ನಿಲ್ಲದ ಕೋವಿಡ್ ಕೇಕೆ
ಜಿಲ್ಲೆಯಲ್ಲಿ ಮತ್ತೆ ಆರು ಮಂದಿಗೆ ಸೋಂಕು |ಸೋಂಕಿಂತರ ಸಂಖ್ಯೆ 89
Team Udayavani, Jun 13, 2020, 1:23 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ 6 ಮಂದಿಗೆ ಕೋವಿಡ್ ವೈರಸ್ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ. ಹಾಗೆಯೇ, 43 ಜನ ಗುಣಮುಖರಾಗಿ ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. 46 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ಪತ್ತೆಯಾದ 6 ಪ್ರಕರಣಗಳಲ್ಲಿ ಇಬ್ಬರು ಮಹಾರಾಷ್ಟ್ರದಿಂದ ವಾಪಸಾದವರಾಗಿದ್ದು, ಮೂವರಿಗೆ ಪಿ 2830 ಸಂಪರ್ಕದಿಂದ ಬಂದಿದೆ. ಬೆಂಗಳೂರಿನಿಂದ ಪಾದರಾಯನಪುರ ಡ್ನೂಟಿಯಲ್ಲಿದ್ದ ಕೆಎಸ್ಆರ್ಪಿ ಪೇದೆಗಳು ಈಚೆಗೆ ಜಿಲ್ಲೆಗೆ ಮರಳಿದ್ದರು. ಅವರಲ್ಲಿ 7 ಮಂದಿಗೆ ಪಾಸಿಟಿವ್ ಬಂದಿತ್ತು. ಇದರಲ್ಲಿ ಪಿ 2830 ಸಂಪರ್ಕದಲ್ಲಿದ್ದ ಮೂವರಿಗೆ ಕೋವಿಡ್ ದೃಢಪಟ್ಟಿದೆ.
12 ಮಂದಿ ಬಿಡುಗಡೆ: ಒಂದೆಡೆ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇತ್ತ ಗುಣಮುಖರಾಗಿ ಮನೆಗೆ ತೆರಳುತ್ತಿರುವ ಪ್ರಮಾಣವೂ ಹೆಚ್ಚಳವಾಗಿದೆ. ಶುಕ್ರವಾರ ಒಟ್ಟು 12 ಮಂದಿ ಗುಣಮುಖರಾಗಿದ್ದಾರೆ. ಪಿ 1499, ಪಿ 1501, ಪಿ 1503, ಪಿ 2852, ಪಿ 2853, ಪಿ 3854, ಪಿ 2855, ಪಿ3194, ಪಿ 3304, ಪಿ 3305, ಪಿ 3306, ಪಿ 3308 ಗುಣಮುಖರಾದವರು.
ವೈದ್ಯೆಗೆ ಕೋವಿಡ್: ಇನ್ನೂ ಜಿಲ್ಪಾಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ನೀಡುತ್ತಿರುವ ಹೊರಗುತ್ತಿಗೆ ಟ್ರೈನಿ ವೈದ್ಯೆಗೂ ಸೋಂಕು ಹರಡಿದೆ. ಅಷ್ಟೆಲ್ಲ ಮುಂಜಾಗ್ರತಾ ಕ್ರಮ ಕೈಗೊಂಡರೂ ಸೋಂಕು ಹರಡಿರುವುದು ವೈದ್ಯರಲ್ಲಿ ಆತಂಕ ಮನೆ ಮಾಡಿದೆ. ರಕ್ಷಕರಿಗೇ ರಕ್ಷಣೆ ಇಲ್ಲದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ