ಕೋವಿಡ್ ಸೋಂಕಿನಿಂದ ಗುಣಮುಖ: 17 ಮಂದಿ ಬಿಡುಗಡೆ
Team Udayavani, Jun 1, 2020, 1:28 PM IST
ಶಿವಮೊಗ್ಗ: ಕೋವಿಡ್ ಸೋಂಕಿನಿಂದ ಗುಣಮುಖರಾದ 17 ಮಂದಿಯನ್ನು ಭಾನುವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಕೊನೆ ಹಂತದ ತಪಾಸಣೆ ಬಳಿಕ ಕೋವಿಡ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇವರನ್ನೆಲ್ಲ ಡಿಸ್ಚಾರ್ಜ್ ಮಾಡಲಾಯಿತು. ತೀರ್ಥಹಳ್ಳಿ ತಾಲೂಕಿನ ಆರು, ಶಿವಮೊಗ್ಗ ತಾಲೂಕಿನ ನಾಲ್ಕು, ಹೊಸನಗರದ ಮೂವರು, ಸೊರಬದ ಇಬ್ಬರು, ಶಿಕಾರಿಪುರದ ಒಬ್ಬರು, ಸಾಗರದ ಒಬ್ಬರನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ| ಗುರುಪಾದಪ್ಪ ತಿಳಿಸಿದ್ದಾರೆ.
ಮೊದಲಿಗೆ ತೀರ್ಥಹಳ್ಳಿ ತಾಲೂಕಿನ ಆರು ಮಂದಿಯನ್ನು ಡಿಸ್ಚಾರ್ಜ್ ಮಾಡಿ, ಬಿಡುಗಡೆ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಅವರಿಗೆ ಬೀಳ್ಕೊಡುಗೆ ನೀಡಿದರು. ಕೆಲವು ಹೊತ್ತಿನ ಬಳಿಕ ಮತ್ತೊಂದು ತಾಲೂಕಿನ ಕೆಲವರನ್ನು ಬೀಳ್ಕೊಡಲಾಯಿತು. ಸಂಜೆ ವೇಳೆ ಹಂತ ಹಂತವಾಗಿ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು. ಸೋಂಕಿತರಿಗೆ ಚಿಕಿತ್ಸೆ ನೀಡಿ, ಎರಡು ಬಾರಿ ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗಿದೆ. ಎರಡು ಬಾರಿಯೂ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ 17 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಗುಣಮುಖವಾಗಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ಶಿವಮೊಗ್ಗದ ಒಟ್ಟು ಸೋಂಕಿತರು 41. ಈ ಪೈಕಿ ಮೇ 25ರಂದು ನಾಲ್ಕು ಮಂದಿಯನ್ನು ಬಿಡುಗಡೆ ಮಾಡಲಾಗಿತ್ತು. ಮೇ 29ರಂದು ಮೂವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಈಗ ಮೂರನೇ ಹಂತದಲ್ಲಿ 17 ಮಂದಿ ಗುಣಮುಖವಾಗಿ, ಬಿಡುಗಡೆಯಾಗುತ್ತಿದ್ದಾರೆ. ಇದರಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ