ತಾಳಗುಪ್ಪ ಹೋಬಳಿಯ ಬೀಸನಗದ್ದೆ ಗ್ರಾಮಕ್ಕೆ ಸಂಪರ್ಕ ಕಡಿತ
Team Udayavani, Jul 12, 2022, 12:27 PM IST
ಸಾಗರ: ತಾಲೂಕಿನ ಎಲ್ಲೆಡೆ ಎಡೆಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಡಗಳಲೆ ಸಮೀಪದ ಬೀಸನಗದ್ದೆ ಗ್ರಾಮ ಜಲಾವೃತಗೊಂಡು, ನಾಗರಿಕ ಜಗತ್ತಿನ ಸಂಪರ್ಕ ಕಡಿತಕೊಂಡಿದೆ.
ಇಲ್ಲಿನ ಭೌಗೋಳಿಕ ಸ್ಥಿತಿಯಿಂದ ಪ್ರತಿ ವರ್ಷ ವರದಾ ನದಿ ನೀರು ಆವರಿಸುವುದರಿಂದ ಈ ಗ್ರಾಮ ಜಲಾವೃತವಾಗುತ್ತಿದ್ದು, ಈವರೆಗೆ ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಸಾಧ್ಯವಾಗಿಲ್ಲ. ಮಂಗಳವಾರದಿಂದ ಈ ಭಾಗದ ಗ್ರಾಮಸ್ಥರ ಓಡಾಟಕ್ಕೆ ಫೈಬರ್ ದೋಣಿಯ ವ್ಯವಸ್ಥೆ ಮಾಡಲಾಗುವುದು ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ತಾಳಗುಪ್ಪ ಹೋಬಳಿಯ ತಾಳಗುಪ್ಪ, ಮಂಡಗಳಲೆ, ಕಾನ್ಲೆ, ಸೈದೂರು, ತಡಗಳಲೆ, ಹಿರೇನೆಲ್ಲೂರು ಹಾಗೂ ಸುತ್ತಮುತ್ತ ಗ್ರಾಮಗಳ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಿವೆ. ಜುಲೈ 10ರ 24 ಗಂಟೆಗಳಲ್ಲಿ ವಾಡಿಕೆಯಂತೆ 26.7 ಮಿ.ಮೀ. ಮಳೆಯಾಗಬೇಕಿದ್ದು, 640 ಮಿ.ಮೀ.ನಷ್ಟು ಮಳೆ ಸುರಿದಿದೆ. ಈ ಅವಧಿಯಲ್ಲಿ ಶೇ. 140ರಷ್ಟು ಅಧಿಕ ಮಳೆಯಾಗಿದೆ.
ಕಳೆದ 7 ದಿನಗಳಲ್ಲಿ ವಾಡಿಕೆಯಂತೆ ತಾಲೂಕಿನಲ್ಲಿ 185.7 ಮಿ.ಮೀ. ಮಳೆಯಾಬೇಕಿದ್ದು, 543 ಮಿ.ಮೀ. ಅಂದರೆ ಶೇ. 192 ರಷ್ಟು ಅಧಿಕ ಮಳೆಯಾಗಿದೆ. ಇದರ ಪರಿಣಾಮ ವರದಾ ನದಿ ಉಕ್ಕಿ ಹರಿಯುತ್ತಿದ್ದು, ಈ ನದಿಯ ನೀರು ತಾಳಗುಪ್ಪ ಹೋಬಳಿಯ 1,200 ಎಕರೆ ಭತ್ತದ ಗದ್ದೆಯನ್ನು ಜಲಾವೃತಗೊಳಿಸಿದೆ.
ಬಿಟ್ಟೂ ಬಿಡದೆ ಮಳೆ ಸುರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತಾತ್ಕಾಲಿಕವಾಗಿ ಅಡ್ಡಿ ಉಂಟಾಗಿದೆ. ನಾಟಿ ಮಾಡಲು ಸಿದ್ಧಪಡಿಸಿದ ಸಸಿ ಮಡಿಗಳಿಗೆ ಹಾನಿ ಉಂಟಾಗುತ್ತಿರುವುದು ಭತ್ತದ ಬೆಳೆಗಾರರಿಗೆ ಆತಂಕ ಉಂಟು ಮಾಡಿದೆ. ವ್ಯಾಪಕವಾಗಿರುವ ಅಡಕೆ ಬೆಳೆ ಕೂಡ ಬೋಡೋ ಸಿಂಪಡನೆಗೆ ಅವಕಾಶ ಸಿಕ್ಕದಿರುವುದರಿಂದ ಅಡಕೆ ಕಾಯಿ ಕೊಳೆರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ