ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ: ಬಿವೈಆರ್‌

ಶಿಕ್ಷಣ- ಪ್ರವಾಸೋದ್ಯಮ- ನೀರಾವರಿಯತ್ತ ವಿಶೇಷ ಗಮನ |25 ಕೋಟಿ ರೂ. ವೆಚ್ಚದಲ್ಲಿ ಮಾಲ್ಗುಡಿ ಹೆರಿಟೇಜ್‌ ಬಿಲ್ಡಿಂಗ್‌ ನಿರ್ಮಾಣ

Team Udayavani, Jun 1, 2020, 1:39 PM IST

01-June-13

ಶಿವಮೊಗ್ಗ: ಸಂವಾದದಲ್ಲಿ ಪಾಲ್ಗೊಂಡಿದ್ದ ಸಂಸದ ಬಿ.ವೈ.ರಾಘವೇಂದ್ರ.

ಶಿವಮೊಗ್ಗ: ಜಿಲ್ಲೆಯ ಜನರ ಆಶೋತ್ತರ ಹಾಗೂ ನಿರೀಕ್ಷೆಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಾಧ್ಯವಾಗುವ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಭಾನುವಾರ ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕಾಗಿ ಹಾಗೂ ಮುಂದಿನ 2ದಶಕಗಳ ಅವಧಿಯ ದೂರದೃಷ್ಟಿಯನ್ನಿಟ್ಟುಕೊಂಡು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು, ವಿದ್ಯಾವಂತ ಯುವಜನರು, ಸಮಾಜಸೇವೆ, ಶಿಕ್ಷಣ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಖ್ಯಾತನಾಮರಾಗಿರುವ ಗಣ್ಯರೊಂದಿಗೆ “ನಮ್ಮ ಕನಸಿನ ಶಿವಮೊಗ್ಗ’ ತಂಡವು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದಾಗಿ ಆಯೋಜಿಸಿದ್ದ ಡಿಜಿಟಲ್‌ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಜನಸಂಪರ್ಕಕ್ಕೆ ಅತ್ಯಗತ್ಯವಾಗಿರುವ ವಿಮಾನ ನಿಲ್ದಾಣ, ರೈಲು ಸಂಪರ್ಕ, ರಸ್ತೆ ಸಾರಿಗೆ ಹಾಗೂ ಬೃಹತ್‌ ಸೇತುವೆಗಳ ನಿರ್ಮಾಣ, ಶಿಕ್ಷಣ, ಪ್ರವಾಸೋದ್ಯಮ, ನೀರಾವರಿ, ಕೈಗಾರಿಕೆ ಮುಂತಾದ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದರು. ಸತತ 25 ವರ್ಷಗಳ ನಂತರ ರಾಜ್ಯ ಮತ್ತು ಕೇಂದ್ರದಲ್ಲಿ ಏಕರೀತಿಯ ಸರ್ಕಾರ ರಚನೆಯಾಗಿರುವುದು ಕೂಡ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಹಾಯಕವಾಗಿದೆ ಎಂದ ಅವರು, ಶಿವಮೊಗ್ಗದಲ್ಲಿ ರೈಲ್ವೆ ಕೋಚಿಂಗ್‌ ಸೆಂಟರ್‌ ಮತ್ತು ಟರ್ಮಿನಲ್‌ ನಿರ್ಮಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಸಾಕಷ್ಟು ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಇಷ್ಟೇ ಅಲ್ಲದೆ ಈಗಾಗಲೇ ತಿರುಪತಿ, ಚೆನ್ನೈನಂತಹ ಮೆಟ್ರೊಪಾಲಿಟನ್‌ ಸಿಟಿಗಳಿಗೆ ರೈಲು ಸಂಪರ್ಕ ಕಲ್ಪಿಸಲಾಗಿದೆ. ಆದಾಗ್ಯೂ ರೈಲು ವೇಳಾಪಟ್ಟಿಯಲ್ಲಿ ಜನರಿಗೆ ಅನುಕೂಲವಾಗುವಂತೆ ಸಮಯ ಹೊಂದಾಣಿಕೆ ಮಾಡಬೇಕಾದ ತುರ್ತು ಅಗತ್ಯವಿದೆ. ಇದಲ್ಲದೆ ಮಲೆನಾಡಿನಿಂದ ಬಯಲು ಸೀಮೆಗೆ ರೈಲು ಸಂಪರ್ಕ ಕಲ್ಪಿಸಲು ಉದ್ದೇಶಿಸಿದ್ದು ಶಿವಮೊಗ್ಗ- ರಾಣೇಬೆನ್ನೂರು ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ವರ್ತುಲ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ರೈಲ್ವೆ ನಿಲ್ದಾಣದ ಎದುರು ಭಾಗದಲ್ಲಿ ನಿಂತೇ ಹೋಗಿದ್ದ ರಿಂಗ್‌ ರೋಡ್‌ ಕಾಮಗಾರಿ ಆರಂಭಗೊಂಡಿದೆ. ಅದಕ್ಕಾಗಿ ಸರ್ಕಾರ ಈಗಾಗಲೇ 12ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದೆ. ಅಲ್ಲದೆ ಶಿವಮೊಗ್ಗ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯನ್ನೂ ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೆ ಹೊಸನಗರ- ಸಾಗರ- ತೀರ್ಥಹಳ್ಳಿ ತಾಲೂಕುಗಳಿಗೆ ಸಂಪರ್ಕ ಒದಗಿಸುವ ಅರಸಾಳು ರೈಲು ನಿಲ್ದಾಣವನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ ಸುಮಾರು 25 ಕೋಟಿ ವೆಚ್ಚದಲ್ಲಿ ಮಾಲ್ಗುಡಿ ಹೆರಿಟೇಜ್‌ ಬಿಲ್ಡಿಂಗ್‌ ನಿರ್ಮಾಣ ಮಾಡಲಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಗೊಳ್ಳಲಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ 5000 ಕೋಟಿ ರೂ. ಗಳ ವೆಚ್ಚದ ಶಿವಮೊಗ್ಗ-ತುಮಕೂರು ಚತುಷ್ಪಥ ರಸ್ತೆಯ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. 600 ಕೋಟಿ ವೆಚ್ಚದ ಚಿತ್ರದುರ್ಗ – ಶಿವಮೊಗ್ಗ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ಕೋವಿಡ್ ಸೋಂಕಿನಿಂದಾಗಿ ದೂರದ ಊರುಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವ ಉದ್ಯೋಗಿಗಳು ತಮ್ಮ ತವರಿಗೆ ಹಿಂದಿರುಗಿ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ. ಅಂತಹವರಿಗೆ ಇಂಟರ್‌ ನೆಟ್‌ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ. ಅಲ್ಲದೆ ಜಿಯೊ. ಏರ್ಟೆಲ್‌ ಮತ್ತು ವೊಡಾಫೋನ್‌ನಂತಹ ಖಾಸಗಿ ಟೆಲಿಕಾಂ ಕಂಪನಿಗಳೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರ ಈಗಾಗಲೇ 60 ಟವರ್‌ಗಳು ಸ್ಥಾಪನೆಗೊಂಡಿವೆ. ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಗಮನ ಹರಿಸಲಾಗಿದೆ. ಜೋಗದ ಅಭಿವೃದ್ಧಿಗಾಗಿ ಪ್ರಾ ಧಿಕಾರಕ್ಕೆ 10 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಉಡುಗುಣಿ, ನಗರ ಕೋಟೆ, ಶಿವಪ್ಪ ನಾಯಕನ ಅರಮನೆ, ಕವಲೇದುರ್ಗ ಮುಂತಾದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ ಎಂದರು.

ಸಂವಾದದಲ್ಲಿ ಉದ್ಯಮಿಗಳಾದ ಲಕ್ಷ್ಮೀ ನಾರಾಯಣ ಕಾಶಿ, ವಾಸುದೇವ, ಶರತ್‌ ಭೂಪಾಳಂ, ಡಾ| ಲಕ್ಷ್ಮೀ ದೇವಿ ಗೋಪಿನಾಥ್‌, ರಾಜೇಶ್‌ ಭದ್ರಾವತಿ ಇತರರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.