ಕೋಟೆ ಮಾರಿಕಾಂಬಾ ಜಾತ್ರೆ ಆರಂಭ

ಬಿರು ಬಿಸಿಲಲ್ಲೂ ಸರತಿ ಸಾಲಲ್ಲಿ ದೇವರ ದರ್ಶನ ಪಡೆದ ಭಕ್ತರು ಮುಖ್ಯ ರಸ್ತೆಗಳಿಗೆ ಭವ್ಯ ಅಲಂಕಾರ

Team Udayavani, Feb 26, 2020, 1:53 PM IST

26-February-13

ಶಿವಮೊಗ್ಗ: ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಮಂಗಳವಾರ ವೈಭವದಿಂದ ಆರಂಭವಾಯಿತು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರ ದಂಡೇ ಗಾಂಧಿ ಬಜಾರಿನಲ್ಲಿ ನೆರೆದಿತ್ತು. ತವರು ಮನೆ ಗಾಂಧಿ ಬಜಾರಿನಿಂದ ಕರ್ನಾಟಕ ಸಂಘದವರಿಗೆ ಸರದಿ ಸಾಲು ಕಂಡು ಬಂದಿತು. ಬಿಸಿಲನ್ನು ಲೆಕ್ಕಿಸದೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ತವರು ಮನೆ ಗಾಂಧಿ ಬಜಾರ್‌ನಲ್ಲಿ ದೇವಿ ಪ್ರತಿಷ್ಠಾಪನಾ ಕಾರ್ಯ ವೈವಿಧ್ಯಮಯವಾಗಿ ನೆರವೇರಿತು. ಬಿ.ಬಿ. ರಸ್ತೆಯಲ್ಲಿನ ಬ್ರಾಹ್ಮಣರ ಸಮುದಾಯದ ನಾಡಿಗರ ಕುಟುಂಬದವರು ಬೆಳಗ್ಗೆ 4ಕ್ಕೆ ಮೊದಲ ಪೂಜೆ ನೆರವೇರಿಸುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುತ್ತೈದೆಯರು ಬೆಳಗಿನ 4ರಿಂದಲೇ ಸರತಿ ಸಾಲಿನಲ್ಲಿ ನಿಂತು ಮಡಿಲಕ್ಕಿ ನೀಡಿ ದೇವಿಯ ದರ್ಶನ ಪಡೆದರು.

ಅರ್ಚಕರು ಮಕ್ಕಳನ್ನು ದೇವಿಯ ಮೂರ್ತಿಗೆ ತಾಗಿಸಿ, ಪೋಷಕರಿಗೆ ನೀಡುತ್ತಿದ್ದರು. ಮಕ್ಕಳನ್ನು ದೇವಿಗೆ ಮುಟ್ಟಿಸಿ ಆಶೀರ್ವಾದ ಪಡೆಯಲು ಸಾವಿರಾರು ಕುಟುಂಬಗಳು ಬಹು ದೂರದವರೆಗೂ ಸರತಿಯಲ್ಲಿ ಸಾಗಿದರು. ಗಾಂಧಿ  ಬಜಾರ್‌ ಹಾಗೂ ಮಾರಿಕಾಂಬಾ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ದೇವಸ್ಥಾನಕ್ಕೆ ದರ್ಶನ ಪಡೆಯಲು ಭಕ್ತರಿಗೆ ತೊಂದರೆಯಾಗದಂತೆ ಉದ್ದಕ್ಕೂ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಸೂಕ್ತ ಬಂದೋಬಸ್ತ್ ಗಾಗಿ ಹೆಚ್ಚಿನ ಪೊಲೀಸರನ್ನು ಯೋಜಿಸಲಾಗಿದೆ.

ದರ್ಶನಕ್ಕೆ ಸೂಕ್ತ ವ್ಯವಸ್ಥೆ: ಭಕ್ತರಿಗೆ ತೊಂದರೆಯಾಗದಂತೆ ದೇವಾಲಯ ಆಡಳಿತ ಮಂಡಳಿಯಿಂದ ಸೂಕ್ತ ವ್ಯವಸ್ಥೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಜನದಟ್ಟಣೆ ಹೆಚ್ಚಾಗಿ ಸರತಿ ಸಾಲು ಬಿ.ಎಚ್‌. ರಸ್ತೆಯ ಬೆಕ್ಕಿನ ಕಲ್ಮಠವರೆಗೂ ಬೆಳೆದಿತ್ತು. ಜನರು ಬಿಸಿಲನ್ನೂ ಲೆಕ್ಕಿಸದೆ ದೇವಿಯ ದರ್ಶನ ಮಾಡಲು ಮುಂದಾಗಿದ್ದರು. ಸರತಿ ಸಾಲಿನಲ್ಲಿ ಬರುವ ಭಕ್ತರಿಗೆ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಮತ್ತು ಸಂಘ-ಸಂಸ್ಥೆಗಳು ನೀರು, ಮಜ್ಜಿಗೆ ವ್ಯವಸ್ಥೆ ಮಾಡಿದ್ದರು. ದರ್ಶನಕ್ಕೆ ಬರುವ ಭಕ್ತರು ಹಣ್ಣು, ಸೀರೆ, ಬಳೆ, ಅಕ್ಕಿ ಮತ್ತಿತರ ಹರಕೆ ವಸ್ತುಗಳನ್ನು ಹಾಕಲು ಒಟ್ಟು 34 ಡಬ್ಬಿಗಳ ವ್ಯವಸ್ಥೆ ಮಾಡಲಾಗಿತ್ತು. ಜಾತ್ರಾ ಮಹೋತ್ಸವದ ಹಿನ್ನೆಲೆ ಯಲ್ಲಿ ನಗರದಾದ್ಯಂತ ಸಡಗರದ ವಾತಾವರಣ ಇದ್ದರೆ, ಜಾತ್ರೆಗೆ ಶುಭ ಕೋರುವ ಫ್ಲೆಕ್ಸ್‌ ಗಳು ಎಲ್ಲೆಡೆ ಕಂಡುಬಂದಿದೆ.

ವಿದ್ಯುದ್ದೀಪಗಳಿಂದ ಸಿಂಗಾರಗೊಂಡ ನಗರ: ನಗರದ ಎಲ್ಲಾ ಮುಖ್ಯ ರಸ್ತೆ, ಕೋಟೆ ರಸ್ತೆ, ಗಾಂಧಿ ಜಜಾರ್‌ ರಸ್ತೆಯನ್ನು ಜಗಮಗಿಸುವ ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.