ಶಿವಮೊಗ್ಗ ಗಲಭೆಕೋರರಿಗೆ ಎಸ್ಡಿಪಿಐ ನಂಟು
Team Udayavani, Aug 19, 2022, 9:16 PM IST
ಶಿವಮೊಗ್ಗ: ನಗರದ ಎಎ ಸರ್ಕಲ್ನಲ್ಲಿ ನಡೆದ ಸಾವರ್ಕರ್ ಫೋಟೋ ವಿವಾದ ನಂತರ ಗಾಂಧಿ ಬಜಾರ್ನಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ಕು ಆರೋಪಿಗಳಿಗೆ ಎಸ್ಡಿಪಿಐ ನಂಟು ಇರುವುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಶಿವಮೊಗ್ಗ ಮಾರ್ನಾಮಿಬೈಲಿನ ಮೊಹಮ್ಮದ್ ಜಬೀ (30), ಜೆಸಿ ನಗರದ ನದೀಮ್ (25), ಆರ್ಎಂಎಲ್ ನಗರದ ತನ್ವೀರ್ (22) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ಎಸ್ಡಿಪಿಐ ಸಂಘಟನೆಯೊಂದಿಗೆ ಸಕ್ರಿಯ ನಂಟು ಹೊಂದಿದ್ದಾರೆ. ಎಸ್ಡಿಪಿಐ ಸಂಘಟನೆ ಚಟುವಟಿಕೆಯಲ್ಲಿ ಸಕ್ರಿಯವಿರುವ ಫೋಟೋ- ವಿಡಿಯೋಗಳು ಲಭ್ಯವಾಗಿದೆ.
ಸಂಘಟನೆ ಕರೆ ನೀಡುವ ಪ್ರತಿ ಚಟುವಟಿಕೆಯಲ್ಲಿ ಜಬೀ, ನದೀಮ್, ತನ್ವೀರ್ ಹಾಗೂ ರೆಹಮಾನ್ ಭಾಗಿಯಾಗುತ್ತಿದ್ದರು. ಅಲ್ಲದೆ ಸರ್ಕಾರದ ವಿರುದ್ಧ ಪ್ರತಿಭಟನೆ ಜತೆಗೆ ಸಂಘಟನೆ ಕೆಲಸದಲ್ಲಿ ಸಹ ಬಂಧಿತ ಆರೋಪಿಗಳು ಭಾಗಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ನೆರೆ ಸಂದರ್ಭದ ಕಾರ್ಯದಲ್ಲೂ ಎಸ್ಡಿಪಿಐ ಕಾರ್ಯಕರ್ತರಾಗಿ ಕೆಲಸ ಮಾಡಿರುವ ಆರೋಪಿಗಳು, ಧರ್ಮಕ್ಕೆ ಸಂಬಂಧಿ ಸಿದ ವಿಚಾರದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು ಎನ್ನಲಾಗಿದೆ. ಬಂ ಧಿತ ನಾಲ್ವರು ಆರೋಪಿಗಳನ್ನು ಆ.20ರವರೆಗೆ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ