ಸಕ್ರೆಬೈಲಿನಿಂದ 2 ಆನೆಗಳ ಮಧ್ಯಪ್ರದೇಶಕ್ಕೆ ರವಾನೆ
Team Udayavani, Feb 2, 2023, 11:05 PM IST
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಿಂದ ಗುರುವಾರ ಎರಡು ಆನೆಗಳನ್ನು ಮಧ್ಯಪ್ರದೇಶದ ಕಾನ್ಹಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು. ನಾಲ್ಕು ಆನೆಗಳನ್ನು ಕಳುಹಿಸಲು ಈ ಹಿಂದೆ ಬೇಡಿಕೆ ಸಲ್ಲಿಸಲಾಗಿತ್ತು. ಕೊನೆ ಗಳಿಗೆಯಲ್ಲಿ ಎರಡು ಆನೆಗಳನ್ನು ಮಾತ್ರ ಕರೆದುಕೊಂಡು ಹೋಗುತ್ತಿದ್ದಾರೆ.
26 ವರ್ಷದ ರವಿ ಹಾಗೂ 7 ವರ್ಷದ ಶಿವ ಆನೆಗಳನ್ನು ಲಾರಿಗಳಲ್ಲಿ ಮಧ್ಯಪ್ರದೇಶದತ್ತ ಕೊಂಡೊಯ್ಯಲಾಯಿತು. 37 ವರ್ಷದ ಮಣಿಕಂಠ ಹಾಗೂ 36 ವರ್ಷದ ಬೆಂಗಳೂರು ಗಣೇಶ ಆನೆಗಳನ್ನು ಕೊನೆ ಗಳಿಗೆಯಲ್ಲಿ ಕೈಬಿಡಲಾಗಿದೆ. ಇವೆರಡು ಆನೆಗಳು ಉಗ್ರ ಸ್ವಭಾವದಾಗಿದ್ದು ಈಗಾಗಲೇ 35, 36 ವರ್ಷ ಆಗಿರುವುದರಿಂದ ಪಳಗಿಸುವುದು ಕಷ್ಟ ಎಂಬ ಕಾರಣಕ್ಕೆ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೆ ಮೂರು ಆನೆಗಳು ಬೇಕಾಗಿದ್ದು ಒಂದೂವರೆ ತಿಂಗಳಲ್ಲಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಒಟ್ಟು 14 ಆನೆಗಳನ್ನು ಕರ್ನಾಟಕದ ವಿವಿಧ ಬಿಡಾರಗಳಿಂದ ಕೊಂಡೊಯ್ಯಲು ಮಧ್ಯಪ್ರದೇಶ ಸರಕಾರ ಅನುಮತಿ ಪಡೆದಿದೆ. ಕಾನ್ಹಾ ಅಭಯಾರಣ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿದ್ದು ಈ ಆನೆಗಳನ್ನು ಗಸ್ತು ತಿರುಗಲು ಬಳಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
MUST WATCH
ಹೊಸ ಸೇರ್ಪಡೆ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!