ಎಂಪಿಎಂ ಕಾರ್ಖಾನೆಗೆ ನೀಡಿದ್ದ ಅರಣ್ಯ ಭೂಮಿ ಹಿಂಪಡೆಯಲು ಒತ್ತಾಯ
Team Udayavani, Jun 5, 2020, 6:40 PM IST
ಶಿವಮೊಗ್ಗ: ಎಂಪಿಎಂ ಅರಣ್ಯ ಭೂಮಿ ವಾಪಸ್ ಪಡೆಯಲು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಎಂಪಿಎಂ ಕಾರ್ಖಾನೆಗೆ ನೀಡಿದ್ದ 60 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಸ್ ಪಡೆಯಬೇಕು ಎಂದು ಪ್ರಗತಿ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮ ಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 75 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್ಗೆ ನೀಡಲಾಗಿತ್ತು. ಕೆಲವು ವರ್ಷಗಳ ನಂತರ 15 ಸಾವಿರ ಹೆಕ್ಟೇರ್ ಪ್ರದೇಶವನ್ನು ಹಿಂಪಡೆದು 60 ಸಾವಿರ ಹೆಕ್ಟೇರ್ ಪ್ರದೇಶವನ್ನು ಲೀಸ್ನಲ್ಲಿ ಮುಂದುವರಿಸಲಾಗಿತ್ತು. ಅದು ಈಗ 2020ರ ಆಗಸ್ಟ್ ವೇಳೆಗೆ ಅಂತ್ಯವಾಗಲಿದೆ. ಹಾಗಾಗಿ ಸರ್ಕಾರ ಅದನ್ನು ವಾಪಸ್ ಪಡೆಯಬೇಕು ಎಂದು ಮನವಿದಾರರು ಒತ್ತಾಯಿಸಿದ್ದಾರೆ. ಈಗಾಗಲೇ ಮೈಸೂರು ಕಾಗದ ಕಾರ್ಖಾನೆ ಸ್ಥಗಿತಗೊಂಡಿದೆ.
ಕಾರ್ಖಾನೆ ಮತ್ತೆ ಮುಂದುವರಿಯುವ ಲಕ್ಷಣಗಳು ಇಲ್ಲ. ಸರ್ಕಾರ ಆ ಬಗ್ಗೆ ಈಗಾಗಲೇ ತಟಸ್ಥವಾಗಿದೆ. ಹೀಗಿರುವಾಗ ಈ ಅರಣ್ಯ ಭೂಮಿಯ ಅವಶ್ಯಕತೆ ಕಾರ್ಖಾನೆಗೆ ಇರುವುದಿಲ್ಲ. ಅಲ್ಲದೇ ಅದನ್ನು ಖಾಸಗಿಯವರಿಗೆ ಮಾರಾಟ ಮಾಡಲು ಎಂಪಿಎಂ ಆಡಳಿತ ಮಂಡಳಿಗೆ ಅವಕಾಶ ಇಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಭೂಮಿಯನ್ನು ನೀಡುವಂತಿಲ್ಲ ಎಂದು ಮನವಿದಾರರು ಹೇಳಿದರು.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಕೆ.ಟಿ. ಗಂಗಾಧರ್, ಕೆ.ಪಿ. ಶ್ರೀಪಾಲ್, ಎಂ. ಗುರುಮೂರ್ತಿ, ರಾಜೇಂದ್ರ ಕಂಬಳಗೆರೆ, ನಾಗೇಶನ್, ಮಾಲತೇಶ್ ಬೊಮ್ಮನಕಟ್ಟೆ, ಆದರ್ಶ ಹುಂಚದಕಟ್ಟೆ, ಪ್ರಸನ್ನ ಹಿತ್ತಲಗದ್ದೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ