ಕ್ರಿಕೆಟ್‌ ಆಟಗಾರರಿಗೆ ಸ್ಕಾಲರ್‌ಶಿಪ್‌: ಪಂಡಿತ್‌


Team Udayavani, Sep 24, 2020, 8:13 PM IST

ಕ್ರಿಕೆಟ್‌ ಆಟಗಾರರಿಗೆ ಸ್ಕಾಲರ್‌ಶಿಪ್‌: ಪಂಡಿತ್‌

ಸಾಂದರ್ಭಿಕ ಚಿತ್ರ

ಸಾಗರ: ಸಾಗರ ಮತ್ತು ಸೊರಬ ತಾಲೂಕಿನ ಪ್ರತಿಭಾವಂತ ಕ್ರಿಕೆಟ್‌ ಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಕಾಲರ್‌ಶಿಪ್‌ ಯೋಜನೆಯನ್ನು ನಾಗೇಂದ್ರ ಪಂಡಿತ್‌ ಕ್ರಿಕೆಟ್‌ ಅಕಾಡೆಮಿ ಈ ಸಾಲಿನಿಂದ ಜಾರಿಗೆ ತರುತ್ತಿದೆ. ಹಿರಿಯ ಕ್ರಿಕೆಟ್‌ ಆಟಗಾರ ದಿವಂಗತ ಸಿ.ಪಿ.ಭಾಸ್ಕರ್‌ ಅವರ ನೆನಪಿನಲ್ಲಿ ಕುಟುಂಬಸ್ಥರು ಮತ್ತು ಮೊಮ್ಮಗ ನಿಶಾಂತ್‌ ವಿ.ಜಿ. ಈ ಸ್ಕಾಲರ್‌ಶಿಪ್‌ ನೀಡಲು ಮುಂದೆ ಬಂದಿದ್ದಾರೆ ಎಂದು ಅಕಾಡೆಮಿ ಮುಖ್ಯಸ್ಥ ನಾಗೇಂದ್ರ ಪಂಡಿತ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 14 ವರ್ಷದೊಳಗೆ, 16 ವರ್ಷದೊಳಗೆ ಮತ್ತು 19 ವರ್ಷದೊಳಗಿನ ಮೂರುವಿಭಾಗದಲ್ಲಿ ತಲಾ ಇಬ್ಬರು ಕ್ರಿಕೆಟಿಗರಿಗೆ ಸ್ಕಾಲರ್‌ಶಿಪ್‌ ಸೌಲಭ್ಯ ದೊರಕಲಿದೆ. ಈ ಪೈಕಿ 14 ವರ್ಷದೊಳಗಿನ ಕ್ರಿಕೆಟಿಗರು ಸೌಲಭ್ಯ ಪಡೆಯಬೇಕಾದರೆ ನಾಗೇಂದ್ರ ಪಂಡಿತ್‌ ಕ್ರಿಕೇಟ್‌ ಅಕಾಡೆಮಿಯ ನೋಂದಾಯಿತ ಸದಸ್ಯನಾಗುವುದು ಕಡ್ಡಾಯವಾಗಿದೆ ಎಂದರು.

16 ವರ್ಷದೊಳಗಿನ ವಿಭಾಗದಲ್ಲಿ ಕೆಎಸ್‌ಸಿಎ ಶಿವಮೊಗ್ಗ ವಲಯದಲ್ಲಿ ನೋಂದಾವಣೆಗೊಂಡ ಲೀಗ್‌ ಕ್ರಿಕೆಟ್‌ ಕ್ಲಬ್‌ನಲ್ಲಿ ಆಡುತ್ತಿರುವ ಸದಸ್ಯರು ಯೋಜನೆಗೆ ಅರ್ಹರಾಗಿರುತ್ತಾರೆ. 19 ವರ್ಷದೊಳಗಿನ ವಿಭಾಗದಲ್ಲಿ ಮೇಲಿನ ಎರಡೂ ವಿಭಾಗದಲ್ಲಿ ಬರುವ ಆಟಗಾರರು ಅರ್ಹರಾಗಿರುತ್ತಾರೆ. ಮೂರು ವಿಭಾಗಗಳಲ್ಲಿ ಆಯ್ಕೆಯಾದ ಆಟಗಾರರಿಗೆ 2020-21ನೇ ಸಾಲಿನಿಂದ ಮುಂದಿನ ಐದು ವರ್ಷದವರೆಗೆ ಸ್ಕಾಲರ್‌ಶಿಪ್‌ ಯೋಜನೆಯಡಿ ನೆರವು ನೀಡಲಾಗುತ್ತದೆ. ಪ್ರತಿ ವರ್ಷ ಅಕ್ಟೋಬರ್‌ನಿಂದ ಆಗಸ್ಟ್ ವರೆಗೆ ಆಟಗಾರರ ಮೌಲ್ಯಮಾಪನ ಮಾಡಲಾಗುತ್ತದೆ. ಈ ಸ್ಕಾಲರ್‌ಶಿಪ್‌ ನಗದು, ಸ್ಮರಣಿಕೆ ಹಾಗೂ ಕ್ರಿಕೆಟ್‌ ಸಾಮಗ್ರಿಗಳನ್ನು ಒಳಗೊಂಡಿರುತ್ತದೆ ಎಂದರು.

ಸ್ಕಾಲರ್‌ಶಿಪ್‌ಗೆ ನಿಗದಿಪಡಿಸಿರುವ ಮೂರು ವಯೋಮಾನಗಳ ವರ್ಗದಡಿ ಅರ್ಜಿ ಸಲ್ಲಿಸುವ ಆಟಗಾರರ ಅರ್ಜಿಯನ್ನು ನಾಗೇಂದ್ರ ಕೆ. ಪಂಡಿತ್‌, ಕೆ.ಆರ್‌. ಗಣೇಶ ಪ್ರಸಾದ್‌, ಎಂ.ರಾಘವೇಂದ್ರ, ಪಿ.ಅತ್ರಿ ಈ ನಾಲ್ವರನ್ನು ಒಳಗೊಂಡ ಪರಿಶೀಲನಾ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಆಗಾಗ ಈ ಪರಿಶೀಲನಾ ಸಮಿತಿ ಸಭೆ ಸೇರಿ ಸ್ಥಳೀಯಕ್ರಿಕೆಟ್‌ ಕ್ಲಬ್‌ಗಳ ಪ್ರಮುಖರ, ಶಿವಮೊಗ್ಗ ವಲಯ ಕ್ರಿಕೆಟ್‌ ಅಂಪೈರ್‌ಗಳ ಸಲಹೆ ಪಡೆದು ಫಲಾನುಭವಿಗಳ ಆಯ್ಕೆ, ಆಯ್ಕೆಯಾದ ಫಲಾನುಭವಿಗಳ ಪ್ರಗತಿ ಮೊದಲಾದ ವಿಷಯ ಕುರಿತು ನಿರಂತರವಾಗಿ ಪರಿಶೀಲಿಸುತ್ತದೆ. ಈ ಸಾಲಿನ ಸೆ.23ರಿಂದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಾಗರದಲ್ಲಿ ಪ್ರತಿಭಾವಂತ ಕ್ರಿಕೆಟ್‌ ಪಟುಗಳಿದ್ದಾರೆ. ಕ್ರಿಕೆಟ್‌ ನನ್ನ ಬದುಕಿಗೆ ದೊಡ್ಡ ಕೊಡುಗೆ ನೀಡಿದೆ. ನನ್ನೂರಿನ ಪ್ರತಿಭಾವಂತ ಯುವ ಕ್ರಿಕೆಟಿಗರಿಗೆ ಸಹಕಾರ ನೀಡಬೇಕು ಎನ್ನುವ ಉದ್ದೇಶದಿಂದ ನಾಗೇಂದ್ರ ಪಂಡಿತ್‌ ಒಳಾಂಗಣ ಕ್ರಿಕೆಟ್‌ ಸ್ಟೇಡಿಯಂ ಸ್ಥಾಪಿಸಲಾಗಿದೆ. ವರದಹಳ್ಳಿ ರಸ್ತೆಯಲ್ಲಿ ಅಂತಾ‌ರಾಷ್ಟ್ರೀಯ ಒಳಾಂಗಣ ಕ್ರಿಕೆಟ್‌ ಅಂಕಣಕ್ಕೆ ಕಡಿಮೆ ಇಲ್ಲದ ರೀತಿಯಲ್ಲಿ ಅಂಕಣ ಸಿದ್ಧಗೊಳಿಸಲಾಗಿದೆ. ಹೊನಲು ಬೆಳಕಿನ ಸೌಲಭ್ಯದೊಂದಿಗೆ ಗುಣಮಟ್ಟದ ಟರ್ಫ್‌ ಅಂಕಣವಿದ್ದು, ಮಲೆನಾಡಿನಲ್ಲಿ ಮಳೆಗಾಲದಲ್ಲೂ ಕ್ರಿಕೆಟ್‌ ತರಬೇತಿಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ವರ್ಷದ 365 ದಿನವೂ ದಿನದ 24 ಗಂಟೆಯೂ ನಮ್ಮ ಅಕಾಡೆಮಿಯಲ್ಲಿ ಕ್ರಿಕೆಟ್‌ ಅಭ್ಯಾಸಕ್ಕೆ ಅವಕಾಶ ಇದೆ ಎಂದು ತಿಳಿಸಿದರು.

ಕೆ.ಆರ್‌.ಗಣೇಶ ಪ್ರಸಾದ್‌, ಪಿ.ಅತ್ರಿ, ಯಾಯಾ ಖಾನ್‌, ಪ್ರೇಮ್‌ ಸಿಂಗ್‌, ಶಶಾಂಕ್‌, ಹರ್ಷ ಮಂಚಾಲೆ, ಮಾಲತೇಶ್‌, ವೆಂಕಟೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.