ಶಿವಮೊಗ್ಗ ಗಲಾಟೆ ಪ್ರಕರಣ: ಸೆ.144 ನಿಷೇಧಾಜ್ಞೆ ಅವಧಿ ಎರಡನೇ ಬಾರಿ ವಿಸ್ತರಣೆ
Team Udayavani, Dec 7, 2020, 11:34 AM IST
ಶಿವಮೊಗ್ಗ: ನಗರದಲ್ಲಿ ಎರಡು ಕೋಮುಗಳ ನಡುವೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮತ್ತೆ ವಿಸ್ತರಿಸಲಾಗಿದೆ. ಡಿ. 9 ರ ಬುಧವಾರ ಬೆಳಗ್ಗೆ 10 ಗಂಟೆವರೆಗೆ ವಿಸ್ತರಿಸಿ ತಹಶೀಲ್ದಾರ್ ಆದೇಶ ನೀಡಿದ್ದಾರೆ.
ಕಳೆದ ಗುರುವಾರ (ಡಿ.3) ದಂದು ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗದಲ್ಲಿ ಗಲಾಟೆ ಆರಂಭಗೊಂಡಿತ್ತು.
ಎರಡು ಕೋಮಿನ ನಡುವಿನ ಗಲಾಟೆ ನಿಯಂತ್ರಿಸಲು ಈ ಹಿಂದೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಡಿ. 3ರ ಮಧ್ಯಾಹ್ನದಿಂದ ಡಿ. 5ರ ಬೆಳಗ್ಗೆ 10 ರವರೆಗೆ ನಿಷೇಧಾಜ್ಞೆ ಜಾರಿಯಾಗಿತ್ತು. ಬಳಿಕ ಮತ್ತೊಮ್ಮೆ ಡಿ. 7 ರವರೆಗೆ ನಿಷೇಧಾಜ್ಞೆ ಅವಧಿ ವಿಸ್ತರಿಸಲಾಗಿತ್ತು.
ಮುಂಜಾಗ್ರತಾ ಕ್ರಮವಾಗಿ ಇದೀಗ ಮತ್ತೆ ನಿಷೇಧಾಜ್ಞೆಯನ್ನು ಬುಧವಾರದವರೆಗೆ ವಿಸ್ತರಿಸಲಾಗಿದೆ. ನಿಷೇಧಾಜ್ಞೆ ಮುಂದುವರಿಸುವಂತೆ ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಸೀಲ್ದಾರ್ ಎನ್ .ಜೆ.ನಾಗರಾಜ್ ಈ ಬಗ್ಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ