ಕೋವಿಡ್-ಕೆಎಫ್‌ಡಿ ನಿರ್ಲಕ್ಷ್ಯ ಸಲ್ಲ

ಸೋಂಕು ಹರಡದಿರಲು ಸಾಮಾಜಿಕ ಅಂತರ ಮುಖ್ಯ ಹಸಿರು ವಲಯವನ್ನಾಗಿ ಉಳಿಸಿಕೊಳ್ಳಲು ಸಲಹೆ

Team Udayavani, May 3, 2020, 1:55 PM IST

3-may-13

ಸಾಂಧರ್ಭಿಕ ಚಿತ್ರ

ಶಿವಮೊಗ್ಗ: ಜಿಲ್ಲೆಯ ತಾಲೂಕುಗಳನ್ನು ಕಾಡುತ್ತಿರುವ ಕೆಎಫ್‌ಡಿ ಸಮರ್ಪಕ ನಿಯಂತ್ರಣಕ್ಕಾಗಿ ವಿಶೇಷ ಸಭೆಯನ್ನು ಕರೆದು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.

ಶನಿವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಕೋವಿಡ್ ಹಾಗೂ ಕೆಎಫ್‌ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲಿಸಿ ಮಾತನಾಡಿದ ಅವರು, ಕೆಎಫ್‌ಡಿ ಬಗ್ಗೆ ಈಗಾಗಲೇ ಜಿಲ್ಲೆಯ ಶಾಸಕರು ವಿಧಾನಸಭೆಯಲ್ಲಿ ಸಮಗ್ರ ಮಾಹಿತಿ ನೀಡಿದ್ದಾರೆ. ಕೆಎಫ್‌ಡಿಗೆ ಸೂಕ್ತ ಔಷಧ ಕಂಡು ಹಿಡಿಯುವುದು ಸೇರಿದಂತೆ ಈ ನಿಟ್ಟಿನಲ್ಲಿ ಆಗಬೇಕಾದ ಸಂಶೋಧನೆಗಳು ಇತ್ಯಾದಿಗಳ ಕುರಿತು ಸಮಾಲೋಚನೆ ನಡೆಸಲು ಉನ್ನತ ಮಟ್ಟದ ಸಭೆ ಕರೆಯಲಾಗುವುದು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ವರ್ಷ 168 ಕೆಎಫ್‌ಡಿ ಪ್ರಕರಣಗಳು ವರದಿಯಾಗಿದ್ದು, ತೀರ್ಥಹಳ್ಳಿಯಲ್ಲಿ 132 ಹಾಗೂ ಸಾಗರದಲ್ಲಿ 36 ಪ್ರಕರಣ ವರದಿಯಾಗಿದೆ. ಪ್ರಸ್ತುತ 12 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ 5 ಸಾವಿರ ರಕ್ತ ಪರಿಶೋಧನೆ ನಡೆಸಲಾಗಿದೆ. 2 ಮಂಗಗಳಲ್ಲಿ ಪಾಸಿಟಿವ್‌ ಕಂಡು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೋವಿಡ್ ನಿಯಂತ್ರಣ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಕೋವಿಡ್ ಜಿಲ್ಲೆಗೆ ಕಾಲಿರಿಸಿಲ್ಲ. ಆದರೆ ಈ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಕೋವಿಡ್ ವಿರುದ್ಧ ದೀರ್ಘ‌ಕಾಲೀನ ಹೋರಾಟ ನಡೆಸಬೇಕಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಾ ಇನ್ನೂ 6-7 ತಿಂಗಳ ಕಾಲ ಕೋವಿಡ್ ನೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಸಚಿವರು ಹೇಳಿದರು. ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಪ್ರಸ್ತುತ ಕ್ಲಿನಿಕಲ್‌ ಟೆಸ್ಟಿಂಗ್‌ ಹಂತದಲ್ಲಿದ್ದು, ಯಶಸ್ವಿಯಾದರೆ ಎಲ್ಲಾ ಜಿಲ್ಲೆಗಳಲ್ಲಿ ಅದನ್ನು ಚಿಕಿತ್ಸೆಗಾಗಿ
ಅನುಸರಿಸಲಾಗುವುದು ಎಂದರು.

ಎಲ್ಲಾ ಜಿಲ್ಲೆಗಳಲ್ಲಿರುವ ಬ್ಲಿಡ್‌ ಬ್ಯಾಂಕ್‌ ಗಳಲ್ಲಿ ರಕ್ತ ಸಂಗ್ರಹ ಕಡಿಮೆಯಾಗುತ್ತಿದ್ದು, ರಕ್ತ ನೀಡಲು ದಾನಿಗಳು ಮುಂದೆ ಬರಬೇಕು. ಇದಕ್ಕಾಗಿ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರ ಆಯೋಜಿಸಬೇಕು ಎಂದರು. ಬಾಕಿ ವೇತನ ಪಾವತಿಗೆ ಕ್ರಮ: ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ಸಿಬ್ಬಂದಿಗೆ ಬಾಕಿ ಇರಿಸಿರುವ ವೇತನ ಪಾವತಿಗೆ ಈಗಾಗಲೆ 80ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದೇ ರೀತಿ ಇಲಾಖೆಯಲ್ಲಿ ವಿವಿಧ ಹಂತದಲ್ಲಿ ಸಿಬ್ಬಂದಿ ವೇತನ ತಾರತಮ್ಯ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅವರು ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿ, ಲಾಕ್‌ಡೌನ್‌ ಅವ ಧಿಯಲ್ಲಿ 842 ವಲಸೆ ಕಾರ್ಮಿಕರಿಗೆ ಜಿಲ್ಲೆಯ 20 ಕಡೆಗಳಲ್ಲಿ ವಸತಿ ಕಲ್ಪಿಸಲಾಗಿದೆ. ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಅವರನ್ನು ಸ್ವಂತ ಊರುಗಳಿಗೆ ಕಳುಹಿಸಲಾಗುತ್ತಿದೆ ಎಂದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ, ಡಿಸಿ ಕೆ.ಬಿ.ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.