Shimoga Dasara 2023; ಕೊನೆ ಕ್ಷಣದ ಬದಲಾವಣೆ; ಈ ಬಾರಿ ವಾಹನದಲ್ಲಿ ಅಂಬಾರಿ ಮೆರವಣಿಗೆ
Team Udayavani, Oct 24, 2023, 10:43 AM IST
ಸಂಗ್ರಹ ಚಿತ್ರ
ಶಿವಮೊಗ್ಗ: ಈ ಬಾರಿಯ ಶಿವಮೊಗ್ಗ ವಿಭಿನ್ನವಾಗಿ ನಡೆಯಲಿದೆ. ಜಂಬೂ ಸವಾರಿಗೆ ಬಂದಿದ್ದ ಭಾನುಮತಿ ಆನೆ ಮರಿ ಹಾಕಿದ ಹಿನ್ನೆಲೆಯಲ್ಲಿ ಈ ಬಾರಿ ಅಂಬಾರಿಯನ್ನು ವಾಹನದಲ್ಲಿ ಮೆರವಣಿಗೆ ಮಾಡಲು ಶಿವಮೊಗ್ಗ ಮಹಾನಗರ ಪಾಲಿಕೆ ತೀರ್ಮಾನಿಸಿದೆ. ಸಾಗರ, ಹೇಮಾವತಿ ಆನೆಗಳು ಮೆರವಣಿಗೆಯಲ್ಲಿ ಸಾಗಲಿವೆ.
ಪ್ರತಿ ವರ್ಷ ಸಾಗರ ಆನೆಯು ಅಂಬಾರಿ ಹೊರುತಿತ್ತು ಅದರ ಜತೆಗೆ ಎರಡು ಆನೆಗಳು ಸಾಥ್ ನೀಡುತ್ತಿದ್ದವು. ಕುಂತಿ ಆನೆ ಮರಿ ಹಾಕಿದ್ದು ಭಾನುಮತಿ ಗರ್ಭಿಣಿಯಾಗಿದ್ದ ಕಾರಣಕ್ಕೆ ಹೇಮಾವತಿ, ನೇತ್ರಾವತಿ ಆನೆಗಳನ್ನು ಸಾಗರ ಆನೆಗೆ ಸಾಥ್ ನೀಡಲು ಕರೆತರಲಾಗಿತ್ತು. ಆದರೆ ಇದೀಗ ನೇತ್ರಾವತಿ ಗರ್ಭ ಧರಿಸಿದ ಯಾವುದೇ ಲಕ್ಷಣ ಬಿಟ್ಟು ಕೊಡದೆ ಮರಿ ಹಾಕಿದೆ.
ಈಗ ನೇತ್ರಾವತಿ ಆನೆಯನ್ನು ಸಕ್ರೆಬೈಲು ಬಿಡಾರಕ್ಕೆ ಕಳುಹಿಸಲಾಗಿದ್ದು ಸಾಗರ ಆನೆ ಮೇಲೆ ಅಂಬಾರಿ ಹೊರಿಸದೆ ಮೆರವಣಿಗೆಯಲ್ಲಿ ಕೊಂಡೊಯ್ಯಲು ತೀರ್ಮಾನಿಸಲಾಗಿದೆ.
ಮೆರವಣಿಗೆ ಮಾರ್ಗ: ಕೋಟೆ ಅರಮನೆಯಿಂದ ಹೊರಟು ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ಅಮೀರ್ ಅಹ್ಮದ್ ಸರ್ಕಲ್, ನೆಹರು ರಸ್ತೆ, ಜೈಲ್ ಸರ್ಕಲ್, ಲಕ್ಷ್ಮಿ ಟಾಕೀಸ್ ಮೂಲಕ ಸಾಗಿ ಫ್ರೀಡಂ ಪಾರ್ಕ್ನಲ್ಲಿ ಸಮಾರೋಪಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ