Sagara: ಶರಾವತಿ ಮುಳುಗಡೆ ಸಂತ್ರಸ್ತರ ಜಮೀನು ವಂಚನೆ ಪ್ರಕರಣ… ಕ್ರಮಕ್ಕೆ ಮನವಿ
Team Udayavani, Feb 1, 2024, 5:14 PM IST
ಸಾಗರ: ತಾಲೂಕಿನ ಮಲಂದೂರು ಗ್ರಾಮದ ಸರ್ವೇ ನಂ. 157ರಲ್ಲಿ ಏಳು ಜನ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಲಾಗಿದ್ದ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಸಂತ್ರಸ್ತರಿಂದ ಕಿತ್ತುಕೊಳ್ಳುವ ಪ್ರಯತ್ನ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಮಾತನಾಡಿ, ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನು ಕಳೆದುಕೊಂಡ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರ ನೀಡಿದ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸುತ್ತಿರುವುದು ಅಮಾನವೀಯ ಕೃತ್ಯವಾಗಿದೆ. ಸ್ಥಳೀಯ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷರಾಗಿದ್ದವರೇ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿದ್ದ 36 ಎಕರೆ ಜಮೀನು ಕಬಳಿಸುವ ಪ್ರಯತ್ನ ನಡೆಸುತ್ತಿದ್ದರು. ಜಮೀನಿಗೆ ಸಂಬಂಧಪಟ್ಟಂತೆ ನಕಲಿ ದಾಖಲೆ ಸೃಷ್ಟಿಸಿ ಸಂತ್ರಸ್ತರ ಜಮೀನು ಲಪಟಾಯಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ದೂರಿದರು.
ಈಗಾಗಲೇ ಶರಾವತಿ ಮುಳುಗಡೆ ಕುಟುಂಬದ 7 ಜನರಿಗೆ ಜಮೀನು ಸೇರಿದ್ದು ಎನ್ನುವುದಕ್ಕೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕಿದೆ. ಅರಣ್ಯಹಕ್ಕು ಕಾಯ್ದೆಯಲ್ಲಿ ಸಹ ಜಮೀನು ಸಂತ್ರಸ್ತರದ್ದು ಎನ್ನುವ ಪುರಾವೆಗಳಿವೆ. ಆದರೆ ಈ ನಡುವೆ ನಕಲಿ ದಾಖಲೆ ಸೃಷ್ಟಿಸಿ ಬಡಜನರಿಗೆ ಅನ್ಯಾಯ ಮಾಡುವ ಕೆಲಸವನ್ನೂ ಮಾಡಲಾಗುತ್ತಿದೆ. ತಕ್ಷಣ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸಬೇಕು. ಶರಾವತಿ ಸಂತ್ರಸ್ತ ಕುಟುಂಬಕ್ಕೆ ಮೀಸಲಿಟ್ಟ ೩೬ ಎಕರೆ ಜಮೀನು ಅವರಿಗೆ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು, ಮುರಳಿಧರ, ಎನ್.ಸಿ.ಗಂಗಾಧರ, ಲಕ್ಷ್ಮಣಪ್ಪ, ಗಣಪತಿ ಎಂ., ಪ್ರೇಮ ಕುಮಾರ್, ಸಂದೀಪ್, ನವೀನ್, ಲಲಿತಮ್ಮ, ತೀರ್ಥಪ್ಪ, ಅನಿಲ್, ಚನ್ನಪ್ಪ ಇನ್ನಿತರರು ಹಾಜರಿದ್ದರು.
ಇದನ್ನೂ ಓದಿ: Sagara: ವಿವಾಹಿತ ಮಹಿಳೆಗೆ ಕಿರುಕುಳ; ಆರೋಪಿಗೆ 2 ವರ್ಷ ಜೈಲು ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್