ಈಡಿಗ ಮತಗಳ ಮೇಲೆ  ಬಿಜೆಪಿ- ಜೆಡಿಎಸ್‌ ಕಣ್ಣು


Team Udayavani, Oct 25, 2018, 6:45 AM IST

bjp-jds-shiva.jpg

ಶಿವಮೊಗ್ಗ: ಲೋಕಸಭೆ ಉಪಚುನಾವಣೆ ಕಣ ಮಧು ಬಂಗಾರಪ್ಪ ಸ್ಪರ್ಧೆಯೊಂದಿಗೆ ಮತ್ತೂಮ್ಮೆ ರಂಗೇರಿದೆ. ಜತೆಗೆ ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಹೆಸರು ಮತ್ತೆ ಮುನ್ನಲೆಗೆ ಬಂದಿದ್ದು, ಸುಮಾರು ಮೂರು ಲಕ್ಷದಷ್ಟಿರುವ ಈಡಿಗ ಮತಗಳ ಮೇಲೆ ಬಿಜೆಪಿ-ಜೆಡಿಎಸ್‌ ಎರಡೂ ಪಕ್ಷಗಳು ಕಣ್ಣಿಟ್ಟಿವೆ.

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರವನ್ನೂ ಒಳಗೊಂಡಿರುವ ಈ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಈಡಿಗ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತಾ ಬಂದಿದೆ. ಹೀಗಾಗಿ ಬಂಗಾರಪ್ಪ ಹೆಸರನ್ನು ಪದೇ ಪದೇ ಉತ್ಛರಿಸುವ ಮೂಲಕ ಸಮುದಾಯದ ಮತಗಳನ್ನು ಕ್ರೋಢೀಕರಿಸುವ ಕೆಲಸಕ್ಕೆ ಅಭ್ಯರ್ಥಿ ಮಧು ಬಂಗಾರಪ್ಪ ಮುಂದಾಗಿದ್ದಾರೆ.

ತನ್ನ ತಂದೆಯ ಕೊನೆಯ ಎರಡು ಚುನಾವಣೆಗಳ ಸೋಲಿಗೆ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿರುವ ಮಧು, ಬಂಗಾರಪ್ಪ ಅವರ ಆದರ್ಶಗಳಂತೆ ನಡೆಯುತ್ತೇನೆ ಎಂದು ಸಭೆ-ಸಮಾರಂಭಗಳಲ್ಲಿ ಪ್ರಸ್ತಾಪಿಸುತ್ತಿದ್ದಾರೆ. ಇತ್ತ ಶಾಸಕ ಕುಮಾರ್‌ ಬಂಗಾರಪ್ಪ ಹಾಗೂ ಹರತಾಳು ಹಾಲಪ್ಪ ಅವರು, ಬಿಜೆಪಿಯು ಸಮುದಾಯಕ್ಕೆ ನೀಡಿರುವ ಆದ್ಯತೆಯನ್ನು ಪ್ರಸ್ತಾಪಿಸುತ್ತಾ ಪ್ರತಿ ದಿನ ಮಧು ಬಂಗಾರಪ್ಪ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದ್ದಾರೆ.

ಕಾಗೋಡು ಕೈಹಿಡಿದಿಲ್ಲ: ಕಾಗೋಡು ತಿಮ್ಮಪ್ಪ ಅವರನ್ನು ಈಡಿಗ ಸಮಾಜದ ಪ್ರಶ್ನಾತೀತ ನಾಯಕ ಎನ್ನಲಾದರೂ ಕಳೆದ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಡಿಗರು ಯಾಕೆ ಅವರ ಕೈಹಿಡಿಯಲಿಲ್ಲ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಅಲ್ಲದೇ ಬಂಗಾರಪ್ಪ ಹಾಗೂ ಕಾಗೋಡು ತಿಮ್ಮಪ್ಪ ಕೊನೆವರೆಗೂ ವಿರೋಧಿ ಗಳಾಗಿಯೇ ಉಳಿದಿದ್ದರು.

ಈಗ ಮಧು ಬಂಗಾರಪ್ಪ ಗೆದ್ದರೆ ನನ್ನ ಮಗನೇ ಗೆದ್ದಂತೆ ಎಂದು ಕಾಗೋಡು ಹೇಳುವ ಮೂಲಕ ಈಡಿಗರ ಅನುಕಂಪ ಗಿಟ್ಟಿಸಿಲು ಪ್ಲಾನ್‌ ನಡೆಯುತ್ತಿದೆ. ಅಲ್ಲದೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರು ಗಟ್ಟಿ ಧ್ವನಿಯಲ್ಲಿ ಬಂಗಾರಪ್ಪ ಹೆಸರನ್ನು ಹೇಳುತ್ತಿದ್ದು, ಅವರು ನಮಗೆ ಆದರ್ಶ ಎನ್ನುತ್ತಿದ್ದಾರೆ.

ಬಿಜೆಪಿ ಕೌಂಟರ್‌: ಈಡಿಗ ಮತಗಳನ್ನು ಒಡೆಯಲು ಬಿಜೆಪಿ ನಿರಂತರ ಪ್ರಯತ್ನಿಸುತ್ತಿದ್ದು, ಶಾಸಕರಾದ ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಾರಕ್ಕೆ ಹೆಚ್ಚಾಗಿ ಬಳಸಿಕೊಳ್ಳುತ್ತಿದೆ. ಈ ನಾಯಕರು ಶರಾವತಿ ಡೆಂಟಲ್‌ ಕಾಲೇಜು ಈಡಿಗ ಸಮಾಜದ ಆಸ್ತಿ. ಸಮಾಜದ ಬಗ್ಗೆ ಕಾಳಜಿ ಇದ್ದರೆ ಮಧು ಬಂಗಾರಪ್ಪ ಅದನ್ನು ಸಮಾಜಕ್ಕೆ ಬಿಟ್ಟುಕೊಡಲಿ ಎನ್ನುತ್ತಿದ್ದಾರೆ. ಈ ಹಿಂದೆ ಶರಾವತಿ ಡೆಂಟಲ್‌ ಕಾಲೇಜು ಟ್ರಸ್ಟ್‌ಗೆ ಕುಮಾರ್‌ ಬಂಗಾರಪ್ಪ ಕೂಡ ಅಧ್ಯಕ್ಷರಾಗಿದ್ದರು. ಇನ್ನು ದೇವೇಗೌಡರನ್ನು ಪ್ರಧಾನಿ ಮಾಡಿದ್ದೇ ಬಂಗಾರಪ್ಪ. ಕೊನಗೆ ಅವರಿಗೇ ಸಚಿವ ಸ್ಥಾನ ಕೊಡಲಿಲ್ಲ ಎಂದೂ ಈಡಿಗರಿಗೆ ನೆನಪಿಸುತ್ತಿದ್ದಾರೆ.

ಮಧು ದೆಹಲಿಗೆ ಹೋಗಲಿ
ಈಗ ಈಡಿಗ ಸಮುದಾಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಈಡಿಗ ಸಮಾಜದಿಂದ ಯಾರೂ ಸಂಸದರಿಲ್ಲ. ಮಧು ಬಂಗಾರಪ್ಪ ಸಂಸದರಾಗಲಿ. ಅವರು ದೆಹಲಿಗೆ ಹೋದರೆ ಕುಮಾರ್‌ ಬಂಗಾರಪ್ಪ ನಡುವಿನ ವೈಷಮ್ಯ ಕಡಿಮೆಯಾಗುತ್ತದೆ. ಲಿಂಗಾಯತರು ಅಷ್ಟೊಂದು ಒಗ್ಗಟ್ಟು ಪ್ರದರ್ಶಿಸಬೇಕಾದರೆ ನಾವೇಕೆ ಸುಮ್ಮನಿರಬೇಕು ಎಂಬ ಮಾತು ಕೇಳಿಬರುತ್ತಿದೆ. ಹೀಗಾಗಿ ಸೊರಬದಲ್ಲಿ ಮಧು ಬಂಗಾರಪ್ಪಗೆ ಹೆಚ್ಚು ಮತ ಬಿದ್ದರೆ ಆಶ್ಚರ್ಯವಿಲ್ಲ.

ಲಿಂಗಾಯತ/ಈಡಿಗ ಮುಖಾಮುಖೀ
1996 ಲೋಕಸಭೆ ಚುನಾವಣೆಯಿಂದಲೂ ಈ ಕ್ಷೇತ್ರದಲ್ಲಿ ಈಡಿಗ- ಲಿಂಗಾಯತ ಅಭ್ಯರ್ಥಿಗಳು ಮುಖಾಮುಖೀಯಾಗುತ್ತಿದ್ದು, ಪ್ರಬಲ ಸ್ಪರ್ಧೆ ನಡೆಯುತ್ತಿದೆ. 1996ರ ಚುನಾವಣೆಯಲ್ಲಿ ಎಸ್‌.ಬಂಗಾರಪ್ಪ, 1998ರ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದ ಆಯನೂರು ಮಂಜುನಾಥ್‌, 1999, 2004 ಹಾಗೂ 2005ರಲ್ಲಿ ಎಸ್‌. ಬಂಗಾರಪ್ಪ, 2009ರಲ್ಲಿ ಬಿ.ವೈ. ರಾಘವೇಂದ್ರ, 2014ರಲ್ಲಿ ಬಿ.ಎಸ್‌. ಯಡಿಯೂರಪ್ಪ ಜಯಗಳಿಸಿದ್ದಾರೆ. 2014ರ ಚುನಾವಣೆಯಲ್ಲಿ ಈಡಿಗ ಸಮಾಜದ ಗೀತಾ ಶಿವರಾಜ್‌ಕುಮಾರ್‌ ಮೂರನೇ ಸ್ಥಾನ ಕಾಯ್ದುಕೊಂಡಿದ್ದರು.

– ಶರತ್‌ ಭದ್ರಾವತಿ
 

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.