ಅನಾನಸ್ ವಿಲೇವಾರಿ; ಜಿಲ್ಲಾಧಿಕಾರಿ ವಿಡಿಯೋ ಸಂವಾದ
Team Udayavani, Apr 24, 2020, 1:58 PM IST
ಶಿವಮೊಗ್ಗ: ಅನಾನಸ್ ವಿಲೇವಾರಿ ಕುರಿತಂತೆ ಜಿಲ್ಲಾ ಧಿಕಾರಿ ವಿಡಿಯೋ ಸಂವಾದ ನಡೆಸಿದರು.
ಶಿವಮೊಗ್ಗ: ಲಾಕ್ಡೌನ್ನಿಂದಾಗಿ ಸಮಸ್ಯೆಗೆ ಸಿಲುಕಿರುವ ಜಿಲ್ಲೆಯ ಅನಾನಸ್ ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗುರುವಾರ ಮೈಸೂರಿನ ಸಿಎಫ್ ಟಿಆರ್ಐ (ಸೆಂಟ್ರಲ್ ಫುಡ್ ಟೆಕ್ನಾಲಜಿ ರೀಸರ್ಚ್ ಇನ್ಸ್ಟಿಟ್ಯೂಟ್) ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಜಿಲ್ಲೆಯಲ್ಲಿ ಅಂದಾಜು 65 ಸಾವಿರ ಟನ್ ಅನಾನಸು ಬೆಳೆದಿದ್ದು, ಕಳೆದ 20ದಿನಗಳಲ್ಲಿ ವಿವಿಧ ಮೂಲಗಳನ್ನು ಬಳಸಿಕೊಂಡು ಅನಾನಸು ಮಾರುಕಟ್ಟೆಗೆ ವಿಲೇವಾರಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯಲಾಗುವ ರಾಜಾ ತಳಿಯ ಅನಾನಸಿಗೆ ದೆಹಲಿಯ ಜ್ಯೂಸ್ ಕಂಪೆನಿಗಳು ಪ್ರಮುಖ ಮಾರುಕಟ್ಟೆಯಾಗಿದ್ದು, ಲಾಕ್ ಡೌನ್ನಿಂದ ಸಾಗಾಟ ತೊಂದರೆಯಾಗಿದೆ. ಪ್ರಸ್ತುತ ದಿನನಿತ್ಯ 125ರಿಂದ 150 ಟನ್ ಮಾತ್ರ ಮಾರುಕಟ್ಟೆಗೆ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ. ಪ್ರತಿನಿತ್ಯ 250ರಿಂದ 300ಟನ್ ಇಳುವರಿ ಬರುತ್ತಿದೆ ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸ್ವ-ಸಹಾಯ ಸಂಘಗಳನ್ನು ಬಳಸಿಕೊಂಡು ಮಾರುಕಟ್ಟೆ ಕಲ್ಪಿಸಲು, ವಿವಿಧ ಆಹಾರ ಸಂಸ್ಕರಣಾ ತಂತ್ರಗಳನ್ನು ಬಳಸಿಕೊಂಡು ಅನಾನಸು ಉತ್ಪನ್ನಗಳನ್ನು ದಾಸ್ತಾನು ಇರಿಸುವುದು ಸೇರಿದಂತೆ ಬೆಳೆಗಾರರಿಗೆ ಹೊಸ ಮಾರುಕಟ್ಟೆ ಅವಕಾಶಗಳ ಬಗ್ಗೆ ಸಿಎಫ್ಟಿಆರ್ಐ ತಜ್ಞರಿಂದ ಮಾರ್ಗದರ್ಶನ ಬಯಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕೋಲ್ಡ್ ಸ್ಟೋರೇಜ್ ಬಳಸಿಕೊಂಡು ಅನಾನಸು ಗರಿಷ್ಟ ಒಂದು ವಾರಗಳ ಕಾಲ ಮಾತ್ರ ದಾಸ್ತಾನು ಇರಿಸಲು ಸಾಧ್ಯವಿದೆ. ಅದನ್ನು ಪಲ್ಫ್ ಆಗಿ ಪರಿವರ್ತಿಸಿದರೆ ಗರಿಷ್ಠ ಎರಡು ವರ್ಷಗಳ ಕಾಲ ಕಾಪಿಡಬಹುದಾಗಿದೆ. ಹುಬ್ಬಳ್ಳಿ ಮತ್ತು ಚಿತ್ತೂರುಗಳಲ್ಲಿ ಅಂತಹ ಸಂಸ್ಕರಣಾ ಉದ್ಯಮಗಳಿದ್ದು, ಅನಾನಸನ್ನು ಪಲ್ಫ್ ಆಗಿ ಪರಿವರ್ತಿಸಿದ ಬಳಿಕ ಹಾಪ್ಕಾಮ್ಸ್ ಮೂಲಕ ಮಾರುಕಟ್ಟೆ ವ್ಯವಸ್ಥೆ ಮಾಡಬಹುದಾಗಿದೆ ಎಂದು ಸಿಎಫ್ಟಿಆರ್ಐ ಅಧಿಕಾರಿಗಳು ಸಲಹೆ ನೀಡಿದರು. ಅತ್ಯಂತ ಕಡಿಮೆ ತಂತ್ರಜ್ಞಾನವನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಅನಾನಸು ಸಂಸ್ಕರಣೆಯನ್ನು ಸ್ಥಳೀಯವಾಗಿ ಮಾಡಲು ಸಾಧ್ಯವಿದೆ. ಸ್ವ-ಸಹಾಯ ಗುಂಪುಗಳ ಸಹಯೋಗದಲ್ಲಿ ಅಂತಹ ಚಟುವಟಿಕೆ ನಡೆಸಲು, ರೈತರಿಗೆ, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಸೂಕ್ತ ತರಬೇತಿ ನೀಡಲು ಸಂಸ್ಥೆ ಸಿದ್ಧವಿದೆ. ಲಾಕ್ ಡೌನ್ ಮುಗಿದ ಬಳಿಕ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯವಾಗಿ ಮಾರುಕಟ್ಟೆಯನ್ನು ವಿಸ್ತರಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಿಎಫ್ ಟಿಆರ್ಐ ಎಲ್ಲಾ ತಾಂತ್ರಿಕ ನೆರವು ನೀಡಲು ಸಿದ್ಧವಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ| ರಾಘವ ರಾವ್ ಹೇಳಿದರು. ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
ನನ್ನ ಆರೋಪಗಳಿಗೆ ಬಿಎಸ್ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ
Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ
Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ