ಶಿವಮೊಗ್ಗ; ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವು!
Team Udayavani, May 16, 2022, 9:46 AM IST
ಶಿವಮೊಗ್ಗ: ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಗಾಡಿಕೊಪ್ಪದ ತುಂಗಾ ನಾಲೆ ಬಳಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ
ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ರಸ್ತೆ ಮೇಲೆ ಎಮ್ಮೆಗಳ ಮೃತದೇಹಗಳು ಬಿದ್ದಿರುವುದು ಮನಕಲಕುವಂತಿತ್ತು. ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಬಚಾವಾಗಿದ್ದಾರೆ.
ಎಮ್ಮೆಗಳ ಮಾಲೀಕರ ಪತ್ತೆ ಕಾರ್ಯ ನಡೆಯುತ್ತಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು