ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ
Team Udayavani, Sep 27, 2022, 2:50 PM IST
ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು. ಎಸ್ ಡಿಪಿಐ ಮತ್ತು ಪಿಎಫ್ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. ಈ ರಾಷ್ಟ್ರದ್ರೋಹಿ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ಇರಬಾರದೆಂದು ರಾಷ್ಟ್ರಭಕ್ತ ಮುಸ್ಲಿಂರೂ ಕೂಡಲೇ ಖಂಡನೆ ಮಾಡಬೇಕು. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಡಬೇಕು ಎಂದರು
ಇದನ್ನೂ ಓದಿ:ಭವಿಷ್ಯದ ಪೀಳಿಗೆ ಆರೋಗ್ಯಕರ ಜೀವನ ನಡೆಸುವಂಥ ಸಂಶೋಧನೆಗಳಾಗಲಿ: ಸಿಎಂ ಬೊಮ್ಮಾಯಿ
ಈ ದಾಳಿ ಕುರಿತು ಕಾಂಗ್ರೆಸ್ ನವರು ಇನ್ನೂ ಬಾಯಿ ಬಿಟ್ಟಿಲ್ಲ. ಕೇಂದ್ರ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿರುವ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ಇಲ್ಲ. ಕಾಂಗ್ರೆಸ್ ಹಿಂದಿನಿಂದಲೂ ರಾಷ್ಟ್ರದ್ರೋಹಿಗಳಿಗೆ ಬೆಂಬಲ ಕೊಡುವ ಕೆಲಸ ಮಾಡಿದೆ. ಇದಕ್ಕೂ ನಿಜಕ್ಕೂ ಕೂಡ ದೊಡ್ಡ ಅಪಮಾನ. ರಾಷ್ಟ್ರದ್ರೋಹಿ ಚಟುವಟಿಕೆಗಳು ನಡೆಯುತ್ತಿರುವಲ್ಲಿ ದಾಳಿ ಮುಂದುವರೆಯಬೇಕು. ಕೇಂದ್ರ ಸರ್ಕಾರವು ದೇಶದ್ರೋಹಿ ಸಂಘಟನೆ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದೆ ಎಂದು ರಾಷ್ಟ್ರ ಭಕ್ತರಿಗೆ ವಿಶ್ವಾಸ ಬರಬೇಕು. ಕೇಂದ್ರ ಸರ್ಕಾರದ ಈ ನಿರ್ಧಾರ ಇಡೀ ದೇಶ ಸ್ವಾಗತ ಮಾಡುತ್ತಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ