ಸಾಗರ; ಆರು ಕಡೆ ಸೀಲ್‌ಡೌನ್‌


Team Udayavani, Jul 8, 2020, 3:40 PM IST

8-July-11

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಾಗರ: ನಗರ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಕೋವಿಡ್ ಸೋಂಕಿತರ ಪಾಸಿಟಿವ್‌ ವರದಿ ಬಂದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಒಟ್ಟು 6 ಕಡೆಗಳಲ್ಲಿ ಸೀಲ್‌ ಡೌನ್‌ ಮಾಡಿದೆ. ಮಂಗಳವಾರ ತಾಲೂಕಿನ ಮಟ್ಟಿಗೆ ಯಾವುದೇ ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ದಾಖಲಾಗಿಲ್ಲ.

ಇಕ್ಕೇರಿ ರಸ್ತೆ, ಮಾರ್ಕೆಟ್‌ ರಸ್ತೆ, ಕೆಳದಿ ರಸ್ತೆ, ಮೆಸ್ಕಾಂ ಕಚೇರಿ ವ್ಯಾಪ್ತಿ, ಸುಭಾಷ್‌ ನಗರ ಹಾಗೂ ಶ್ರೀಧರ ನಗರದ ಭಾಗಗಳಲ್ಲಿ ಸೀಲ್‌ ಡೌನ್‌ ಪ್ರದೇಶ ಹಾಗೂ ಬಫರ್‌ ಝೋನ್‌ಗಳನ್ನು ನಿಗದಿಪಡಿಸಿದೆ. ನಂದೀಶ್‌, ವಿಷ್ಣುಮೂರ್ತಿ, ಕೆ.ಮಂಜಪ್ಪ, ಹರೀಶ್‌ ಅವರನ್ನು ಇನ್ಸಿಡೆಂಟ್‌ ಕಮಾಂಡರ್‌ಗಳನ್ನಾಗಿ ನೇಮಕ ಮಾಡಲಾಗಿದೆ. ಸೀಲ್‌ಡೌನ್‌ ಪ್ರದೇಶದ ಜನರ ಅಗತ್ಯ ವಸ್ತುಗಳನ್ನು ಪೂರೈಸುವ ಜವಾಬ್ದಾರಿ ನಗರಸಭೆ ಅಧಿಕಾರಿ ಪ್ರಭಾಕರ್‌ ನೇತೃತ್ವದಲ್ಲಿ ನಡೆದಿದೆ. ಆದರೆ ಸೀಲ್‌ಡೌನ್‌ ಪ್ರದೇಶದ ಜನ ಕಣ್ಣು ತಪ್ಪಿಸಿ ನಗರದಲ್ಲಿ ಓಡಾಡುತ್ತಿದ್ದಾರೆ ಎಂಬ ದೂರು ಸಹ ಕೇಳಿಬಂದಿದೆ.

ಕೆಳದಿ ರಸ್ತೆ ಹಾಗೂ ಅಣೆಲೆಕೊಪ್ಪ ವ್ಯಾಪ್ತಿ 310 ಜನರಿರುವ 86 ಮನೆಗಳನ್ನು ಹಾಗೂ 7 ಅಂಗಡಿಗಳಿರುವ ಪ್ರದೇಶವನ್ನು ಸೀಲ್‌ ಡೌನ್‌ ಮಾಡಿದೆ. 1,926 ಜನರಿರುವ 630 ಮನೆಗಳನ್ನು ಮತ್ತು 12 ಅಂಗಡಿಗಳ ವ್ಯಾಪ್ತಿಯನ್ನು ಬಫರ್‌ ಝೋನ್‌ ಎಂದು ಪರಿಗಣಿಸಲಾಗಿದೆ. ಸುಭಾಷ್‌ ನಗರದಲ್ಲಿನ 12 ಮನೆಗಳ, 54 ನಿವಾಸಿಗಳಿರುವ ಪ್ರದೇಶವನ್ನು ಸೀಲ್‌ ಡೌನ್‌ ಮಾಡಲಾಗಿದ್ದು, ಈ ಭಾಗದಲ್ಲಿ 7 ಅಂಗಡಿಗಳು, 2 ನ್ಯಾಯಬೆಲೆ ಅಂಗಡಿ ಹಾಗೂ ತಲಾ ಒಂದು ಅಂಗನವಾಡಿ, ಖಾನಾವಳಿ ಸೀಲ್‌ ಡೌನ್‌ ಆಗಿದೆ. ಬಫರ್‌ ಝೋನ್‌ ವ್ಯಾಪ್ತಿಯಲ್ಲಿ 1386 ನಿವಾಸಿಗಳ 320 ಮನೆಗಳನ್ನು ಮತ್ತು 25 ಅಂಗಡಿಗಳನ್ನು ಪರಿಗಣಿಸಲಾಗಿದೆ.

ಶ್ರೀಧರ ನಗರ ಪ್ರದೇಶದಲ್ಲಿ 60 ಮನೆಗಳಲ್ಲಿನ 257 ಜನರು ವಾಸಿಸುವ ಹಾಗೂ 2 ಅಂಗಡಿಗಳಿರುವ ಭಾಗವನ್ನು ಸೀಲ್‌ ಡೌನ್‌ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿನ 1947 ನಿವಾಸಿಗಳಿರುವ 400 ಮನೆಗಳನ್ನು, 4 ಅಂಗಡಿಗಳನ್ನು ಹಾಗೂ 2 ಮರ ಕೈಗಾರಿಕೆ ಘಟಕಗಳನ್ನು ಬಫರ್‌ಝೋನ್‌ ಪ್ರದೇಶ ಎಂದು ಗುರುತಿಸಲಾಗಿದೆ. ಜೆಸಿ ರಸ್ತೆಯಲ್ಲಿ ಔಷಧ ಅಂಗಡಿಯ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪಾಸಿಟಿವ್‌ ವರದಿಯಾದ ಹಿನ್ನೆಲೆಯಲ್ಲಿ 100 ಮೀಟರ್‌ ವ್ಯಾಪ್ತಿಯ ಎಲ್ಲಾ ಅಂಗಡಿಗಳನ್ನು ಬಂದ್‌ ಮಾಡಿಸಲಾಗಿದ್ದು, ಔಷಧ ಅಂಗಡಿಗೆ ಅವಕಾಶ ನೀಡಲಾಗಿದೆ.

ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಪಾಸಿಟಿವ್‌ ವರದಿಯಾದ ವ್ಯಕ್ತಿ ಕೆಲಸ ಮಾಡುತ್ತಿದ್ದ ಔಷಧ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಉಳಿದ 7 ಜನರ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರಿಗೆ ಹೋಂ ಕ್ವಾರೆಂಟೈನ್‌ ಪಾಲಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಈ ನಡುವೆ ಸೋಂಕಿತ ವ್ಯಕ್ತಿಯನ್ನು ಉಡುಪಿಯಲ್ಲಿಯೇ ಕ್ವಾರಂಟೈನ್‌ ಮಾಡಲಾಗಿದೆ. ಮಂಗಳವಾರ ಸಾಗರದಲ್ಲಿ ಒಟ್ಟು 75 ಗಂಟಲು ದ್ರವದ ಮಾದರಿಗಳನ್ನು ಪಡೆದು ಶಿವಮೊಗ್ಗಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.