ಗುಡಿ ಕೈಗಾರಿಕೆಗಳಿಂದ ಗ್ರಾಮಾಭಿವೃದ್ಧಿ

ರೈತರು- ಮಹಿಳೆಯರು ಗುಡಿ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರಲಿ: ಶಿವಶಂಕರ

Team Udayavani, Feb 14, 2020, 4:17 PM IST

14-February-22

ಶಿಕಾರಿಪುರ: ಗಾಂಧಿಧೀಜಿ ಕನಸಿನಂತೆ ಗ್ರಾಮೀಣ ಪ್ರದೇಶದಲ್ಲಿ ಅತೀ ಸಣ್ಣ ಮತ್ತು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಅವು ಗ್ರಾಮಗಳ ಆತ್ಮ ಮತ್ತು ಜೀವಾಳವಾಗಿ ಹೊರಹೊಮ್ಮುತ್ತವೆ ಎಂದು ಸಿಂಡಿಕೇಟ್‌ ಬ್ಯಾಂಕ್‌ ಪ್ರಬಂಧಕ ಶಿವಶಂಕರ ಹೇಳಿದರು.

ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಮತ್ತು ಸಿಂಡಿಕೇಟ್‌ ಬ್ಯಾಂಕ್‌ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನದಲ್ಲಿ ಗ್ರಾಮೀಣ ಭಾಗದಿಂದ ನಗರಗಳಿಗೆ ಹೋದ ಯುವಕರು ಮರಳಿ ಗ್ರಾಮಕ್ಕೆ ಬರುತ್ತಿದ್ದಾರೆ. ಹಾಗಾಗಿ ಅವರ ಅನುಭವ ಕೌಶಲ್ಯವನ್ನು ಬಳಸಿಕೊಂಡು ಅತೀ ಸಣ್ಣ ಮತ್ತು ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಿದರೆ ಅವರಿಗೆ ಉದ್ಯಮದ ಅನುಭವ ಬರುತ್ತದೆ. ಜೊತೆಗೆ ಜನರಿಗೆ ಕೆಲಸ ನೀಡಿದರೆ ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಿದೆ. ಬ್ಯಾಂಕು ಕೂಡ ಅಂತವರಿಗೆ ಸಾಲ ಸೌಲಭ್ಯ ನೀಡಿ ಪ್ರೋತ್ಸಾಹಿಸುತ್ತದೆ. ರೈತರು, ಮಹಿಳೆಯರು ಕೂಡ ಈ ರೀತಿಯ ಕೈಗಾರಿಕೆಗಳನ್ನು ಸ್ಥಾಪಿಸಬಹುದು ಎಂದರು.

ನಬಾರ್ಡ್‌ ವಿಭಾಗೀಯ ಪ್ರಬಂಧಕ ಬಿ. ರವಿ ಮಾತನಾಡಿ, ಈ ಗ್ರಾಮದಲ್ಲಿ ರೈತರು ಬಹುದೊಡ್ಡ ಸಂಖ್ಯೆಯಲ್ಲಿದ್ದು ರೈತರ ಉತ್ಪಾದಕ ಗುಂಪು ರಚನೆ ಮಾಡಿದರೆ ನೀವು 500 ಜನ 1000 ರೂಪಾಯಿ ಠೇವಣಿ ಇಟ್ಟರೆ ನಬಾರ್ಡ್‌ ಕೂಡ ಪ್ರತಿಯೊಬ್ಬರಿಗೂ 1000 ರೂಪಾಯಿ ಕೊಡುತ್ತದೆ. ತೆರೆದ ಮಾರುಕಟ್ಟೆಯನ್ನು ಮಾಡಿದರೆ ಕೊಂಡುಕೊಳ್ಳುವ ಕಂಪನಿಯವರು ನಿಮ್ಮನ್ನು ಹುಡುಕಿಕೊಂಡು ಬರುತ್ತಾರೆ, ಆಗ ಮಧ್ಯವರ್ತಿಗಳು ಇಲ್ಲದಿದ್ದರೆ ನಿಮಗೆ ನಿಗದಿತ ಬೆಲೆ ಸಿಗುತ್ತದೆ. ಗೊಬ್ಬರ ಮತ್ತು ಔಷಧ ಸಂಗ್ರಹಿಸಲು ಹಾಗೂ ಬೆಳೆದ ಧ್ಯಾನವನ್ನು ಸಂಗ್ರಹಿಸಿಲು ಗೋದಾಮು ಕಟ್ಟಲು ನಬಾರ್ಡ್‌ನಿಂದ ಸಹಾಯಧನವಿದೆ. ಅರ್ಧ ಮಾಡಿ ಬಿಟ್ಟಿರುವ ಸರಕಾರಿ ಕಾಮಗಾರಿಗಳಿಗೆ ನಬಾರ್ಡ್‌ನಿಂದ ಸಹಾಯಧನವಿದೆ. ಇದನ್ನು ಬಳಕೆ ಮಾಡುವ ಮನಸ್ಸು ರೈತರಲ್ಲಿ ಬಂದು ಸ್ವಯಂ ಪ್ರೇರಣೆಯಿಂದ ರೈತ ಉತ್ಪಾದಕ ಗುಂಪು ಮತ್ತು ಜಂಟಿ ಬಾಧ್ಯತಾ ಗುಂಪು ರಚಿಸಿದರೆ ರೈತರಿಗೆ ಲಾಭವಿದೆ ಎಂದು ತಿಳಿಸಿದರು.

ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಮುಖ್ಯ ಸಮಾಲೋಚಕ ಗುಡದಯ್ಯ ಉಡುಗಣಿ ಆರ್ಥಿಕ ಸಾಕ್ಷರತೆಯ ಬಗ್ಗೆ ಮಾತನಾಡಿ, ಬೆಳಗ್ಗೆಯಿಂದ ಸಂಜೆಯವಗೆ ಹುಟ್ಟಿನಿಂದ ಸಾಯುವವರೆಗೆ ಹಣ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ದೊಡ್ಡ ಕಾಯಿಲೆ ಹಾಗೂ ಅಪಘಾತವಾದರೂ ಕೂಡ ಬದುಕಲು ಹವಣಿಸುವ ಮನುಷ್ಯ ಸಾಲಗಾರನಾದರೆ ಯಾರಿಗೂ ಹೇಳದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಹಾಗಾಗಿ ಜನರಿಗೆ ಆರ್ಥಿಕ ಸಾಕ್ಷರತೆಯ ಅರಿವು ತುಂಬಾ ಪ್ರಮುಖವಾಗಿದೆ ಎಂದರು.

ಶಿಕಾರಿಪುರ ಸಿಂಡಿಕೇಟ್‌ ಬ್ಯಾಂಕಿನ ಪ್ರಬಂಧಕ ಮುರಳಿ ಮೋಹನ್‌, ಕ್ಷೇತ್ರಿಯ ಕಚೇರಿಯ ಕೃಷಿ ಪ್ರಬಂಧಕ ರವಿ, ಗ್ರಾಮದ ಮುಖಂಡರಾದ ಶೇಖರಪ್ಪ, ಮಲ್ಲೇಶಪ್ಪ, ನಾಗಪ್ಪ, ಆರ್‌ಡಿಒ ರತ್ನ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.