ಸರ್ಕಾರಿ ಶಾಲೆಗೆ ಕಾಯಕಲ್ಪ: ಸುರೇಶ್‌ಕುಮಾರ್‌

ಇನ್ಫೋಸಿಸ್‌ ನೇತೃತ್ವದಲ್ಲಿ ರಾಜ್ಯದ 1 ಸಾವಿರ ಶಾಲೆಗಳಲ್ಲಿ ಕಂಪ್ಯೂಟರ್‌ ಸ್ಮಾರ್ಟ್‌ಕ್ಲಾಸ್‌ ಆರಂಭ

Team Udayavani, Feb 29, 2020, 12:48 PM IST

29-February-12

ಸಾಗರ: ಬೆಂಗಳೂರಿನ ಸುಧಾಮೂರ್ತಿ ಮಾರ್ಗದರ್ಶನದ ಇನ್ಫೊಧೀಸಿಸ್‌ ನೇತೃತ್ವದಲ್ಲಿ ರಾಜ್ಯದ 1 ಸಾವಿರ ಶಾಲೆಗಳಿಗೆ ಕಂಪ್ಯೂಟರ್‌ ಸ್ಮಾರ್ಟ್‌ಕ್ಲಾಸ್‌, ಒಂದು ಸಾವಿರ ಶಿಕ್ಷಕರಿಗೆ ವಿಜ್ಞಾನ ವಿಷಯದಲ್ಲಿ ವಿಶೇಷ ತರಬೇತಿ ಮತ್ತು ಮೊದಲ ಹಂತದಲ್ಲಿ 10 ಶಾಲೆಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್‌ ಎಸ್‌.ತಿಳಿಸಿದರು.

ತಾಲೂಕಿನ ಕೆಳದಿಯಲ್ಲಿ ಶುಕ್ರವಾರ ಕೆಳದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಸರಸ್ವತಿ ಪುತ್ಥಳಿ, ಸ್ಮಾರ್ಟ್‌ಕ್ಲಾಸ್‌, ನೂತನ ಮಹಾದ್ವಾರ, ಹಿರಿಯ ಶಿಕ್ಷಕರು ಹಾಗೂ ದಾನಿಗಳಿಗೆ ಸನ್ಮಾನ ಮತ್ತು ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಆಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳು ಲಾಸ್ಟ್‌ ಬೆಲ್‌ ಸಂದರ್ಭದಲ್ಲಿ ಸಂತೋಷ ಪಡುತ್ತಾರೆ. ಅದರ ಬದಲು ಮಕ್ಕಳು ಶಾಲಾವ ಧಿಯ ಎಲ್ಲ ಹಂತದಲ್ಲೂ ಸಂತೋಷಪಡಬೇಕು. ಲಾಸ್ಟ್‌ ಬೆಲ್‌ ಸಂದರ್ಭದಲ್ಲಿ ಮಕ್ಕಳು ಶಾಲೆಯಿಂದ ಮನೆಗೆ ಹೋಗಬೇಕಲ್ಲ ಎಂದು ಬೇಸರಪಟ್ಟುಕೊಳ್ಳುವ ವಾತಾವರಣ ನಿರ್ಮಾಣವಾಗಬೇಕು. ಸರ್ಕಾರಿ ಶಾಲೆಗಳ ಮೇಲೆ ಪೋಷಕರ ವಿಶ್ವಾಸಾರ್ಹತೆ ಹೆಚ್ಚಬೇಕು. ಜೊತೆಗೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಸರದಿಯಲ್ಲಿ ನಿಲ್ಲುವಂತೆ ಆಗಬೇಕು ಎಂದು ತಿಳಿಸಿದರು.

ಬೆಂಗಳೂರಿನಂತ ನಗರದಲ್ಲಿ ಕೂಲಿ ಕಾರ್ಮಿಕರ ಮಕ್ಕಳನ್ನು ಸಹ ಖಾಸಗಿ ಶಾಲೆಗೆ ಸೇರಿಸಲಾಗುತ್ತಿದೆ. ತಮ್ಮ ದುಡಿಮೆಯ ಶೇ. 40 ಭಾಗವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನೇ ಅಭಿವೃದ್ಧಿಪಡಿಸಿ ಎಲ್ಲ ಮಕ್ಕಳು ಅಲ್ಲಿಯೇ ಶಿಕ್ಷಣ ಪಡೆಯಬೇಕು. ಕೂಲಿ ಕಾರ್ಮಿಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡುವ ಶೇ. 40 ಹಣವನ್ನು ಅವರ ಕುಟುಂಬ ನಿರ್ವಹಣೆಗೆ ಬಳಸುವಂತಹ ವಾತಾವರಣ ನಿರ್ಮಾಣ ಮಾಡಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನ ಕೋರಿದ್ದು, ಕೊಡುವ ಭರವಸೆ ನೀಡಿದ್ದಾರೆ. ಇಂತಹ ಶತಮಾನೋತ್ಸವ ಸಂಭ್ರಮ ಆಚರಣೆ ಮಾಡುತ್ತಿರುವ ಶಾಲೆಗಳು ಇತರ ಶಾಲೆಗಳಿಗೆ ಮಾದರಿಯಾಗಬೇಕು ಎಂದು ಹೇಳಿದರು.

“ಶತಾಕ್ಷರ’ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಚ್‌. ಹಾಲಪ್ಪ ಹರತಾಳು, ಶಾಲೆಯೊಂದು ನೂರು ವರ್ಷ ಪೂರೈಸಿದೆ ಎಂದರೆ ಅದು ಸದಾ ನೆನಪಿನಲ್ಲಿ ಉಳಿಯುವ ಮೈಲಿಗಲ್ಲು. ಇಂತಹ ಸಂದರ್ಭದಲ್ಲಿ ಶಾಲಾ ನಿರ್ಮಾಣಕ್ಕೆ ಶ್ರಮಿಸಿದ ಹಿರಿಯರನ್ನು ನೆನಪು ಮಾಡಿಕೊಳ್ಳುವ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಶಾಲೆಗಳಿಗೆ ದೇಣಿಗೆ ಕೊಡಲು ಹೆಚ್ಚು ಜನ ಆಸಕ್ತಿ ತೋರಿಸುತ್ತಾರೆ. ಅಂತಹವರ ಸಹಕಾರವನ್ನು ಪಡೆಯುವ ಮೂಲಕ ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಪ್ರಯತ್ನ ನಡೆಯಬೇಕು. ಅನೇಕ ಕನಸುಗಳನ್ನು ಕಟ್ಟಿಕೊಂಡು ಶಾಲೆಗೆ ಬರುವ ಮಕ್ಕಳಿಗೆ ಸರ್ಕಾರ, ಮಂತ್ರಿಗಳು, ನಮ್ಮಂತಹ ಜನಪ್ರತಿನಿಧಿಗಳು ಶಾಲೆಗೆ ಮೂಲ ಸೌಲಭ್ಯ ಒದಗಿಸುವ ಮೂಲಕ
ಕನಸು ನನಸಾಗಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಕೆಳದಿ ರಾಜಗುರು ಹಿರೇಮಠದ ಡಾ| ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು, ಕೆಳದಿ ನಾಡಿಗೆ ಹೆಸರು ತಂದುಕೊಟ್ಟ ಊರಾಗಿದೆ. ಇಂತಹ ಊರಿನಲ್ಲಿ ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ ಎಂದರೆ ಅದು ಇನ್ನೊಂದು ಹೆಗ್ಗಳಿಕೆ ಸಂಗತಿ. ಶಾಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

ಶಾಲಾಭಿವೃದ್ಧಿ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ರಮೇಶ್‌ ಜಿ.ಕೆ. ಕಾರ್ಯಾಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಬಿ.ಎಚ್‌.ಮಲ್ಲಿಕಾರ್ಜುನ ಹಕ್ರೆ, ಉಪಾಧ್ಯಕ್ಷ ಅಶೋಕ ಬರದವಳ್ಳಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಕೆಳದಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ರಾಮಕೃಷ್ಣ, ಉಪಾಧ್ಯಕ್ಷ ರಾಮಚಂದ್ರ ಕೆ.ಪಿ., ಸದಸ್ಯರಾದ ಜಯಶ್ರೀ, ಶೇಕ್‌ ಅಲಿಸಾಬ್‌, ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್‌ ಎಂ.ಎನ್‌. ಕ್ಷೇತ್ರ ಶಿಕ್ಷಣಾಧಿ ಕಾರಿ ಬಿಂಬಾ ಕೆ.ಆರ್‌., ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ ಇನ್ನಿತರರು ಇದ್ದರು.

ಸುಭಾಷ್‌ ಕೆ.ಎಂ. ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅರುಣಕುಮಾರ್‌ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್‌.ಎಸ್‌. ರಮೇಶ್‌ ಹಾರೆಗೊಪ್ಪ ವಂದಿಸಿದರು. ರೆಹನಾ ಬಾನು ಮತ್ತು ನಳಿನಾಕ್ಷಿ ಭಟ್‌
ನಿರೂಪಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.