Sagara: ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ

ಅಳಿವಿನಂಚಿನಲ್ಲಿರುವ ಪ್ರಾಣಿಗಳ ಮೊದಲ ಪಟ್ಟಿಯಲ್ಲಿದೆ

Team Udayavani, Oct 30, 2023, 8:47 PM IST

1-sadssad

ಸಾಗರ: ತಾಲೂಕಿನ ಹೆಗ್ಗೋಡು ಸಮೀಪದ ಗಡಿಕಟ್ಟೆಯ ಬಳಿ ರಸ್ತೆ ಪಕ್ಕದಲ್ಲಿ ಸೋಮವಾರ ಅಸ್ವಸ್ಥ ಸ್ಥಿತಿಯಲ್ಲಿದ್ದ ಅಪರೂಪದ ಚಿರತೆ ಬೆಕ್ಕು ಪತ್ತೆಯಾಗಿದೆ. ಲೆಪರ್ಡ್ ಕ್ಯಾಟ್ ಎಂದು ಕರೆಸಿಕೊಳ್ಳುವ ಈ ಚಿರತೆ ಬೆಕ್ಕನ್ನು ಗಮನಿಸಿ ನಾಯಿಗಳು ದಾಳಿ ಮಾಡಲು ಪ್ರಯತ್ನಿಸಿವೆ. ಈ ವೇಳೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತೀರಾ ಗಂಭೀರ ಸ್ಥಿತಿಯಲ್ಲಿದ್ದ ಸುಮಾರು ಆರು ವರ್ಷದ ವಯಸ್ಸಿನದೆಂದು ಅಂದಾಜಿಸಲಾಗಿರುವ ಚಿರತೆ ಬೆಕ್ಕನ್ನು ತತ್ ಕ್ಷಣ ಅರಣ್ಯ ಇಲಾಖೆ ಶಿವಮೊಗ್ಗದ ತಾವರೆಕೊಪ್ಪದಲ್ಲಿ ಚಿಕಿತ್ಸೆ ಕೊಡಿಸುವಲ್ಲಿ ಯಶಸ್ವಿಯಾಗಿದೆ.

ಈ ಕುರಿತಂತೆ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸಿರುವ ತಾವರೆಕೊಪ್ಪದ ಪಶು ವೈದ್ಯ ಡಾ. ಮುರುಳಿ ಮೋಹನ್ ಪತ್ರಿಕೆಯೊಂದಿಗೆ ಮಾತನಾಡಿ, ಸುಮಾರು ಮಧ್ಯಾಹ್ನ ಮೂರೂವರೆ ಸಮಯದಲ್ಲಿ ನಮ್ಮಲ್ಲಿಗೆ ಕರೆತರಲಾದ ತುಂಬಾ ನಿಶ್ಯಕ್ತ ಸ್ಥಿತಿಯಲ್ಲಿದ್ದ ಚಿರತೆ ಬೆಕ್ಕು ಆಹಾರ ಸ್ವೀಕರಿಸಿಲ್ಲ. ಆದರೆ ಅದಕ್ಕೆ ಡ್ರಿಪ್ ನೀಡಿದ ನಂತರದಲ್ಲಿ ಒಮ್ಮೆ ಚೇತರಿಸಿಕೊಂಡು ಓಡಾಡಿದೆ. ಸ್ವಭಾವ ಸಹಜವಾಗಿ ಕಚ್ಚುವ ಪ್ರಯತ್ನ ನಡೆಸಿತ್ತು. ಆದರೆ ಅದರ ಪರಿಸ್ಥಿತಿ ಗಂಭೀರವಾಗಿಯೇ ಇದೆ. ನಾವು ಅದನ್ನು ಉಳಿಸುವ ಪೂರ್ಣ ಪ್ರಯತ್ನದಲ್ಲಿದ್ದೇವೆ. ಆದರೆ ಮಂಗಳವಾರ ಬೆಳಗಿನವರೆಗೆ ಏನನ್ನೂ ಹೇಳಲಾಗುವುದಿಲ್ಲ ಎಂದರು.

ಮೇಲ್ನೋಟದ ಪರಿಶೀಲನೆಯಂತೆ ಯಾವುದೇ ಅಪಘಾತದಿಂದ ಗಾಯಗೊಂಡಿಲ್ಲ ಅಥವಾ ಯಾರೋ ಹೊಡೆದು ಹಾಕಿದಂತಿಲ್ಲ. ಈ ಕುರಿತಂತೆ ಎಕ್ಸರೇ ತೆಗೆಯಲಾಗಿದೆ. ವಿಷಪ್ರಾಶನದ ಕುರಿತಾಗಿಯೂ ಮೊದಲ ವೀಕ್ಷಣೆಯಲ್ಲಿ ಅನುಮಾನ ವ್ಯಕ್ತವಾಗುತ್ತಿಲ್ಲ. ಈ ಸಂಬಂಧ ರಕ್ತವನ್ನು ಸಂಗ್ರಹಿಸಿ ಪ್ರಯೊಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಆ ವರದಿ ಸ್ಪಷ್ಟ ಚಿತ್ರಣ ಕೊಡಲಿದೆ ಎಂದರು.

ಲೆಪರ್ಡ್ ಕ್ಯಾಟ್‌ನ ಕುರಿತಾಗಿ ಮಾಹಿತಿ ನೀಡಿದ ಅವರು, ಇದು ಅಳಿವಿನಂಚಿನಲ್ಲಿರುವ ಪ್ರಾಣಿಗಳ ಮೊದಲ ಪಟ್ಟಿಯಲ್ಲಿಯೇ ಇದೆ. ಮಲೆನಾಡು ಭಾಗದಲ್ಲಿ ಇವುಗಳ ವಸತಿ ಕಾಣಿಸುತ್ತದೆಯಾದರೂ ರಾತ್ರಿ ವೇಳೆಯೇ ಸಂಚರಿಸುವುದರಿಂದ ಅವುಗಳು ಜನರ ಗಮನಕ್ಕೆ ಬರುವುದಿಲ್ಲ. ಇಂತಹ ಅಪರೂಪದ ಪ್ರಾಣಿಯನ್ನು ಉಳಿಸುವ ಪ್ರಯತ್ನ ನಮ್ಮ ತಂಡದ್ದು. ಇದನ್ನು 24 ಘಂಟೆಗಳ ಪರಿವೀಕ್ಷಣೆಯಲ್ಲಿ ಇಡಲಾಗಿದೆ ಎಂದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.