Sagara: ಸರಗಳ್ಳತನ; ಇಬ್ಬರು ಆರೋಪಿಗಳ ಬಂಧನ
Team Udayavani, Oct 1, 2023, 9:00 PM IST
ಸಾಗರ: ಸಿನಿಮೀಯ ಮಾದರಿಯಲ್ಲಿ ಕಳೆದ ತಿಂಗಳ 15ರಂದು ಇಲ್ಲಿನ ವಿನೋಬಾ ನಗರದಲ್ಲಿ ಪಾದಚಾರಿ ಒಂಟಿ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಕೊರಳಿನ ಸರ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರದಲ್ಲಿ ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಅಫಜಲ್ ಹಾಗೂ ಶಿರಸಿಯ ರಮಾನಬೈಲ್ನ ಫೈಜಾನ್ ಬಂಧಿತ ಆರೋಪಿಗಳು.
ಭಟ್ಕಳ, ಯಲ್ಲಾಪುರ ಹಾಗೂ ಹೊನ್ನಾವರದಲ್ಲಿ ಇವರ ವಿರುದ್ಧ ಮನೆ ಕಳವು ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಶನಿವಾರ ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದ ಸಂದರ್ಭದಲ್ಲಿ ಸಾಗರದ ಸರ ಕಳುವು ಪ್ರಕರಣದಲ್ಲಿಯೂ ಆರೋಪಿಗಳು ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳಿಂದ 55 ಗ್ರಾಂ ಬಂಗಾರ, ಘಟನೆಗೆ ಬಳಸಿದ್ದ ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ. ಇದಕ್ಕೂ ಮೊದಲು ಶಿರಸಿ, ಮುಂಡಗೋಡಿನಲ್ಲಿ ಕೂಡ ಕಳವು ಪ್ರಕರಣ ಇವರ ಮೇಲೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Rahul Gandhi: 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ – ರಾಹುಲ್ ಗಾಂಧಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ