ಸಿಗಂದೂರು ಚೌಡೇಶ್ವರಿ ಜಾತ್ರೆಗೆ ಚಾಲನೆ
ಚಂಡಿಕಾ ಹೋಮ, ವಿವಿಧ ಧಾರ್ಮಿಕ ಕಾರ್ಯಕ್ರಮ ಸಾವಿರಾರು ಭಕ್ತರಿಂದ ದರ್ಶನ
Team Udayavani, Jan 15, 2020, 4:37 PM IST
ಸಾಗರ: ತಾಲೂಕಿನ ಸಿಗಂದೂರು ಕ್ಷೇತ್ರದ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಇಲ್ಲಿನ ಪ್ರಧಾನ ಅರ್ಚಕ ಶೇಷಗಿರಿ ಭಟ್ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಸಾಗರ ಕ್ಷೇತ್ರದ ಶಾಸಕ ಎಚ್. ಹಾಲಪ್ಪ ಕುಟುಂಬ ಸಮೇತ ವಿವಿಧ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದರು. ಚೌಡೇಶ್ವರಿಯ ಮೂಲ ಸ್ಥಾನವಾದ ಸೀಗೇಕಣಿವೆಯಲ್ಲಿ ಬೆಳಗ್ಗೆ 7 ಗಂಟೆಗೆ ಪ್ರಥಮ ಪೂಜೆ ನಡೆಯಿತು. ಕುಂಭ ಕಳಸ ಹೊತ್ತ ಮಹಿಳೆಯರನ್ನು ಒಳಗೊಂಡ ವೈವಿಧ್ಯಮಯ ಕಲಾ ತಂಡಗಳೊಂದಿಗೆ ಜ್ಯೋತಿ ರೂಪದಲ್ಲಿ ಆಗಮಿಸಿದ ದೇವಿಯ ಮೆರವಣಿಗೆಯನ್ನು ಕ್ಷೇತ್ರದಲ್ಲಿ ಬರಮಾಡಿಕೊಳ್ಳಲಾಯಿತು. ದೇವಿಗೆ ವಿಶೇಷ ಹೂವಿನ ಹಾಗೂ ಆಭರಣ ಅಲಂಕಾರ ಮಾಡಲಾಗಿತ್ತು. ಹಲವು ಪೂಜೆಗಳು, ಚಂಡಿಕಾ ಹೋಮ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅನ್ನ ದಾಸೋಹ ನಡೆಸಲಾಯಿತು.
ಸಂಜೆ 5.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 10.30ಕ್ಕೆ ಸಿಗಂದೂರು ಮೇಳದವರಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಸಿಗಂದೂರು ರಾಮಪ್ಪ ದಂಪತಿ, ಸಾಗರ ನಗರಸಭಾ ಸದಸ್ಯೆ ಮೈತ್ರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ