ಕೋವಿಡ್ ರೋಗ ಲಕ್ಷಣ ರಹಿತರ ಸ್ಥಳಾಂತರ
Team Udayavani, Jul 6, 2020, 1:21 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಮೆಗ್ಗಾನ್ ಕೋವಿಡ್ ಆಸ್ಪತ್ರೆಯಿಂದ ರೋಗ ಲಕ್ಷಣಗಳಿಲ್ಲದ 30 ಕೋವಿಡ್ ಪಾಸಿಟಿವ್ ರೋಗಿಗಳನ್ನು ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶನಿವಾರ ಸಂಜೆ ಸ್ಥಳಾಂತರಿಸಲಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವುದೇ ರೋಗ ರುಜಿನಗಳಿಲ್ಲದೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳನ್ನ ಮಾತ್ರ ಮೊರಾರ್ಜಿ ಶಾಲೆಗೆ ರವಾನಿಸಲಾಗಿದೆ. ಮೆಗ್ಗಾನ್ನಲ್ಲಿ ಶೀತ, ಜ್ವರ ಹಾಗೂ ಉಸಿರಾಟ ತೊಂದರೆಗಳ ಜೊತೆಗೆ ಕೋವಿಡ್ ಪಾಸಿಟಿವ್ ಕಂಡುಬಂದ ರೋಗಿಗಳನ್ನು ಮಾತ್ರ ಇಟ್ಟುಕೊಳ್ಳಲಾಗಿದೆ. ಇಷ್ಟು ದಿನ ರೋಗ- ರುಜಿನ ಕಂಡುಬರುವ ವ್ಯಕ್ತಿಗಳ ಜೊತೆ ಜ್ವರ, ಉಸಿರಾಟ ತೊಂದರೆ ಇಲ್ಲದೆ ಪಾಸಿಟಿವ್ ಕಾಣಿಸಿಕೊಂಡ ವ್ಯಕ್ತಿಗಳನ್ನು ಜೊತೆಯಲ್ಲಿಯೇ ಇರಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಸಿಸಿಸಿ(ಕೋವಿಡ್ ಕೇರ್ ಸೆಂಟರ್) ಗೆ ದಾಖಲಿಸಲಾಗುತ್ತಿದೆ.
ವಿಐಎಸ್ಎಲ್ ಹಾಗೂ ಗಾಜನೂರಿನ ಮೊರಾರ್ಜಿ ದೇಸಾಯಿ ಶಾಲೆಯನ್ನ ಸಿಸಿಸಿ ಎಂದು ಘೋಷಿಸಲಾಗಿದೆ. 32 ರೋಗ ರುಜಿನವಿಲ್ಲದ ಕೋವಿಡ್ ಸೋಂಕಿತರನ್ನು ಮೆಗ್ಗಾನ್ನಿಂದ ಗಾಜನೂರಿನ ಮುರಾರ್ಜಿ ದೇಸಾಯಿ ಶಾಲೆಗೆ ಸ್ಥಳಾಂತರಿಸಲಾಯಿತು. ಆದರೆ ಅವರಿಗೆ ರಾತ್ರಿ 10 ಗಂಟೆ ಆದರೂ ಇನ್ನೂ ಊಟ, ಬಿಸಿ ನೀರು ನೀಡಿರಲಿಲ್ಲವೆಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಇವರಿಗೆ 8-9 ಗಂಟೆಯ ಒಳಗೆ ಊಟ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ