ಕಾಡಾನೆ ದಾಳಿ: ಸಕ್ರೆಬೈಲು ಬಿಡಾರದ ‘ರಂಗ’ ಆನೆ ಸಾವು
Team Udayavani, Oct 24, 2020, 11:21 AM IST
ಶಿವಮೊಗ್ಗ: ಕಾಡಾನೆ ದಾಳಿಗೆ ಸಕ್ರೆಬೈಲು ಆನೆ ಬಿಡಾರದ ಅತ್ಯಂತ ಆಕರ್ಷಣೆಯ ಆನೆ ‘ರಂಗ’ ಸಾವನ್ನಪ್ಪಿದೆ.
ತನ್ನ ಮೈಕಟ್ಟಿನಿಂದಲೇ ಎಲ್ಲರನ್ನೂ ಆಕರ್ಷಿಸಿದ್ದ 35 ವರ್ಷದ ಆನೆ ರಂಗ ಕಳೆದ ರಾತ್ರಿ ನಡೆದ ಕಾಡಾನೆ ಜೊತೆಗಿನ ಕಾಳಗದಲ್ಲಿ ಸಾವನ್ನಪ್ಪಿದೆ.
ಆನೆ ಶಿಬಿರದಲ್ಲಿ ರಂಗ ಆನೆಯನ್ನು ಸರಪಳಿಯಲ್ಲಿ ಕಟ್ಟಿಹಾಕಲಾಗಿತ್ತು. ಕಳೆದ ರಾತ್ರಿ ಕಾಡಾನೆಯೊಂದು ಶಿಬಿರಕ್ಕೆ ಏಕಾಏಕಿ ದಾಳಿ ಮಾಡಿದ್ದು, ರಂಗ ಆನೆಯ ಮೇಲೆರಗಿದೆ. ಸರಪಳಿಯಲ್ಲಿ ಭಂದಿಯಾಗಿದ್ದ ರಂಗ ಅಸಹಾಯಕನಾಗಿ ಕಾಡಾನೆಯ ದಂತ ತಿವಿತಕ್ಕೆ ಬಲಿಯಾಗಿದ್ದಾನೆ.
ರಂಗ ಸಕ್ರೆಬೈಲು ಕ್ಯಾಂಪ್ ನಲ್ಲಿ ಹುಟ್ಟಿದ್ದ. ಇಲ್ಲಿನ ಗೀತಾ ಆನೆಯ ಮರಿಯಾಗಿದ್ದ ರಂಗ ನಂತರ ತನ್ನ ಮೈಕಟ್ಟಿನಿಂದಲೇ ಎಲ್ಲರ ಗಮನ ಸೆಳೆಯುತ್ತಿದ್ದ.
ಸ್ಥಳಕ್ಕೆ ಅರಣ್ಯಾಧಿಕಾರಿ ಮತ್ತು ವೈದರ ತಂಡ ದೌಡಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?