ಕರಿಚುಕ್ಕಿ-ಕೊಳೆ ರೋಗಗಳತ್ತ ವೈಜ್ಞಾನಿಕ ಸಂಶೋಧನೆ
ರೋಗದ ಕುರಿತು ಸಂಶೋಧನೆ ಮತ್ತು ಪರಿಹಾರ ಕಂಡುಕೊಳ್ಳಬೇಕು
Team Udayavani, Sep 8, 2022, 6:30 PM IST
ಸಾಗರ: ಸಾಗರ ಮತ್ತು ಹೊಸನಗರ ತಾಲೂಕಿನ ಅಡಕೆ ತೋಟಗಳಿಗೆ ಬಂದಿರುವ ಕರಿಚುಕ್ಕಿ ರೋಗ ಮತ್ತು ಮಲೆನಾಡಿನ ಅಡಕೆ ತೋಟಗಳನ್ನು ಬಾಧಿ ಸುತ್ತಿರುವ ಕೊಳೆ ರೋಗಕ್ಕೆ ಸಂಬಂಧಪಟ್ಟಂತೆ ವೈಜ್ಞಾನಿಕ ಸಂಶೋಧನೆ ನಡೆಸುವಂತೆ ಆಪ್ಸ್ಕೋಸ್ ವತಿಯಿಂದ ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ| ಆರ್.ಸಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಆಪ್ಸ್ಕೋಸ್ಗೆ ಭೇಟಿ ನೀಡಿದ್ದ ಕುಲಪತಿಗಳಿಗೆ ನೀಡಿದ ಮನವಿಯಲ್ಲಿ ಸಾಗರ ಮತ್ತು ಹೊಸನಗರ ತಾಲೂಕಿನ ಅಡಕೆ ತೋಟಗಳಲ್ಲಿ ಎಲೆಚುಕ್ಕಿ, ಕರಿಚುಕ್ಕಿ ರೋಗ ಕಾಣಿಸಿಕೊಂಡು ಅಡಕೆ ಮರಗಳು ಒಣಗಿ ಹೋಗುತ್ತಿದೆ. ಅಡಕೆ ಬೆಳೆಗಾರರು ಕೃಷಿ ತಜ್ಞರು ಸೂಚಿಸಿರುವ ಔಷಧಿಗಳನ್ನು ಸಿಂಪಡಣೆ ಮಾಡಿದರೂ ರೋಗ ಹತೋಟಿಗೆ ಬರದೆ ಉಲ್ಬಣಗೊಳ್ಳುತ್ತಿದೆ.
ತಕ್ಷಣ ವಿಶ್ವವಿದ್ಯಾಲಯದ ವಿಜ್ಞಾನಿಗಳು ತೋಟಕ್ಕೆ ಭೇಟಿ ನೀಡಿ ರೋಗದ ಕುರಿತು ಸಂಶೋಧನೆ ಮತ್ತು ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮಲೆನಾಡಿನ ಸಾಗರ, ಸೊರಬ, ಹೊಸನಗರ ತಾಲೂಕಿನ ಎಲ್ಲ ಅಡಕೆ ತೋಟಗಳಿಗೂ ಕೊಳೆ ರೋಗ ಬಂದಿದೆ. ರೈತರು ವಿಜ್ಞಾನಿಗಳು ಸೂಚಿಸಿದ ಬೋಡೋì ದ್ರಾವಣ ಸಿಂಪಡಣೆ ಮಾಡಿದರೂ ಕೊಳೆರೋಗ ನಿಯಂತ್ರಣಕ್ಕೆ ಬರದೆ ಶೇ. 80ರಷ್ಟು ಅಡಕೆ ನಾಶವಾಗಿದೆ. ಈ ಎರಡೂ ರೋಗದ ಬಗ್ಗೆ ವಿಶೇಷ ಅಧ್ಯಯನ ನಡೆಸಿ ರೈತರಿಗೆ ಆದ ನಷ್ಟದ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಸೂಕ್ತ ಆರ್ಥಿಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಆಪ್ಸ್ಕೋಸ್ ಅಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಭರತ್ ನಾಡಿಗ್, ವ್ಯವಸ್ಥಾಪಕ ಲಂಬೋದರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು