ಸೆ. 17 ರಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ
Team Udayavani, Sep 16, 2022, 3:26 PM IST
ಹೊಳೆಹೊನ್ನೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ. 17 ರಿಂದ ಅ.2 ರವರಗೆ 15 ದಿನಗಳ ಕಾಲ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹೊಳೆಹೊನ್ನೂರು ಮಂಡಲದ ಅಧ್ಯಕ್ಷ ಕಲ್ಲಜ್ಜನಾಳ್ ಡಿ. ಮಂಜುನಾಥ ತಿಳಿಸಿದರು.
ಅವರು ಸಮೀಪದ ಅಹತೊಳಲು ಕೈಮರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸೆ.17 ರಂದು ಪಟ್ಟಣದ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಹಾಗೂ 15 ದಿನಗಳ ಕಾಲ ಕೋವಿಡ್ ಉಚಿತ ಲಸಿಕಾ ಕಾರ್ಯಕ್ರಮ, ಸೆ.21 ಹಾಗೂ 22 ರಂದು ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಸೆ.25 ರಂದು ಪ್ರತಿ ಬೂತ್ ನಲ್ಲೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ ಹಾಗೂ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡುವುದರ ಮೂಲಕ ಕಮಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸೆ. 25 ರಿಂದ 28 ರವರಗೆ ಫಲಾನುಭವಿಗಳ ಸಮಾವೇಶ, ಸೆ.26 ಹಾಗೂ 27 ರಂದು ಜಲಮೂಲಗಳ ಸ್ವಚ್ಛತೆ, ಅರಳಿ ಸಸಿ ಹಾಗೂ ಹಣ್ಣಿನ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸೆ. 29 ರಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿರಿಗೆ ಗೌರವ ಸಮರ್ಪಣೆ, ಸೆ. 30 ರಂದು ಎಸ್.ಟಿ. ಮೋರ್ಚಾದ ವತಿಯಿಂದ ಎಸ್.ಟಿ. ಕಾಲೋನಿಯಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ವಿತರಿಸಲಾಗುವುದು. ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಖಾದಿ ಉಡುಪುಗಳನ್ನು ಖರೀದಿಸುವ ಖಾದಿ ಉತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಉಪಾಧ್ಯಕ್ಷರುಗಳಾದ ವಿಜಯಮ್ಮ, ನಾಗರತ್ನಮ್ಮ, ವೀರೇಶಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಉಜ್ಜನಪ್ಪ, ಮಲ್ಲಾಪುರದ ಮಲ್ಲೇಶಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ