ಇಂದಿನಿಂದ ಪಾನಿಪುರಿ ಮಾರಾಟ ಬಂದ್
Team Udayavani, Jul 5, 2020, 12:33 PM IST
ಸಾಗರ: ಪಾನಿಪುರಿ ಮತ್ತು ಗೋಬಿ ಮಂಚೂರಿ ಮಾರಾಟಗಾರರ ಸಂಘ ಸಭೆ ನಡೆಸಿ ಭಾನುವಾರದಿಂದ ವ್ಯಾಪಾರ ನಿಲ್ಲಿಸಲು ನಿರ್ಧರಿಸಿದೆ.
ಸಾಗರ: ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜು. 5ರ ಭಾನುವಾರದಿಂದ ನಗರದಲ್ಲಿ 10 ದಿನಗಳ ಕಾಲ ಪಾನಿಪುರಿ ಮಸಾಲಾಪುರಿ ಮತ್ತು ಗೋಬಿ ಮಂಚೂರಿ ಮಾರಾಟ ಮಾಡದಿರಲು ಶುಕ್ರವಾರ ಪಾನಿಪುರಿ ಮತ್ತು ಗೋಬಿ ಮಂಚೂರಿ ಮಾರಾಟಗಾರರ ಸಂಘದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಈ ಸ್ವಯಂ ನಿರ್ಣಯ ಕೈಗೊಳ್ಳಲಾಗಿದ್ದು, ಸಂಘವು ಮುಂದಿನ ಆದೇಶ ನೀಡುವವರೆಗೂ ಸಂಘದ ನೊಂದಾಯಿತ ಸದಸ್ಯರು ಬೀದಿಬದಿ ಮತ್ತು ಅಧಿಕೃತ ಅಂಗಡಿಗಳಲ್ಲಿ ವ್ಯಾಪಾರ ನಡೆಸುವಂತಿಲ್ಲ ಎಂದು ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಾನಿಪುರಿ ಮಂಜುನಾಥ್, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮತ್ತು ಸ್ಥಳೀಯ ಆಡಳಿತದ ಜೊತೆ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಸಂಘದಲ್ಲಿ 60 ಜನ ಸದಸ್ಯರಿದ್ದು, ಈ ವ್ಯಾಪಾರದಿಂದ ಜೀವನ ನಡೆಯಬೇಕಾಗಿದೆ. ಆದರೂ ನಮ್ಮ ಜೀವನಕ್ಕಿಂತ ಸಾರ್ವಜನಿಕರ ಆರೋಗ್ಯ ನಮಗೆ ಮುಖ್ಯ. ಈ ಹಿನ್ನೆಲೆಯಲ್ಲಿ ವ್ಯಾಪಾರವನ್ನು ಭಾನುವಾರದಿಂದ ಸಂಪೂರ್ಣವಾಗಿ ನಿಲ್ಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಡಿ.ತುಕಾರಾಮ್, ಪ್ರಮುಖರಾದ ಸುಭಾಷ್ ಕೌತಳ್ಳಿ, ಶರತ್, ಗಜೇಂದ್ರ, ರೂಪಾ, ಸುಬ್ಬಣ್ಣ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ