ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಮೂವರು ಸಾವು
Team Udayavani, May 5, 2020, 12:59 PM IST
ಶಿವಮೊಗ್ಗ: ಒಬ್ಬ ಬಾಲಕ ಸೇರಿದಂತೆ ಮೂವರು ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸೊರಬ ತಾಲೂಕು ತ್ಯಾವರೆತೆಪ್ಪ ಗ್ರಾಮದಲ್ಲಿ ನಡೆದಿದೆ.
ತ್ಯಾವರೆತೆಪ್ಪ ಗ್ರಾಮದ ಬಸವರಾಜ್ (45), ಬಸವರಾಜ್ ಅವರ ಮಗ ಆಕಾಶ್(14) ಹಾಗೂ ಶಿವಮೂರ್ತಿ(49) ಮೃತಪಟ್ಟವರು. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ಮೂವರು ತ್ಯಾವರೆತೆಪ್ಪ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದರು.
ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಇವರು ರಾತ್ರಿ ವೇಳೆ ಮೀನು ಹಿಡಿಯಲು ಹೋಗಿದ್ದರು. ಇಂದು ಬೆಳಗಿನ ಜಾವ ಮೂವರ ಶವಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಗಿದೆ.
ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಕಾರ್ಯಾಚರಣೆ ನಡೆಸಿ ಇಂದು ಬೆಳಗಿನ ಜಾವ ಕೆರೆಯಿಂದ ಶವ ಮೇಲಕ್ಕೆತ್ತಿದ್ದಾರೆ. ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ