ಚಾ ನಗರ ಅಧ್ಯಕ್ಷ ಅರುಣ ಕುಗ್ವೆ, ನಗರ ಅಧ್ಯಕ್ಷ ಶ್ರೀರಾಮ್, ಪ್ರಮುಖರಾದ ಪರಶುರಾಮ್, ವಿನಯ್ ಪೂಜಾರಿ, ರಾಘವೇಂದ್ರ, ವಿನೋದ್ ರಾಜ್ ಶೆಟ್ಟಿ, ಸಂತೋಷ್ ಕೆ.ಜಿ., ಪ್ರದೀಪ್, ವಿನೋದ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ