ಸ್ವ-ಉದ್ಯೋಗಕ್ಕೆ ಸಾಲ ಯೋಜನೆ: ಡಿ.ಎಸ್‌. ಅರುಣ್‌


Team Udayavani, Feb 29, 2020, 6:32 PM IST

29-February-36

ಶಿವಮೊಗ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆಗಳನ್ನು ಇದೇ ಮೊದಲ ಬಾರಿಗೆ ಆರಂಭಿಸಲಾಗಿದೆ ಎಂದು ನಿಗಮದ ಅಧ್ಯಕ್ಷ  .ಎಸ್‌. ಅರುಣ್‌ ಅವರು ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಯವೈಶ್ಯ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ಆರಂಭಿಸಲಾಗಿದೆ. ಈ ಯೋಜನೆಯಡಿ ಇಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ಗರಿಷ್ಟ ಒಂದು ಲಕ್ಷ ರೂ. ಶೈಕ್ಷಣಿಕ ಸಾಲ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ 6 ಲಕ್ಷ ರೂ. ಒಳಗಿರಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲಾಗುವುದು. ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು ವ್ಯಾಸಂಗ ಪೂರ್ಣಗೊಂಡ 4ನೇ ತಿಂಗಳಿನಿಂದ 3 ವರ್ಷಗಳ ಅವಧಿಯಲ್ಲಿ ಪಾವತಿಸಬೇಕು ಎಂದು ಹೇಳಿದರು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಜಿದಾರರು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಟ 1ಲಕ್ಷ ರೂ. ಆರ್ಥಿಕ ನೆರವು ಒದಗಿಸಲಾಗುವುದು. ಸಾಂಪ್ರದಾಯಿಕ ವೃತ್ತಿಗಳಲ್ಲದೆ ಹಸು ಸಾಕಣೆ, ಸೇವಾ ಚಟುವಟಿಕೆಗಳಿಗೆ ಸಹ ಈ ನೆರವು ಬಳಸಿಕೊಳ್ಳಬಹುದು. ಈ ಯೋಜನೆಯಡಿ ಕನಿಷ್ಟ 50 ಸಾವಿರ ರೂ. ನೆರವು ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20ರಷ್ಟು ಸಹಾಯಧನವಾಗಿ ಉಳಿದ ಮೊತ್ತವನ್ನು ಸಾಲದ ರೂಪದಲ್ಲಿ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ನೀಡಲಾಗುವುದು. ಅರ್ಜಿದಾರರ ವಾರ್ಷಿಕ ವರಮಾನ 3 ಲಕ್ಷ ರೂ.ಗಿಂತ ಹೆಚ್ಚಿರಬಾರದು. ಅರ್ಜಿದಾರರು 18 ವರ್ಷದಿಂದ 45 ವರ್ಷ ಒಳಗಿನವರಾಗಿರಬೇಕು ಎಂದು ಅವರು ಹೇಳಿದರು.

ಆರ್ಯವೈಶ್ಯ ಸಮುದಾಯದವರಿಗೆ ಈಗಾಗಲೇ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ನಿಗಮಕ್ಕೆ 10 ಕೋಟಿ ರೂ. ಅನುದಾನ ಸರ್ಕಾರ ಒದಗಿಸಿದ್ದು, ಹೊಸ ಬಜೆಟ್‌ನಲ್ಲಿ ಹೆಚ್ಚು ಅನುದಾನದ ಮೊತ್ತವನ್ನು ನಿರೀಕ್ಷಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.