ಶತಮಾನದ ಸೇತುವೆಗೆ ಆಧುನಿಕ ಸ್ಪರ್ಶ

1.50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕುಂದಾಪುರದ ಕಂಪನಿಗೆ ಕಾಮಗಾರಿ ಟೆಂಡರ್‌

Team Udayavani, Mar 21, 2020, 3:40 PM IST

21-March-17

ಶಿವಮೊಗ್ಗ: ಅಧಿಕಾರಿಗಳ ನಿರ್ಲಕ್ಷ್ಯದಿಂದ ತನ್ನ ಅಂದ ಕಳೆದುಕೊಂಡು ದುಸ್ಥಿತಿಯಲ್ಲಿರುವ ಶಿವಮೊಗ್ಗ ನಗರದ ಶತಮಾನದ ಸೇತುವೆ ಈಗ ಆಧುನಿಕ ಸ್ಪರ್ಶ ಪಡೆದುಕೊಳ್ಳುತ್ತಿದೆ.

ಶತಮಾನಗಳಿಂದ ಜನರಿಗೆ ಸೇವೆ ನೀಡುತ್ತಿರುವ ಈ ಸೇತುವೆ ಈಚೆಗೆ ಸುರಿದ ಮಳೆಗೆ ನಲುಗುತ್ತಿದ್ದು, ಲೋಕೋಪಯೋಗಿ ಇಲಾಖೆ ಸೇತುವೆ ಇನ್ನಷ್ಟು ವರ್ಷ ಬಾಳಿಕೆ ಬರುವಂತೆ ಮಾಡಲು ಯೋಜನೆ ರೂಪಿಸಿದೆ. 1.50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದೆ.

ಬ್ರಿಟಿಷರ ಕಾಲದಲ್ಲಿ ನಿರ್ಮಿಸಿರುವ ಈ ಸೇತುವೆಗೆ 150 ವರ್ಷ ತುಂಬುತ್ತಾ ಬಂದಿದೆ. ನಿತ್ಯ ನೂರಾರು ವಾಹನ ಸಂಚರಿಸಿವೆ. ಆದರೆ, ಗುಣಮಟ್ಟದ ಆಯಸ್ಸು ಮಾತ್ರ ಮಿಸುಕಾಡಿಲ್ಲ. ಸೈಜುಗಲ್ಲು, ಸುಣ್ಣದ ಕಲ್ಲು, ಬೆಲ್ಲ, ಮರಳು ಇತ್ಯಾದಿ ಮೆಟೀರಿಯಲ್‌ ಬಳಸಿ ಕಟ್ಟಿದ ಈ ಸೇತುವೆ 1878ರಲ್ಲಿ ನಿರ್ಮಾಣಗೊಂಡಿದೆ.

53.38 ಮೀಟರ್‌ ಎತ್ತರ, 761.25 ಅಡಿ ಉದ್ದ, 26.65 ಮೀಟರ್‌ ಅಗಲ ವಿಸ್ತೀರ್ಣ ಹೊಂದಿರುವ ಈ ಸೇತುವೆ ಒಟ್ಟು 15 ಪಿಲ್ಲರ್‌ಗಳ ಮೇಲೆ ನಿಂತಿದೆ. ಜತೆಗೆ 15 ಕಮಾನುಗಳಿವೆ. ಪ್ರತಿಯೊಂದು ಕಮಾನು 53.13 ಅಡಿ ಅಗಲವಿದೆ. ಕೆಂಪು ಇಟ್ಟಿಗೆ ಹಾಗೂ ಗಾರೆಯಿಂದ ಇದನ್ನು ನಿರ್ಮಿಸಲಾಗಿದೆ. 150 ವರ್ಷ ಕಳೆದರೂ ಇದು ಇಂದಿಗೂ ಗಟ್ಟಿ ಮುಟ್ಟಾಗಿದೆ. ಈ ಬಾರಿ ಸುರಿದ ಭಾರಿ ಮಳೆಗೆ ತುಂಗಾ ನದಿ ಮೈದುಂಬಿ ಹರಿಯಿತು.

ಸಂದರ್ಭದಲ್ಲಿ ಸೇತುವೆ ಹಾಗೂ ರಸ್ತೆ ನಡುವೆ ಬಿರುಕು ಕಾಣಿಸಿಕೊಂಡಿದ್ದ ಪರಿಣಾಮ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಜಾಕೆಟ್‌, ಮೈಕ್ರೋ ಕಾಂಕ್ರೀಟ್‌: ಸೇತುವೆಯ ಆಧಾರ ಸ್ತಂಭದ ಗಾರೆಯು ಕೆಲವು ಕಡೆ ಉದುರಿಹೋಗಿದ್ದು ಇಟ್ಟಿಗೆ ಕಾಣುತ್ತಿದೆ. ಮತ್ತೆ ನೀರು ಹೆಚ್ಚಾದರೆ ಈ ಇಟ್ಟಿಗೆಗಳು ಕರಗಿ ಪಿಲ್ಲರ್‌ ಗಳಿಗೆ ಆತಂಕ ತರುವ ಸಾಧ್ಯತೆ ಇದೆ. ಹೀಗಾಗಿ ಪಿಲ್ಲರ್‌ಗಳನ್ನು ರಕ್ಷಿಸಲು ಜಾಕೆಟ್‌ ಅಳವಡಿಸಲು ಇಲಾಖೆ ಮುಂದಾಗಿದೆ. ಪಿಲ್ಲರ್‌ ಸುತ್ತಲೂ ಕಬ್ಬಿಣದ ಮೆಶ್‌ ರಚಿಸಿ ಅದಕ್ಕೆ ಮೈಕ್ರೋ ಕಾಂಕ್ರೀಟ್‌ ಹಾಕಿ ಕವರ್‌ ಮಾಡಲಾಗುತ್ತಿದೆ.

ಅದೇ ರೀತಿ ಸೇತುವೆ ತಡೆಗೋಡೆಗಳು ಸಹ ಶಿಥಿಲಗೊಂಡಿವೆ. ಸೇತುವೆ ಮೇಲೆ ಗಿಡಗಂಟೆಗಳು ಬೆಳೆದು ಇಟ್ಟಿಗೆಗಳು ಶಕ್ತಿ  ಳೆದುಕೊಂಡಿವೆ. ಇದನ್ನು ಬಲಪಡಿಸಲು ಗ್ರೌಟಿಂಗ್‌ ತಂತ್ರಜ್ಞಾನ ಬಳಸಿ ಸಂದಿ, ಮೂಲೆಗಳಲ್ಲಿ ಕೆಮಿಕಲ್‌ ಮಿಶ್ರಣ ಸೇರಿಸಲಾಗುತ್ತಿದೆ. ಈ ಮಿಶ್ರಣವು ಸಣ್ಣ ಬಿರುಕುಗಳನ್ನು ಮುಚ್ಚುವುದಲ್ಲದೇ ಅಲ್ಲೇ ಗಟ್ಟಿಕೊಳ್ಳುತ್ತದೆ.

ಏಪ್ರಿಲ್‌ ಒಳಗೆ ಕಾಮಗಾರಿ ಮುಕ್ತಾಯ: ಈ ಸೇತುವೆಯಲ್ಲಿರುವ ಕಮಾನುಗಳಲ್ಲಿ ಕೆಲವೊಂದು ತುಂಬಾ ಹಾನಿಗೊಳಗಾಗಿವೆ. ಇವುಗಳನ್ನು ತೆಗೆದು ಹೊಸದಾಗಿ ಹಾಕುವುದು. ಸೇತುವೆಯಲ್ಲಿ ಆಳೆತ್ತರಕ್ಕೆ ಬೆಳೆದಿರುವುದರಿಂದ ಅವುಗಳ ಬೇರುಗಳು ಆಳವಾಗಿ ನೆಲೆಯೂರಿರುವುದರಿಂದ ಪಕ್ಕದ ಸ್ಲ್ಯಾಬ್‌ಗಳು ಕುಸಿಯು ಹಂತ ತಲುಪಿವೆ. ಹೀಗಾಗಿ ಗಿಡಗಳನ್ನು ಬುಡ ಸಮೇತ ತೆಗೆದು ಹಾಕಿ, ಆಸಿಡ್‌ ಮಾದರಿ ಕೆಮುಕಲ್‌ ಹಾಕಿ ಮತ್ತೆ ಗಿಡ ಬೆಳೆಯದಂತೆ
ನೋಡಿಕೊಳ್ಳಲಾಗುತ್ತಿದೆ.

ಕುಂದಾಪುರದ ಫಿಲಿಪ್‌ ಡಿಕೋಸ್ಟಾ ಅಂಡ್‌ ಕಂಪನಿಯವರಿಗೆ ಕಾಮಗಾರಿ ಟೆಂಡರ್‌ ನೀಡಲಾಗಿದೆ. ಕಳೆದ 15 ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ನಿತ್ಯ 70ಕ್ಕೂ ಅ ಧಿಕ ಮಂದಿ ಕೆಲಸವನ್ನು ಮಾಡುತ್ತಿದ್ದಾರೆ. ಏಪ್ರಿಲ್‌ ಒಳಗೆ ಕಾಮಗಾರಿ ಮುಗಿಸಲಾಗುವುದು ಎನ್ನುತ್ತಾರೆ ಎಂಜಿನಿಯರ್‌.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.