ಕೋವಿಡ್ ನಿಂದ ಸಮಾಜಸೇವೆಗೆ ಕಂಟಕ
Team Udayavani, Jul 3, 2020, 1:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಕೋವಿಡ್ ನಿಂದಾಗಿ ಜಗತ್ತು ಆತಂಕಕ್ಕೆ ಒಳಗಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲೂ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಇಂತಹ ಸನ್ನಿವೇಶದಲ್ಲಿ ಲಯನ್ಸ್ ಕ್ಲಬ್ ಸೇರಿದಂತೆ ಮತ್ತಿತರೆ ಸಂಘ-ಸಂಸ್ಥೆಗಳ ಸಾಮಾಜಿಕ ಸೇವೆಗೂ ಸಂಕಷ್ಟ ಬಂದೊದಗಿದೆ ಎಂದು ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷ ಲಯನ್ಸ್ ಗಿರೀಶ್ ಕೆ.ನಾಯಕ್ ಆತಂಕ ವ್ಯಕ್ತಪಡಿಸಿದರು.
ಇಲ್ಲಿನ ಸಾಗರ ರಸ್ತೆಯಲ್ಲಿರುವ ಲಯನ್ಸ್ ಭವನದಲ್ಲಿ ಬುಧವಾರ ನಡೆದ 2020-2021ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಪ್ರಸಕ್ತ ವರ್ಷ ಪರಿವರ್ತನೆ ನಮ್ಮ ಸಂಕಲ್ಪ ಎಂಬ ಧ್ಯೇಯದೊಂದಿಗೆ ಲಯನ್ಸ್ ಕ್ಲಬ್ ಕಾರ್ಯ ನಿರ್ವಹಿಸಲಿದ್ದು ಕೋವಿಡ್ ವಾರಿಯರ್ಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಲಯನ್ಸ್ ಕ್ಲಬ್ ಜಿಲ್ಲೆ 317-ಸಿ ಜಿಎಲ್ಟಿ ಸಂಚಾಲಕ ಲಯನ್ ಸುನಿಲ್ ಸಾಲಿಯಾನ್, ಎರಡನೇ ಉಪ ರಾಜ್ಯಪಾಲ ವೀರಭದ್ರಪ್ಪ, ಪ್ರಾಂತೀಯ ಅಧ್ಯಕ್ಷ ಅನಂತ ಕೃಷ್ಣ ನಾಯಕ್, ಕಾರ್ಯದರ್ಶಿ ಲಯನ್ ಎಂ.ಜಗದೀಶ್, ಖಜಾಂಚಿ ಲಯನ್ ಅಪ್ಪುಕುಟ್ಟಿ, ವಲಯಾಧ್ಯಕ್ಷ ಲಯನ್ ಜಿ.ಎಸ್. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್