Sagara: ಶಾಸಕ ಬೇಳೂರರಿಗೆ ತಾವಿರುವ ಪಕ್ಷದ ಕುರಿತೇ ಗೊಂದಲ; ಹೊನಗೋಡು ವ್ಯಂಗ್ಯ


Team Udayavani, Nov 10, 2023, 3:50 PM IST

9-sagara

ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಿಂದಿನಿಂದಲೂ ಮೂರು ತಿಂಗಳು ತಾವು ಪ್ರತಿನಿಧಿಸುವ ಪಕ್ಷವನ್ನು ಹೊಗಳುವುದು, ಆರು ತಿಂಗಳು ತೆಗಳುವುದು ಮಾಡಿಕೊಂಡು ಬಂದಿರುವುದು ಮಾಮೂಲಿ. ಸದ್ಯ ಅವರಿಗೆ ತಾವು ಯಾವ ಪಕ್ಷದಲ್ಲಿ ಇದ್ದೇವೆ ಎನ್ನುವುದೇ ಗೊತ್ತಿದ್ದಂತೆ ಕಾಣುತ್ತಿಲ್ಲ.  ತಮ್ಮದೇ ಪಕ್ಷದ ಜಿಲ್ಲಾ ಉಸ್ತುವಾರಿ ಸಚಿವರು ಯಾರೆಂದು ತಮಗೆ ಗೊತ್ತಿಲ್ಲ ಎನ್ನುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಟೀಕಿಸಿದರು.

ನ.10ರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಳೂರು ಅವರ ವರ್ತನೆಯಿಂದ ಕ್ಷೇತ್ರದ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುವಂತಾಗುತ್ತಿದೆ. ಸಾಗರ ಕ್ಷೇತ್ರವನ್ನು ಕಾಗೋಡು, ಎಲ್.ಟಿ.ತಿಮ್ಮಪ್ಪ ಹೆಗಡೆ, ಹರತಾಳು ಹಾಲಪ್ಪ ಅಂತಹವರು ಪ್ರತಿನಿಧಿಸಿ ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಗುರುತಿಸುವಂತಹ ಕೆಲಸ ಮಾಡಿದ್ದಾರೆ. ಆದರೆ ಇವರ ಅವಧಿಯಲ್ಲಿ ಹಿನ್ನಡೆ ಅನುಭವಿಸುವಂತೆ ಆಗಿದೆ ಎಂದು ದೂರಿದರು.

ಸಂಸದ ಬಿ.ವೈ.ರಾಘವೇಂದ್ರ ಬಗ್ಗೆ ಶಾಸಕ ಬೇಳೂರು ಪದೇಪದೇ ಕೇವಲವಾಗಿ ಮಾತನಾಡಿದರೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ. ದೇಶದಲ್ಲಿ ಅಭಿವೃದ್ಧಿಯ ವಿಚಾರದಲ್ಲಿ ಎರಡನೇ ಸ್ಥಾನದಲ್ಲಿರುವ ಬಿವೈಆರ್ ಲೋಕಸಭಾ ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿಕೊಂಡು ಬರಲು ಶಾಸಕ ಗೋಪಾಲಕೃಷ್ಣರಿಗೆ ಮೂರು ತಿಂಗಳು ಹಿಡಿಯುತ್ತದೆ ಎಂದು ವ್ಯಂಗ್ಯ ಚಾಟಿ ಬೀಸಿದರು.

ಸಂಸದ ಬಿ.ವೈ.ರಾಘವೇಂದ್ರರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪ ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ, ಏರ್‌ಪೋರ್ಟ್, ಸೇತುವೆ, ರೈಲ್ವೆ ಅಭಿವೃದ್ಧಿ ಸೇರಿದಂತೆ ಸಂಸದರ ಕಾರ್ಯವೈಖರಿ ಅನುಕರಣೀಯವಾದದ್ದು. ಬೇಳೂರಿಗೆ ಮೂರು ಬಾರಿ ಶಾಸಕನಾಗಿದ್ದೆ ಎನ್ನುವ ಹೆಗ್ಗಳಿಕೆ ಬಿಟ್ಟರೆ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದರು.

ಈ ಶಾಸಕರ ಬಗ್ಗೆ ವರ್ಗಾವಣೆ, ಹಾಲಪ್ಪ ಹರತಾಳು ತಂದ ಅನುದಾನ ದುರುಪಯೋಗ, ಮರಳು ಸಾಗಾಣಿಕೆಗಳಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವ ಮಾತು ಕ್ಷೇತ್ರವ್ಯಾಪ್ತಿಯಲ್ಲಿ ಚರ್ಚೆಯಲ್ಲಿದೆ. ಕೆಲವರು ಯೋಗ್ಯತೆ ಮೇಲೆ ಗೆದ್ದು ಬರುತ್ತಾರೆ. ಇನ್ನು ಕೆಲವರು ಯೋಗದ ಮೇಲೆ ಗೆದ್ದು ಬರುತ್ತಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಉಚಿತ ಭಾಗ್ಯ ಸೇರಿದಂತೆ ವಿವಿಧ ಯೋಗದಿಂದ ಗೆದ್ದು ಬಂದಿದ್ದಾರೆ. ಕಾಗೋಡು ತಿಮ್ಮಪ್ಪ ಭೀಷ್ಮರಿದ್ದಂತೆ. ಅವರು ನನ್ನ ಪಕ್ಕ ಇದ್ದರೆ ಗೆಲುವು ನಿಶ್ಚಿತ ಎಂದು ಹೇಳಿದ್ದವರು ಈಗ ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಮಧು ಬಂಗಾರಪ್ಪ, ಶಿವರಾಜ್ ಕುಮಾರ್ ರ‍್ಯಾಲಿ ನಡೆಸಿ ಹೆಚ್ಚಿನ ಮತ ತರುವಲ್ಲಿ ಶ್ರಮಿಸಿದ್ದರು. ಈಗ ನನ್ನ ಗೆಲುವಿಗೆ ನಾನೇ ಕಾರಣ ಎನ್ನುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಹಗರಣದ ಬಗ್ಗೆ ಮಾತನಾಡುವ ಬೇಳೂರಿಗೆ ಅವರದ್ದೇ ಪಕ್ಷ ಅಧಿಕಾರದಲ್ಲಿದೆ. ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಕ್ಷೇತ್ರ ವಿಂಗಡಣೆ ಅವೈಜ್ಞಾನಿಕವಾಗಿದೆ. ಏನೇ ಆದರೂ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತದೆ ಎಂದರು.

ಗೋಷ್ಠಿಯಲ್ಲಿ ಭರ್ಮಪ್ಪ ಅಂದಾಸುರ, ರೇವಪ್ಪ ಕೆ.ಹೊಸಕೊಪ್ಪ, ನಟರಾಜ ಗೇರುಬೀಸು, ಶಾಂತಪ್ಪ ಗೌಡ, ಶಿವಾನಂದ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.