ಲಾಕ್ಡೌನ್ಗೆ ಉತ್ತಮ ಬೆಂಬಲ
Team Udayavani, Jul 6, 2020, 1:13 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಿವಮೊಗ್ಗ: ಕೋವಿಡ್ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವ ಶಿವಮೊಗ್ಗದಲ್ಲಿ ಭಾನುವಾರದ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಟ್ಟ ಬೆನ್ನಲ್ಲಿ ಅಷ್ಟಕ್ಕೆ ಮಾತ್ರ ಜನ ಓಡಾಡುತ್ತಿರುವುದು ಕಂಡುಬರುತ್ತಿದೆ.
ಜಿಟಿಜಿಟಿ ಮಳೆಗೂ ಸಹ ಜನ ಹೊರಗೆ ಬರಲು ಹಿಂದು ಮುಂದು ನೋಡುತ್ತಿರುವುದು ಕಂಡುಬರುತ್ತಿದೆ. ಹಾಲು, ದಿನಸಿ ಹಾಗೂ ಇತರೆ ಖರೀದಿಗೆ ಜನ ಅಲ್ಲಲ್ಲಿ ಕಂಡುಬರುತ್ತಿದ್ದಾರೆ. ಶಿವಮೊಗ್ಗದ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜನರ ಮತ್ತು ವಾಹನಗಳು ಹೆಚ್ಚಾಗಿ ಕಂಡುಬಂದರೂ ಸಹ ತಾಲೂಕುಗಳಿಗೆ ಹೋಗಲು ಅಲ್ಲಿ ಇಲ್ಲಿ ಬಸ್ಗಳು ಇವೆಯಾ? ಎಂದು ವಿಚಾರಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಬ್ಧಗೊಂಡಿದೆ. ಭಾನುವಾರ ಲಾಕ್ ಡೌನ್ ಎಂದು ತಿಳಿದು ಬಂದರೂ ಸಹ ಅಲ್ಲಿ ಇಲ್ಲಿ ಮಹಿಳೆಯರು ಮಕ್ಕಳು ಕಂಡುಬಂದರು. ಜೊತೆಗೆ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಬೆಳಗ್ಗೆಯಿಂದ ಯಾವುದೇ ಪೊಲೀಸ್ ಆಗಲಿ ಅಥವಾ ಗೃಹ ರಕ್ಷಕದಳದವರನ್ನಾಗಲಿ ನಿಯೋಜಿಸದೆ ಇರುವುದು, ಬ್ಯಾರಿಕೇಡ್ಗಳನ್ನು ರಸ್ತೆಯಲ್ಲಿ ಹಾಕದಿರುವುದು ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ