ಕೆಎಫ್‌ಡಿ ಆತಂಕ ತಗ್ಗಿಸಿದ ಕೊರೊನಾ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಾಯಿಲೆ ಪ್ರಮಾಣ ಕಡಿಮೆಆರೋಗ್ಯ ಇಲಾಖೆಯ ಮುಂಜಾಗೃತಾ ಕ್ರಮಕ್ಕೆ ಸಿಕ್ತು ಫಲಿತಾಂಶ

Team Udayavani, Mar 15, 2020, 3:51 PM IST

15-March-20

ಶಿವಮೊಗ್ಗ: ದೇಶದೆಲ್ಲೆಡೆ ಕೊರೋನಾ ವೈರಸ್‌ ಆತಂಕ ಸೃಷ್ಟಿಸುತ್ತಿದ್ದರೆ, ಮಲೆನಾಡಲ್ಲಿ ಮಾತ್ರ ಕೊರೊನಾದೊಂದಿಗೆ ಕೆಎಫ್‌ಡಿ ವೈರಸ್‌ ಆತಂಕ ಮನೆಮಾಡಿದೆ. ಆದರೆ ಪ್ರತಿ ವರ್ಷ ಕಾಡುವ ಕೆಎಫ್‌ಡಿ ವೈರಸ್‌ (ಮಂಗನ ಕಾಯಿಲೆ) ರುದ್ರನರ್ತನ ಈ ಬಾರಿ ತಗ್ಗಿದ್ದು ಸಮಾಧಾನದ ಸಂಗತಿಯಾಗಿದೆ. ಕಳೆದ ಬಾರಿ ಮಾರ್ಚ್‌ ಆರಂಭದೊಳಗೆ 10 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದರು.

ಈ ವರ್ಷ ಈ ವರೆಗೆ ಶಿವಮೊಗ್ಗ ಜಿಲ್ಲೆಯ ಒಬ್ಬರು ಹಾಗೂ ಉತ್ತರ ಕನ್ನಡದಲ್ಲಿ ಒಬ್ಬರು ಸಾವಿಗೀಡಾಗಿದ್ದು, ಕಾಯಿಲೆ ಪ್ರಮಾಣ ತಗ್ಗಿದೆ. ಪ್ರತಿ ವರ್ಷ ನವೆಂಬರ್‌ನಿಂದ ಜೂನ್‌ವರೆಗೆ ಕಾಡುವ ಭಯಾನಕ ವೈರಸ್‌ಗೆ ಈ ಬಾರಿ ಸರಕಾರ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳು ಫಲ ಕೊಟ್ಟಿವೆ. ಈ ಬಾರಿ ಜೂನ್‌ ತಿಂಗಳಿಂದಲೇ ವೈರಸ್‌ ಬಾ ಧಿತ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಚಾಲನೆ ನೀಡ ಲಾಗಿತ್ತು. ಶೇ. 70ರಷ್ಟು ಜನ ಲಸಿಕೆ ಪಡೆದಿದ್ದಾರೆ.

ಕೆಲವರು ಒಂದು, ಎರಡು, ಮೂರು ಬಾರಿ ಲಸಿಕೆ ಪಡೆದಿದ್ದಾರೆ. ಎರಡು ಮತ್ತು ಮೂರು ಬಾರಿ ಲಸಿಕೆ ಪಡೆದವರಲ್ಲಿ ವೈರಸ್‌ ಆಕ್ರಮಣವನ್ನು ತಡೆಯುವ ಚೈತನ್ಯ ಬಂದಿದ್ದು ಮರಣ ಪ್ರಮಾಣ ಮತ್ತು ಆಸ್ಪತ್ರೆಯಲ್ಲಿ ನರಳುವವರ ಸಂಖ್ಯೆ ಕಡಿಮೆಯಾಗಿದೆ.

97 ಮಂದಿಯಲ್ಲಿ ಪಾಸಿಟಿವ್‌: ವೈರಸ್‌ ಪೀಡಿತ ಐದು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಶಂಕಿತ ವ್ಯಕ್ತಿಗಳಿಂದ ರಕ್ತದ ಮಾದರಿ ಪಡೆಯಲಾಗಿದ್ದು ಈವರೆಗೆ 97 ಮಂದಿಯಲ್ಲಿ ಕೆಎಫ್‌ಡಿ ಪಾಸಿಟಿವ್‌ ಬಂದಿದೆ. ಇವರಲ್ಲಿ ಶಿವಮೊಗ್ಗದ 83, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರಿನ ತಲಾ ಏಳು ಮಂದಿಗೆ ಪಾಸಿಟಿವ್‌ ಬಂದಿದೆ. ಉಡುಪಿ, ಹಾಸನದಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ.

ಕಳೆದ ವರ್ಷ ಇದೇ ವಾರದಲ್ಲಿ (ಮಾ.7) 243 ಪಾಸಿಟಿವ್‌ ಕೇಸ್‌ಗಳಿದ್ದವು. 10 ಮಂದಿ ಮೃತಪಟ್ಟಿದ್ದರು. 2020 ಮಾ.7ರವರೆಗೆ
3790 ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದ್ದು 97 ಪಾಸಿಟಿವ್‌ ಬಂದಿದೆ. ರಕ್ತದ ಮಾದರಿ ಪರೀಕ್ಷೆಯಲ್ಲೂ ಈ ಬಾರಿ ಉತ್ತಮ ಸಾಧನೆ ಮಾಡಲಾಗಿದ್ದು ಕಳೆದ ಬಾರಿಗಿಂತ ದ್ವಿಗುಣಗೊಂಡಿದೆ. ಈವರೆಗೆ ಶಿವಮೊಗ್ಗದಲ್ಲಿ 2.20 ಲಕ್ಷ, ಉತ್ತರ ಕನ್ನಡ 50 ಸಾವಿರ, ಚಿಕ್ಕಮಗಳೂರು 24 ಸಾವಿರ, ಉಡುಪಿಯಲ್ಲಿ 30 ಸಾವಿರ ಮಂದಿಗೆ ವ್ಯಾಕ್ಸಿನೇಷನ್‌ ಮಾಡಲಾಗಿದೆ.

ಕಳೆದ ಬಾರಿಯ ಪೂರ್ವಸಿದ್ಧತೆ ಕೊರತೆಯಿಂದ ಪಾಠ ಕಲಿತಿರುವ ಆರೋಗ್ಯ ಇಲಾಖೆ, ಚಿಕಿತ್ಸಾ ಕ್ರಮವನ್ನು ಬದಲಾಯಿಸಿದೆ. ಜ್ವರ ಕಂಡುಬಂದಲ್ಲಿ ರಕ್ತದ ಮಾದರಿ ಕೊಡಲು ತಾಲೂಕು ಆಸ್ಪತ್ರೆಗೇ ಬರಬೇಕಿತ್ತು. ಈ ಬಾರಿ ಇದನ್ನು ತಪ್ಪಿಸುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ಆರು ಗಂಟೆ ಅವಧಿಯಲ್ಲಿ ವರದಿ ಸಹ ಕೈಸೇರುತ್ತಿದೆ. ಈ ಕಾರಣದಿಂದಲೂ ಪೀಡಿತರನ್ನು ಬಹುಬೇಗ ಪತ್ತೆ ಹಚ್ಚಲು ನೆರವಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

ಕಡಿಮೆಯಾದ ಮಂಗಗಳ ಸಾವು: ಕಳೆದ ವರ್ಷ ಸತ್ತ 41 ಮಂಗಗಳಲ್ಲಿ ಕೆಎಫ್‌ಡಿ ವೈರಸ್‌ ಕಾಣಿಸಿಕೊಂಡಿತ್ತು. ಈ ಬಾರಿ ಮಾ.7ರ ಒಳಗೆ ಮೂರು ಮಂಗಗಳಲ್ಲಿ (ಶಿವಮೊಗ್ಗದಲ್ಲಿ 2, ಉತ್ತರ ಕನ್ನಡದಲ್ಲಿ 1 ಮಂಗ) ಮಾತ್ರ ವೈರಸ್‌ ಕಾಣಿಸಿಕೊಂಡಿದೆ.

ಬಹುತೇಕ ಮಂದಿ ಚೇತರಿಕೆ
97 ಮಂದಿಯಲ್ಲಿ ಕೆಎಫ್‌ಡಿ ಪಾಸಿಟಿವ್‌ ಬಂದಿದ್ದರೂ ಬಹುತೇಕ ಮಂದಿ ಚೇತರಿಸಿಕೊಂಡು ಮನೆಯಲ್ಲಿ ಇದ್ದಾರೆ. ಸಾಗರ ತಾಲೂಕು ಆಸ್ಪತ್ರೆಯಲ್ಲಿ ಒಂದು, ತೀರ್ಥಹಳ್ಳಿಯಲ್ಲಿ 6, ಮೆಗ್ಗಾನ್‌ 2, ಮಣಿಪಾಲದಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಕಿ ಮಂದಿ ಚೇತರಿಸಿಕೊಂಡು ಮನೆಯಲ್ಲಿದ್ದು, ಮನೆಯಲ್ಲೇ ನಿಗಾ ಮುಂದುವರಿಸಲಾಗಿದೆ. ಪಾಸಿಟಿವ್‌ ಬಂದ ವ್ಯಕ್ತಿಗಳನ್ನು ಕಡ್ಡಾಯ ಒಂದು ವಾರ ಆಸ್ಪತ್ರೆಯಲ್ಲಿ ಉಳಿಸಿಕೊಂಡು ಚೇತರಿಸಿಕೊಂಡ ಮೇಲೆ ಮನೆಗೆ ಕಳುಹಿಸಲಾಗುತ್ತದೆ. ವ್ಯಾಕ್ಸಿನೇಷನ್‌ ಒಂದು, ಎರಡು ಡೋಸ್‌ ತೆಗೆದುಕೊಂಡ ಕಾರಣ ವೈರಸ್‌ ವಿರುದ್ಧ ಹೋರಾಡುವ ಶಕ್ತಿ ಕೆಲವರಲ್ಲಿ ಬಂದಿದೆ ಎನ್ನುತ್ತಾರೆ ವೈದ್ಯಾಧಿಕಾರಿಗಳು.

ಈ ಬಾರಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ, ರಕ್ತ ಮಾದರಿ ಪರೀಕ್ಷೆ ಅನೇಕ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಕೆಎಫ್‌ಡಿ ವೈರಸ್‌ ಬಾ ಧಿತರು, ಸಾವಿಗೀಡಾದವರ ಪ್ರಮಾಣ ಕಡಿಮೆ ಇದೆ. ಜೂನ್‌ವರೆಗೂ ಇಲಾಖೆ ಮುನ್ನೆಚ್ಚರಿಕೆ ವಹಿಸಲಿದೆ.
ಡಾ|ಕಿರಣ್‌,
ನಿರ್ದೇಶಕರು, ವಿಡಿಎಲ್‌ ಲ್ಯಾಬ್‌

„ಶರತ್‌ ಭದ್ರಾವತಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.