ಸೆಮಿಸ್ಟರ್‌ ವೇಳಾಪಟ್ಟಿ ಪ್ರಕಟ: ವಿವಿಗಳಿಗೆ ಇಕ್ಕಟ್ಟು

ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟ

Team Udayavani, Jul 26, 2022, 3:52 PM IST

13

ಶಿವಮೊಗ್ಗ: ಪದವಿ ವಿದ್ಯಾರ್ಥಿಗಳ ಪ್ರಥಮ ವರ್ಷದ ದ್ವಿತೀಯ ಸೆಮಿಸ್ಟರ್‌ ಮುಗಿಯುವ ಮುನ್ನವೇ ಮೊದಲ ಸೆಮಿಸ್ಟರ್‌ಗೆ ವೇಳಾಪಟ್ಟಿ ಬಿಡುಗಡೆಯಾಗಿದ್ದು ರಾಜ್ಯದ ಎಲ್ಲ ವಿವಿಗಳು ಇಕ್ಕಟ್ಟಿನಲ್ಲಿ ಸಿಲುಕಿವೆ.

2021-22ರ ಪ್ರಥಮ ವರ್ಷವೇ ಮುಗಿದಿಲ್ಲ. ಈ ಹಂತದಲ್ಲಿ 2022-23ರ ಪ್ರಥಮ ವರ್ಷದ ವೇಳಾಪಟ್ಟಿ ಬಿಡುಗಡೆಯಾಗಿದ್ದು ಮೊದಲ ಸೆಮಿಸ್ಟರ್‌, ಎರಡನೇ ಸೆಮಿಸ್ಟರ್‌ ಎರಡನ್ನೂ ಒಟ್ಟಿಗೆ ನಡೆಸಬೇಕಾದ ಸಂದಿಗ್ಧತೆಯಲ್ಲಿ ವಿವಿಗಳು ಸಿಲುಕಿವೆ. ಕೋವಿಡ್‌ ಕಾರಣಕ್ಕೆ ವಿಳಂಬವಾದ ಪದವಿ ತರಗತಿಗಳು ಹಳೇ ಅವಧಿಗೆ ಬಂದಿಲ್ಲ. ಈ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಿರುವುದರಿಂದ ಪದವಿ ವೇಳಾಪಟ್ಟಿ ಮತ್ತಷ್ಟು ವಿಳಂಬವಾಗಿದೆ. ಈ ಹಂತದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಕೋವಿಡ್‌ಗೂ ಮುನ್ನ ನಡೆಯುತ್ತಿದ್ದ ವೇಳಾಪಟ್ಟಿಯಂತೆ ಕಾಲೇಜುಗಳನ್ನು ಆರಂಭಿಸಲು ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಜಾರಿ ಮಾಡಿದೆ.

ವಿವಿಗಳ ಸಂಕಷ್ಟ: 2022-23ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ ಜು.30ರೊಳಗೆ ಪ್ರವೇಶ ಪ್ರಕ್ರಿಯೆ ಮುಗಿಸಿ ಆ.17ರಿಂದ 22ರೊಳಗೆ ತರಗತಿ ಆರಂಭಿಸುವಂತೆ ಸೂಚಿಸಲಾಗಿದೆ. ಇತ್ತ ರಾಯಚೂರು ವಿವಿಯಲ್ಲಿ ಮೊದಲನೇ ಸೆಮಿಸ್ಟರ್‌ ಪರೀಕ್ಷೆ ಮುಗಿದು ವಾರವೂ ಆಗಿಲ್ಲ. ಕುವೆಂಪು ವಿವಿಯಲ್ಲಿ ಜೂ.18ರಿಂದ, ಬೆಂಗಳೂರು, ಧಾರವಾಡ, ಮೈಸೂರು ವಿವಿಗಳಲ್ಲಿ ಎರಡನೇ ಸೆಮಿಸ್ಟರ್‌ ಆರಂಭವಾಗಿದೆ. ಒಂದು ಸೆಮಿಸ್ಟರ್‌ ಪೂರ್ಣಗೊಳ್ಳಲು ಕನಿಷ್ಟ ನಾಲ್ಕು ತಿಂಗಳು ಬೇಕು. ಹೊಸ ವೇಳಾಪಟ್ಟಿಯಂತೆ ಒಂದನೇ ಸೆಮಿಸ್ಟರ್‌ ಆರಂಭವಾದರೆ ಎರಡನೇ ಸೆಮಿಸ್ಟರ್‌ ಶೇ.60 ಮಾತ್ರ ಮುಗಿದಿರುತ್ತದೆ. ಕೆಲ ವಿವಿಗಳಲ್ಲಿ ಶೇ.50ರೊಳಗೆ ಸಿಲೆಬಸ್‌ ಮುಗಿದಿರುತ್ತದೆ.

ಸಮಸ್ಯೆಗಳೇನು?: ಹೊಸ ವೇಳಾಪಟ್ಟಿ ಯಂತೆ ತರಗತಿ ಶುರುವಾದರೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಈಗಾಗಲೇ ಕೊಠಡಿ ಸಮಸ್ಯೆ ಹೇಳತೀರದು. ಶಿವಮೊಗ್ಗದ ಸಹ್ಯಾದ್ರಿ, ದಾವಣಗೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಚಿತ್ರದುರ್ಗ ಚಳ್ಳಕೆರೆ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ರಾಜ್ಯ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ 321 ಅನುದಾನಿತ ಕಾಲೇಜುಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಓದುತ್ತಿದ್ದು ಕೊಠಡಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಸಂಬಳ ಹೆಚ್ಚು ಮಾಡಿರುವುದರಿಂದ ಕಾರ್ಯಭಾರ ಹೆಚ್ಚಿಸಲಾಗಿದೆ. ಮೊದಲನೇ ಸೆಮಿಸ್ಟರ್‌ ಮಕ್ಕಳಿಗೆ ಹೇಗೆ ಪಾಠ ಮಾಡುತ್ತಾರೆ? ಹೆಚ್ಚುವರಿ ಅತಿಥಿ ಉಪನ್ಯಾಸಕರ ಸರಕಾರ ನೇಮಕ ಮಾಡುತ್ತದೆಯೇ? ಮಾಡಿದರೆ ಅವರಿಗೆ ಕಾರ್ಯಭಾರ ಹೇಗೆ ಹಂಚುತ್ತದೆ ಎಂಬ ಪ್ರಶ್ನೆಗಳನ್ನು ಉಪನ್ಯಾಸಕರು ಮುಂದಿಟ್ಟಿದ್ದಾರೆ. ಪ್ರಸ್ತುತ ಎನ್‌ಇಪಿ ಒಂದನೇ ಸೆಮಿಸ್ಟರ್‌ ಪರೀಕ್ಷೆ ಮೌಲ್ಯಮಾಪನ ಈಗಷ್ಟೇ ಆರಂಭವಾಗಿದೆ. ಈ ಹಂತದಲ್ಲಿ ಎರಡನೇ ಸೆಮಿಸ್ಟರ್‌ ತರಾತುರಿಯಲ್ಲಿ ಮುಗಿಸಲು ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

-ಶರತ್‌ ಭದ್ರಾವತಿ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.