ಸಂಶೋಧನೆ- ನಿರ್ವಹಣಾ ಕ್ಷೇತ್ರಕ್ಕೆ ಆದ್ಯತೆ ಕೊಡಿ
ಬೆಳೆ ಉತ್ಪಾದನೆಯಲ್ಲಿನ ಅಸಮತೋಲನ ನಿವಾರಿಸಿ: ಕೇಂದ್ರ ನೀತಿ ಆಯೋಗದ ಸದಸ್ಯ ಪ್ರೊ| ರಮೇಶ್ ಚಂದ್
Team Udayavani, Mar 1, 2020, 5:25 PM IST
ಶಿವಮೊಗ್ಗ: ಕೃಷಿ ಪದವೀಧರರು ಸರ್ಕಾರಿ ಉದ್ಯೋಗಕ್ಕೆ ಕಾಯದೆ ಸಂಶೋಧನೆ ಹಾಗೂ ನಿರ್ವಹಣಾ ಕ್ಷೇತ್ರಗಳತ್ತ ಹೆಚ್ಚಿನ ಗಮನ ಹರಿಸಬೇಕೆಂದು ಕೇಂದ್ರ ನೀತಿ ಆಯೋಗ ಹಾಗೂ 15ನೇ ಹಣಕಾಸು ಆಯೋಗದ ಸದಸ್ಯ ಪ್ರೊ| ರಮೇಶ್ ಚಂದ್ ಕರೆ ನೀಡಿದರು.
ನಗರದ ಕೃಷಿ ಮತ್ತು ತೋಟಗಾರಿಕೆ ವಿವಿಯ ಆವರಣದಲ್ಲಿ ನಡೆದ 5ನೇ ಘಟಿಕೋತ್ಸವದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಕೃಷಿ ಪದವೀಧರರಿಗೆ ಸಂಶೋಧನೆ ಹಾಗೂ ನಿರ್ವಹಣಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಇದನ್ನು ಬಳಸಿಕೊಳ್ಳಬೇಕೆಂದರು.
ಕೃಷಿ ಪದವೀಧರರಿಗಿಂತ ಬಿ.ಇ. ಪದವೀಧರರು ಹೆಚ್ಚಿದ್ದಾರೆ. ಆದರೂ ಸಹ ಅವರಿಗೆ ಉದ್ಯೋಗ ಸಮಸ್ಯೆ ಕಾಡುತ್ತಿಲ್ಲ. ಏಕೆಂದರೆ ಅವರು ಐಐಟಿ ಸೇರಿದಂತೆ ವಿವಿಧ ಸಂಶೋಧನಾ ಕೇಂದ್ರಗಳತ್ತ ಮುಖ ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಮೂರನೇ ಎರಡು ಭಾಗ ಮಳೆಯಾಶ್ರಿತ ಪ್ರದೇಶವಿದೆ. ಇದರಿಂದ ಒಂದೇ ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತಿದೆ. ಒಟ್ಟಾರೆ ದೇಶದ ಬೆಳೆ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಕಡಿಮೆ ಇದೆ. ಈ ಅಸಮತೋಲನವನ್ನು ಸರಿದೂಗಿಸಬೇಕಾಗಿದೆ ಎಂದರು.
ವಿಶೇಷವಾಗಿ ತೋಟಗಾರಿಕೆ ಬೆಳೆಯಿಂದಾಗಿ ರೈತರ ಆರ್ಥಿಕ ಮಟ್ಟ
ಸುಧಾರಿಸಲಿದೆ. ಆದ್ದರಿಂದ ರೈತರು ತೋಟಗಾರಿಕೆ ಬೆಳೆಗೆ ಆದ್ಯತೆ ನೀಡಬೇಕು. ಜೊತೆಗೆ ಬೆಳೆಯ ಸಂಸ್ಕರಣೆಗೆ ಯತ್ನಿಸಬೇಕು. ಅದಕ್ಕಾಗಿ ಸರ್ಕಾರ ಸುಧಾರಿತ ಕ್ರಮಗಳನ್ನು ಅನುಸರಿಸಬೇಕು ಎಂದ ಅವರು, ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯವು ಕೃಷಿಕ್ಷೇತ್ರದ ವಿಕಾಸಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.
ಇತ್ತೀಚೆಗೆ ಕೇಂದ್ರ ಕೃಷಿ ಸಚಿವರು ಬಜೆಟ್ಗೆ ಸಂಬಂಧಿಸಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ರಾಜ್ಯಗಳಿಗೆ ಸಲಹೆ ಕೂಡಾ ನೀಡಿದ್ದಾರೆ ಎಂದರು. ಕೃಷಿ ಸಚಿವ ಬಿ.ಸಿ. ಪಾಟೀಲ್, ಕುಲಪತಿ ಡಾ| ಎಂ.ಕೆ. ನಾಯ್ಕ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ