ರಂಗಭೂಮಿ ಕಲೆಯಿಂದ ಆತ್ಮತೃಪ್ತಿ: ಚಂದ್ರು


Team Udayavani, Sep 8, 2018, 5:12 PM IST

chandru.jpg

ಶಿವಮೊಗ್ಗ: ರಂಗಭೂಮಿ ಒಂದು ಜೀವಂತ ಕಲೆ. ಇದರಲ್ಲಿ ಸಿಗುವ ಆನಂದ ಬೇರೆ ಯಾವ ಕ್ಷೇತ್ರದಲ್ಲೂ ಸಿಗಲಾರದು
ಎಂದು ಹಿರಿಯ ರಂಗಕರ್ಮಿ, ನಟ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಶುಕ್ರವಾರ ಪ್ರಸ್‌ ಟ್ರಸ್ಟ್‌ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಿರುತೆರೆ, ಸಿನಿಮಾ ಈ
ಎಲ್ಲ ಕ್ಷೇತ್ರಗಳಿಗಿಂತ ರಂಗಭೂಮಿ ಮುಖ್ಯವಾದುದು, ಇದು ತಾಯಿ ಬೇರು ಇದ್ದಂತೆ. ಇದು ಬದುಕನ್ನು ಕಲಿಸಿಕೊಡುತ್ತದೆ.
ಬೇರೆ ಬೇರೆ ಕ್ಷೇತ್ರಗಳಲ್ಲಿ ಹೆಸರು, ಕೀರ್ತಿ, ಹಣ ಎಲ್ಲವೂ ಸಿಗುತ್ತದೆ. ಆದರೆ ಆತ್ಮತೃಪ್ತಿ ಸಿಗುವುದು ರಂಗಭೂಮಿಯಲ್ಲಿ ಮಾತ್ರ ಎಂದರು.

 ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಕಿರುತೆರೆಯಲ್ಲೂ ನಟಿಸಿದ್ದೇನೆ. ಆದರೆ ನನಗೆ ರಂಗಭೂಮಿ ಅತ್ಯಂತ ತೃಪ್ತಿ ತಂದಿದೆ. ಅದರಲ್ಲೂ ಮುಖ್ಯಮಂತ್ರಿ ನಾಟಕ ದಾಖಲೆಯತ್ತ ಸಾಗಿದ್ದು 700ನೇ ಪ್ರದರ್ಶನದತ್ತ ದಾಪುಗಾಲು ಇಟ್ಟಿದೆ. 700 ಪ್ರದರ್ಶನಗಳಲ್ಲೂ ನಾನೇ ಅಭಿನಯಿಸಿರುವುದು ಗಿನ್ನಿಸ್‌ ದಾಖಲೆಗೆ ಸೇರಲಿದೆ ಎಂದರು.

ಚಂದ್ರಶೇಖರ ಎಂಬ ನನಗೆ ಮುಖ್ಯಮಂತ್ರಿ ಹೆಸರು ಅಂಟಿಕೊಂಡಿದ್ದೇ ಒಂದು ಸ್ವಾರಸ್ಯಕರವಾದ ವಿಷಯ. ಮುಖ್ಯಮಂತ್ರಿ ನಾಟಕದ ಪಾತ್ರಧಾರಿ ಹುಷಾರಿಲ್ಲದ ಕಾರಣ ಬಂದಿರಲಿಲ್ಲ. ಕೊನೆಗೆ ಆ ಪಾತ್ರದಲ್ಲಿ ಅಭಿನಯಿಸಲು
ನನಗೆ ತಿಳಿಸಿದರು. ಕೊನೆಗೂ ಒಪ್ಪಿಕೊಂಡು ಅಭಿನಯಿಸಿದೆ. ಅದೇ ಪಾತ್ರ ನನ್ನನ್ನು ಇಲ್ಲಿವರೆಗೂ ತಂದು ನಿಲ್ಲಿಸಿದೆ.
 
 ಮುಖ್ಯಮಂತ್ರಿ ಹೆಸರು ತೆಗೆಯಲು ಚರ್ಚೆ: ಶಾಸಕನಾಗಿ ಆಯ್ಕೆಯಾದಾಗ ಒಂದೇ ಸದನದಲ್ಲಿ ಇಬ್ಬರು ಮುಖ್ಯಮಂತ್ರಿ ಇರುವ ಹಾಗಿಲ್ಲ ಎಂಬ ಚರ್ಚೆ ಶುರುವಾಯಿತು. ಇದು ನಾನು ಇಟ್ಟುಕೊಂಡಿರುವುದಲ್ಲ ಜನ ಕೊಟ್ಟಿರುವುದು ಎಂದು ತಿಳಿಸಿದೆ. ಆಗ ಸಿಎಂ ಜೆ.ಎಚ್‌. ಪಟೇಲರು ಈ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದರು. ಕೊನೆಗೆ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿ ಮುಖ್ಯಮಂತ್ರಿ ಚಂದ್ರು ಎಂಬ ಹೆಸರನ್ನೇ ಅಧಿಕೃತಗೊಳಿಸಲಾಯಿತು. ನಂತರ ನಾನು ನನ್ನ ಎಲ್ಲ ಸರ್ಟಿಫಿಕೇಟ್‌ಗಳಲ್ಲೂ ಹೆಸರು ಬದಲಾವಣೆ ಮಾಡಿಕೊಂಡೆ ಎಂದರು.

700 ನೇ ಪ್ರದರ್ಶನ: ಮುಖ್ಯಮಂತ್ರಿ ನಾಟಕ ಕಲಾಗಂಗೋತ್ರಿಯಿಂದ ಸುಮಾರು 47 ವರ್ಷಗಳಿಂದ ಪ್ರದರ್ಶನಗೊಳ್ಳುತ್ತಿದೆ. ರಾಜ್ಯ, ದೇಶ, ವಿದೇಶಗಳಲ್ಲೂ ಪ್ರದರ್ಶನಗೊಂಡಿದೆ. ಡಿ.4ರಂದು ಬೆಂಗಳೂರಿನಲ್ಲಿ 700ನೇ ಪ್ರದರ್ಶನ ಕಾಣಲಿದೆ. ಸುಮಾರು 24 ಪಾತ್ರಗಳು ನಾಟಕದಲ್ಲಿ ಬರುತ್ತವೆ. ಆದರೆ ಹಲವು ಪಾತ್ರಧಾರಿಗಳು ತೀರಿಹೋಗಿದ್ದಾರೆ. ಸುಮಾರು 200 ಮಂದಿ ಇದೇ ರೀತಿ ಬದಲಾವಣೆಯಾಗಿದ್ದಾರೆ. ಆದರೆ ಮುಖ್ಯಮಂತ್ರಿ ಪಾತ್ರದಲ್ಲಿ ನಾನೊಬ್ಬನೇ ಮುಂದುವರೆದಿದ್ದೇನೆ ಎಂದರು.

 ಇದೊಂದು ರಾಜಕೀಯ ವಿಡಂಬನೆ ನಾಟಕವಾಗಿದ್ದು ಎಲ್ಲ ಕಾಲಕ್ಕೂ ಸಲ್ಲುತ್ತದೆ. ಸುಮಾರು 13 ಮುಖ್ಯಮಂತ್ರಿಗಳು ಇದನ್ನು ನೋಡಿದ್ದಾರೆ. ಒಮ್ಮೆ ಗುಂಡೂರಾವ್‌, ಎಚ್‌.ಡಿ.ದೇವೇಗೌಡ, ಡಾ| ರಾಜ್‌ಕುಮಾರ್‌ ನಾಟಕ ನೋಡಲು ಬಂದಿದ್ದರು. ನಾಟಕ ಮುಗಿದ ಮೇಲೆ ಗುಂಡೂರಾವ್‌ ಅವರು ನೀವು ಮಾಡಿರುವುದು ಬರೀ 30 ಪರ್ಸೆಂಟ್‌ ಅಷ್ಟೇ
ಇನ್ನೂ 70 ಪರ್ಸೆಂಟ್‌ ಇದೆ ಎಂದಿದ್ದರು.

ಹಲವರು ಇನ್ನೂ ಹೆಚ್ಚಿನದನ್ನು ಸೇರಿಸಬೇಕು ಎಂದಿದ್ದಾರೆ. ಕಾಲ ಕಾಲಕ್ಕೆ ತಕ್ಕಂತೆ ಡೈಲಾಗ್ಸ್‌ ಬದಲಾವಣೆಯಾಗಿದೆ. ಒಂದು ನಾಟಕದಲ್ಲಿ ಮಾಡಿದಂತೆ ಇನ್ನೊಂದು ನಾಟಕದಲ್ಲಿ ಮಾಡಲು ಆಗಲ್ಲ ಎಂದರು. 

 ಈ ನಾಟಕವು ಸೆ.8ರಂದು ಶೃಂಗೇರಿಯಲ್ಲಿ, 9ರಂದು ತೀರ್ಥಹಳ್ಳಿಯಲ್ಲಿ ಪ್ರದರ್ಶನ ಕಾಣಲಿದೆ. ಡಾ| ಬಿ.ವಿ.ರಾಜಾರಾಂ ನಿರ್ದೇಶಿಸಿದ್ದು, ಮಂಜುನಾಥ್‌ ಹೆಗ್ಡೆ, ಶ್ರೀನಿವಾಸ್‌ ಮೇಷ್ಟ್ರು, ಮುರಳೀಧರ್‌, ಗಂಗೋತ್ರಿ ಮಂಜು ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.