ಮೃತ ವ್ಯಕ್ತಿಯೇ ಎದ್ದು ಬಂದು ಆಸ್ತಿ ಮಾರಿದ :ಇಲ್ಲೊಂದು ವಿಚಿತ್ರ ಪ್ರಕರಣ


Team Udayavani, Sep 8, 2021, 6:11 PM IST

sagara news

ಸಾಗರ: ಸತ್ತಿರುವ ವ್ಯಕ್ತಿ ಬದುಕಿದ್ದಾನೆ ಎಂದು ನಂಬಿಸಿ ಕ್ರಯಪತ್ರ ನೋಂದಣಿ ಮಾಡಿಸಿರುವ ಪ್ರಕರಣ ಸಂಬಂಧ ಕೆಲದಿನಗಳ ಹಿಂದೆ ಸ್ಥಳೀಯ ಶಾಸಕ ಎಚ್. ಹಾಲಪ್ಪ ಹರತಾಳು ನಗರಸಭೆಯ ದಾಖಲೆಗಳನ್ನು ಪರಿಶೀಲಿಸಿ ಒಂದೇ ನಿವೇಶನಕ್ಕೆ ಎರಡು ಹಕ್ಕುಪತ್ರ ನೀಡಿದ ಪ್ರಕರಣವನ್ನು ಬಯಲಿಗೆ ತಂದಿದ್ದನ್ನು ಬೆಳಕಿಗೆ ತಂದ ಘಟನೆ ನಡೆದಿದ್ದು, ಈಗ ಮರಣ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಸೃಷ್ಟಿಸಿ ಕ್ರಯಪತ್ರ ನೋಂದಣಿ ಮಾಡಿಸುವ ಮೂಲಕ ವಂಚನೆ ನಡೆಸಿದ ಆರೋಪದ ಮೇಲೆ ಇಲ್ಲಿನ ನಗರ ಠಾಣೆ ಪೊಲೀಸರು ಓರ್ವ ವಕೀಲರೂ ಸೇರಿದಂತೆ ಮೂವರ ವಿರುದ್ಧ ಸೋಮವಾರ ಮೊಕದ್ದಮೆ ದಾಖಲಿಸಿದ್ದಾರೆ.

ಪ್ರಥಮ ವರದಿ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ವಕೀಲರಾದ ಎಚ್.ಎನ್.ದಿವಾಕರ್, ಮಂಡಗಳಲೆ ಗ್ರಾಮದ ಈಶ್ವರ, ಗಾಳಿಪುರ ಗ್ರಾಮದ ರಮೇಶ್ ಪ್ರಕರಣದ ಆರೋಪಿಗಳೆಂದು ದಾಖಲಿಸಿದ್ದಾರೆ. ಬಲೆಗಾರು ಗ್ರಾಮದ ರಾಜೇಂದ್ರ ಡಿ.ಎಸ್. ಎಂಬುವವರು ನೀಡಿರುವ ದೂರಿನ ಆಧಾರದ ಮೇಲೆ ಈ ಮೊಕದ್ದಮೆ ದಾಖಲಾಗಿದೆ.

ಇಲ್ಲಿನ ಲೋಹಿಯಾ ನಗರದಲ್ಲಿ ಆಶ್ರಯ ನಿವೇಶನ ಹೊಂದಿದ್ದ ಸೊರಬ ತಾಲೂಕಿನ ಉಳವಿ ಗ್ರಾಮದ ಕಲೀಲ್ ಸಾಬ್ 2007 ರಲ್ಲಿ ಮೃತಪಟ್ಟಿದ್ದರು. 2016ರಲ್ಲಿ ದೂರುದಾರರಾದ ರಾಜೇಂದ್ರ ಅವರಿಗೆ ಆರೋಪಿಗಳು ನಕಲಿ ಕಲೀಲ್ ಸೃಷ್ಟಿಸಿ 6.80 ಲಕ್ಷ ರೂ.ಗೆ ಆ ನಿವೇಶನವನ್ನು ಮಾರಾಟ ಮಾಡಿಸಿದ್ದರು. 2020ರಲ್ಲಿ ರಾಜೇಂದ್ರ ಅವರು ತಾವು ಖರೀದಿಸಿದ ನಿವೇಶನವನ್ನು ಸವಿತಾ ಡಿ.ಬಿ. ಎಂಬುವವರಿಗೆ ಮಾರಾಟ ಮಾಡಿದರು. ಈ ನಡುವೆ ನಿವೇಶನದ ಮೂಲ ಮಾಲೀಕರಾದ ಕಲೀಲ್ ಸಾಬ್ ಅವರ ಪತ್ನಿ ಫಾತಿಮಾ ತಮ್ಮ ಪತಿಯ ಹೆಸರಿನಲ್ಲಿದ್ದ ನಿವೇಶನದ ಖಾತೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡು, ನಗರಸಭೆಯಿಂದ ಸ್ವಾಧೀನ ಪತ್ರ ಪಡೆದು ಆ ಸ್ವತ್ತನ್ನು ಕುಸುಮಾ ಭಂಡಾರಿ ಎಂಬುವವರಿಗೆ ಮಾರಾಟ ಮಾಡಿದ ಘಟನೆ ಪರಸ್ಪರರಿಗೆ ಗೊತ್ತಿಲ್ಲದಂತೆ ನಡೆದಿತ್ತು.

ಇದನ್ನೂ ಓದಿ:4 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ

ಇತ್ತಿಚೆಗೆ ಕುಸುಮಾ ಭಂಡಾರಿ ಅವರು ಆ ನಿವೇಶನದಲ್ಲಿ ಮನೆ ನಿರ್ಮಿಸಲು ಮುಂದಾದಾಗ ಸವಿತಾ ಅವರು ಸ್ಥಳಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದ್ದರು. ದಾಖಲೆಗಳ ಗೊಂದಲದಿಂದ ಕಾಮಗಾರಿ ನಿಲ್ಲಿಸುವಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದರು. ಕುಸುಮಾ ಭಂಡಾರಿ ಅವರು ಈ ವಿಷಯವನ್ನು ಶಾಸಕ ಎಚ್.ಹಾಲಪ್ಪ ಹರತಾಳು ಅವರ ಗಮನಕ್ಕೆ ತಂದಾಗ ಶಾಸಕರು ನಗರಸಭೆ ಕಚೇರಿಗೆ ಭೇಟಿ ನೀಡಿ ಒಂದೇ ನಿವೇಶನಕ್ಕೆ ಸಂಬಂಧಿಸಿದಂತೆ ಎರಡು ಕ್ರಯಪತ್ರ ನೋಂದಣಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಿದ್ದಲ್ಲದೆ, ಇಂತಹ ನೂರಾರು ಪ್ರಕರಣಗಳು ಸಾಗರದಲ್ಲಿ ನಡೆದಿರುವ ಸಂಶಯ ವ್ಯಕ್ತಪಡಿಸಿದರು. ಅವರು ತಪ್ಪಿತಸ್ಥರನ್ನು ಕಂಡುಹಿಡಿಯುವ ಉದ್ದೇಶದಿಂದ ಪೊಲೀಸರಿಗೆ ದೂರು ನೀಡುವಂತೆ ಪೌರಾಯುಕ್ತರಿಗೆ ಸೂಚಿಸಿದ್ದರು. ಈಗಾಗಲೇ ನಗರಸಭೆ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರೂ ಇನ್ನೂ ಎಫ್‌ಐಆರ್‌ಗೆ ಪೊಲೀಸರು ಮುಂದಾಗಿಲ್ಲ. ಆದರೆ ರಾಜೇಂದ್ರ ಅವರ ದೂರಿನ ಸಂಬಂಧ ಮೊಕದ್ದಮೆ ದಾಖಲಾಗಿದ್ದು, ಆರೋಪಿಗಳ ಬಂಧನ ಸಾಧ್ಯತೆ ದಟ್ಟವಾಗಿದೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.