ಮೂಲ ಪಟ್ಟು ಮರೆತ ಭರತನಾಟ್ಯಕ್ಕೆ ಸತ್ವವಿಲ್ಲ: ಮನೋರಮಾ


Team Udayavani, Jun 5, 2018, 5:30 PM IST

shiv-2.jpg

ಸಾಗರ: ಭರತನಾಟ್ಯದ ನೃತ್ಯ ಶೈಲಿಯನ್ನು ಹಾಳುಗೆಡವುವ ಕೆಲಸ ನಡೆಯುತ್ತಿದೆ. ನಾಟ್ಯಶಾಸ್ತ್ರದ ಮೂಲ ಪಟ್ಟುಗಳನ್ನು ಬಿಟ್ಟು ಪ್ರದರ್ಶನಗೊಳ್ಳುವ ಭರತನಾಟ್ಯ ಹೆಚ್ಚು ಶ್ರೇಷ್ಟವಾಗಿರುವುದಿಲ್ಲ ಎಂದು ಬೆಂಗಳೂರು ನೂಪುರ ಭ್ರಮರಿ ಸಂಪಾದಕರು ಹಾಗೂ ಕಲಾ ಸಂಶೋಧಕಿ ಡಾ| ಬಿ.ಎನ್‌.ಮನೋರಮಾ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ನಾಟ್ಯತರಂಗ ಸಂಸ್ಥೆ ವತಿಯಿಂದ ವಿದುಷಿ ರಾಜಲಕ್ಷ್ಮಿ ಕಾನುಗೋಡು ಅವರ ಭರತನಾಟ್ಯ ರಂಗ ಪ್ರವೇಶದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭರತನಾಟ್ಯ ಕಲಿಕೆಯಲ್ಲಿ ಶ್ರದ್ಧೆ ಅಗತ್ಯ. ವಿದ್ವಾನ್‌ ಜಿ.ಬಿ.ಜನಾರ್ದನ್‌ ತಮ್ಮ ಗುರುಗಳಿಂದ ಕಲಿತ ವಿದ್ಯೆಯನ್ನು ತಮ್ಮ ವಿದ್ಯಾರ್ಥಿಗಳಿಗೆಧಾರೆ ಎರೆಯುವ ಮೂಲಕ ಅವರಲ್ಲಿ ನೃತ್ಯಾಸಕ್ತಿ ಬೆಳೆಸುವ ಜೊತೆಗೆ ಮೂಲ ಭರತನಾಟ್ಯ ಕಲೆಯನ್ನು ಉಳಿಸುತ್ತಿರುವುದು ಅಭಿನಂದನಾರ್ಹ ಸಂಗತಿ. ವಿದ್ಯಾಭ್ಯಾಸ ಸಂದರ್ಭದಲ್ಲಿ ನೃತ್ಯ ಕಲಿಕೆಯಲ್ಲಿ ತೊಡಗಿಕೊಳ್ಳುವ ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ನೃತ್ಯಭ್ಯಾಸವನ್ನು ಮುಂದುವರಿಸುವುದಿಲ್ಲ.
ಇದರಿಂದ ನೀವು ಕಲಿತ ವಿದ್ಯೆಗೆ ಸಾರ್ಥಕತೆ ಸಿಗುವುದಿಲ್ಲ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೃತ್ಯಗುರು ವಿದ್ವಾನ್‌ ಜಿ.ಬಿ.ಜನಾರ್ದನ್‌, ನೃತ್ಯ ಕಲಾವಿದನ ಆತ್ಮ ಕಲೆಯ ಮೂಲ ಅವರ ದೇಹದಲ್ಲಿ ಅನುಸಂಧಾನವಾಗುತ್ತದೆ. ಶ್ರದ್ಧೆ ಮತ್ತು ಆಸಕ್ತಿ ಇರುವವರು ಮಾತ್ರ ನೃತ್ಯವನ್ನು ಶೀಘ್ರವಾಗಿ ಕಲಿಯಬಹುದು ಎಂದು ಹೇಳಿದರು.

ರಂಗಪ್ರವೇಶ ಮಾಡಿದ ರಾಜಲಕ್ಷ್ಮೀ ಕಾನುಗೋಡು ಮಾತನಾಡಿ, ಯಾವುದೇ ಕಲೆಯನ್ನು ಸಂಪೂರ್ಣವಾಗಿ ಅರಗಿಸಿಕೊಳ್ಳುವ ಮಾರ್ಗದಲ್ಲಿ ಅದರ ಕುರಿತಾದ ಗ್ರಾಂಥಿಕ ಅಧ್ಯಯನವೂ ಮುಖ್ಯವಾಗುತ್ತದೆ. ಅಗೆದಷ್ಟೂ ಖುಷಿ, ನೆಮ್ಮದಿಗಳು ನಾಟ್ಯದಲ್ಲಿದೆ. ದುರಂತವೆಂದರೆ ಸಮಾಜ ಪರೀಕ್ಷೆ ಆಧಾರಿತ ಅಂಕ ಸಂಪಾದಕ ಸಾಧಕರಿಗೆ ಪ್ರೋತ್ಸಾಹಿಸಲು ಹೆಚ್ಚಿನ ಆದ್ಯತೆ ನೀಡುತ್ತಿದೆ. ವಾಸ್ತವವಾಗಿ ನೃತ್ಯದಿಂದ ನಾವು ಏನನ್ನೂ ಕಳೆದುಕೊಳ್ಳುವುದಿಲ್ಲ. ನೃತ್ಯ ಓದಿಗೆ ತೊಂದರೆ ಕೊಡುವುದಿಲ್ಲ ಎಂದು ಪ್ರತಿಪಾದಿಸಿದರು.

ನಾಟ್ಯ ತರಂಗ ಸಂಸ್ಥೆ ಅಧ್ಯಕ್ಷ ಐ.ವಿ.ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಗಣಪತಿ ಕಟ್ಟಿನಕೆರೆ, ಸಂಸ್ಕೃತ ಉಪನ್ಯಾಸಕ ಗಜಾನನ ಭಟ್‌ ರೇವಣಕಟ್ಟಾ, ವರದಾಂಬಿಕೆ ಜನಾರ್ದನ್‌ ಇದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕ ಎಲ್‌.ಟಿ.ತಿಮ್ಮಪ್ಪ ಹೆಗಡೆ ಇದ್ದರು. ವಿದುಷಿ ರಾಜಲಕ್ಷ್ಮೀ ಕಾನುಗೋಡು ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. 

ಹ್ಯಾಂಗಿದಿಯೋ ತಮ್ಮಯ್ನಾ?
ಸಾಗರ:
ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದ ವೇಳೆ ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದ ನಂತರ ಮೊದಲ ಬಾರಿಗೆ ಸೋಲನುಭವಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ
ಹಾಗೂ ಶಾಸಕ ಹರತಾಳು ಹಾಲಪ್ಪ ಮುಖಾಮುಖೀಯಾದರು.

ಕಾರ್ಯಕ್ರಮದ ಆರಂಭದಲ್ಲಿ ಬಂದು ಕುಳಿತಿದ್ದ ಕಾಗೋಡು, ವಿಳಂಬವಾಗಿ ಬಂದ ಶಾಸಕ ಹರತಾಳು ಇನ್ನೊಂದೆಡೆ ಕುಳಿತಿದ್ದರು. ಕಾರ್ಯಕ್ರಮದ ಮಧ್ಯೆ ಹೊರಗಡೆ ಬಂದ ಕಾಗೋಡಿಗೆ ಹಾಲಪ್ಪ ಎದುರಾದರು. ಕಾಗೋಡು ಅವರನ್ನು
ಕಂಡ ಹಾಲಪ್ಪ ಗೌರವದಿಂದ ಎದ್ದುನಿಂತರೆ, ಹಸ್ತಲಾಘವ ಕೊಟ್ಟ ಕಾಗೋಡು, ಹ್ಯಾಗಿದೀಯೋ ತಮ್ಮಾ ಎಂದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.