ಪತ್ರಿಕೋದ್ಯಮ ಮಾರಾಟದ ಸರಕಾಗಿದ್ದು ವಿಷಾದನೀಯ


Team Udayavani, Feb 14, 2021, 4:33 PM IST

sharath kalkoda speach

ತೀರ್ಥಹಳ್ಳಿ: ಸಮಾಜವನ್ನು ತಿದ್ದಬೇಕಾದ ಪತ್ರಿಕೋದ್ಯಮವೇ ಮಾರಾಟದ ಸರಕಾಗಿರುವುದು ವಿಷಾದನೀಯ ಎಂದು ಹಿರಿಯ ಪತ್ರಕರ್ತ ಹಾಗೂ ಮಾಸ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಶರತ್‌ ಕಲ್ಕೋಡ್‌ ತಿಳಿಸಿದರು.

ಗಾಯತ್ರಿ ಮಂದಿರದಲ್ಲಿ ನಡೆದ ತೀರ್ಥಹಳ್ಳಿ ಜೇಸಿಐ ನೂತನ ಪದಾ ಧಿಕಾರಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 1950-60ರ ದಶಕದಲ್ಲಿ ಪತ್ರಿಕೋದ್ಯಮದ ಬಗ್ಗೆ ಜನರಲ್ಲಿ ಅಪಾರ ಕಾಳಜಿ, ಗೌರವಗಳಿದ್ದವು. ಸಮಾಜ ಮುನ್ನಡೆಸುವವರು ದಾರಿ ತಪ್ಪಿದಾಗ ತಿದ್ದುತ್ತಿದ್ದವರೇ ಪತ್ರಕರ್ತರು. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಪತ್ರಕರ್ತರು ನಿರ್ಭೀತವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ, ಪತ್ರಕರ್ತರು ನೈತಿಕತೆಯನ್ನು ಮರೆತು ಮಾರಾಟವಾಗುತ್ತಿರುವುದು ಮತ್ತು ಯೆಲ್ಲೋ ಜರ್ನಲಿಸಂ ಬೆಳೆಯುತ್ತಿರುವುದು ಅತ್ಯಂತ ಖೇದಕರ ಎಂದು ವಿಷಾದ ವ್ಯಕ್ತಪಡಿಸಿದರು. ಇಂದು ಸರಕಾರಿ ಸ್ವಾಮ್ಯದ ದೂರದರ್ಶನ ಹೊರತುಪಡಿಸಿ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸುದ್ದಿಗಳು ನಂಬಲು ಅರ್ಹವೇ ಎಂದು ಪ್ರಶ್ನಿಸುವಂತಾಗಿದೆ. ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಪಕ್ಷಪಾತಿಯಾಗುತ್ತಿರುವುದು ಸರಿಯಲ್ಲ ಎಂದರು.

ಮುಖ್ಯ ಅಥಿತಿಗಳಾಗಿದ್ದ ನರ ಶಸ್ತ್ರಚಿಕಿತ್ಸಾ ತಜ್ಞ ಡಾ| ವಿನೋದ್‌ ಕುಮಾರ್‌ ಮಾತನಾಡಿ, ಜೇಸಿಐ ಸಂಸ್ಥೆಯು ಸಮಾಜಮುಖೀ ಕೆಲಸಗಳನ್ನು ಮಾಡುತ್ತಾ ವ್ಯಕ್ತಿತ್ವ ವಿಕಸನಗೊಳಿಸುತ್ತಿರುವುದು ಮಾತ್ರವಲ್ಲದೇ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಿರುವುದು ಅಭಿನಂದನಾರ್ಹ ಎಂದರು. 2021ರ ಸಾಲಿಗೆ ಅಧ್ಯಕ್ಷರಾಗಿ ನೀಯೋಜಿತರಾದ ತೀರ್ಥಹಳ್ಳಿಯ ಮೊನೋ ಆರ್ಟ್ಸ್ ಇದರ ಮಾಲೀಕರಾದ ಜೇಸಿ ಮನೋಜ್‌ ಕುಮಾರ್‌ ಅವರಿಗೆ ನಿರ್ಗಮಿತ ಅಧ್ಯಕ್ಷ ಜೇಸಿ ಶಶಿಧರ್‌ ಭಟ್‌ ಅವರು ಅ ಧಿಕಾರ ಹಸ್ತಾಂತರಿಸಿದರು. ಜೇಸಿಐ ವಲಯ 24ರ ಅಧ್ಯಕ್ಷ ಜೇಸಿಐ ಸೆನೆಟರ್‌ ಪ್ರಶಾಂತ್‌ ದೊಡ್ಡಮನೆ, ಜೇಸಿಐ ವಲಯ 24ರ ಉಪಾಧ್ಯಕ್ಷ ಜೇಸಿ ಅನುಷ್‌ ಗೌಡ ಇದ್ದರು.

2020ರ ಸಾಲಿನ ಕಾರ್ಯದರ್ಶಿಗಳಾದ ಜೇಸಿ ರಾಘವೇಂದ್ರ ಮತ್ತು ಜೇಸಿ ಕವಿತಾ ಪ್ರಭಾಕರ್‌ 2020ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿದರು. ಜೇಸಿ ವಿನುತ ಮುರುಳಿಧರ್‌, ಜೇಸಿ ರೂಪಾ ನಟರಾಜ್‌ ಶೇಟ್‌, ಜೇಸಿ ವಿನಂತಿ ಪೈ, ಜೇಸಿ ಅಶ್ವಿ‌ನಿ ಮೇಲಾಡಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ನೂತನ ಸದಸ್ಯರನ್ನು ಜೇಸಿಐ ಕಾರ್ಯದರ್ಶಿ ಜೇಸಿ ನಿಖೀಲ್‌ ಕಾಮತ್‌ ಸಭೆಗೆ ಪರಿಚಯಿಸಿ ಕಾರ್ಯಕ್ರಮದ ಕೊನೆಯಲ್ಲಿ ವಂದಿಸಿದರು.

2020ನೇ ಸಾಲಿನ ಜೇಸಿರೇಟ್‌ ಅಧ್ಯಕ್ಷರಾದ ಜೇಸಿ ಸ್ವಪ್ನ ಶಶಿಧರ್‌ ಭಟ್‌, 2021ನೇ ಸಾಲಿನ ಜೇಸಿರೇಟ್‌ ಅಧ್ಯಕ್ಷರಾದ ಜೇಸಿ ಶ್ವೇತಾ ಮನೋಜ್‌ ಕುಮಾರ್‌ ಮತ್ತು ಜೇಸಿರೇಟ್‌ ಕಾರ್ಯದರ್ಶಿ ನಿಧಿ  ನಿಖೀಲ್‌ ಕಾಮತ್‌, ಜೆಜೆಸಿ ಅಧ್ಯಕ್ಷರಾದ ಪ್ರಥಮ್‌ ಎನ್‌. ಆಚಾರ್ಯ ಮತ್ತು ಕಾರ್ಯಕ್ರಮ ನಿರ್ದೇಶಕರಾದ ಜೇಸಿ ಹರೀಶ್‌ ಇದ್ದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.