ತ್ವರಿತ ಪಾಸ್ ವಿತರಣೆಗೆ ಡಿಸಿ ಸೂಚನೆ
ಹೊರ ಜಿಲ್ಲೆಗಳಿಗೆ ತೆರಳುವವರಿಗೆ ಬಸ್ ವ್ಯವಸ್ಥೆ ಕಲ್ಪಿಸಿ
Team Udayavani, May 6, 2020, 2:32 PM IST
ಶಿವಮೊಗ್ಗ: ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಪಾಸ್ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.
ಅವರು ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಈ ಕುರಿತು ಸೂಚನೆ ನೀಡಿದರು. ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಸೇರಿದಂತೆ ಕನಿಷ್ಟ ಮಾಹಿತಿಗಳನ್ನು ಮಾತ್ರ ಪಡೆಯಬೇಕು. ಜನರನ್ನು ಕಾಯಿಸದೆ ನೇರವಾಗಿ ಅರ್ಜಿಯನ್ನು ಸ್ವೀಕರಿಸಬೇಕು. ಒಂದು ವೇಳೆ ಪಾಸ್ ನೀಡಲು ಸಾಧ್ಯವಿಲ್ಲದಿದ್ದರೆ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿಯೇ ತಿಳಿಸಬೇಕು. ಅರ್ಜಿಗಳನ್ನು ತಹಶೀಲ್ದಾರ್ ಕಚೇರಿಯಲ್ಲಿ ಸ್ವೀಕರಿಸಬೇಕು. ಪಾಸ್ಗಳನ್ನು ಮೊಬೈಲ್ ಸಂಖ್ಯೆ ತಿಳಿಸಿ ನಾಡ ಕಚೇರಿಯಲ್ಲಿ ಪಡೆಯಬೇಕು ಎಂದು ಹೇಳಿದರು.
ಹೊರ ಜಿಲ್ಲೆಗಳಿಗೆ ತೆರಳುವವರು ಬಸ್ ಸೌಲಭ್ಯ ಬಯಸಿದರೆ ಕಲ್ಪಿಸಬೇಕು. ಯಾವುದಾದರೂ ಒಂದು ಊರಿಗೆ ಒಂದು ಬಸ್ ನಲ್ಲಿ ಪ್ರಯಾಣಿಸುವಷ್ಟು ಜನರಿಂದ ವಿನಂತಿ ಬಂದರೆ, ಕೆಎಸ್ ಆರ್ಟಿಸಿ ಅಧಿಕಾರಿಗಳಿಗೆ ಮಾತನಾಡಿ ಬಸ್ ವ್ಯವಸ್ಥೆ ಮಾಡಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮಾಹಿತಿ ಕಡ್ಡಾಯ: ಜಿಲ್ಲೆಯ ಎಪಿಎಂಸಿಗಳಿಗೆ ಸೇರಿದಂತೆ ಕೈಗಾರಿಕಾ ವಲಯಗಳಿಗೆ ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಆಗಮಿಸುವವರ ಸಂಪೂರ್ಣ ವಿವರಗಳನ್ನು ಪಡೆಯಬೇಕು. ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಅನ ಧಿಕೃತವಾಗಿ ಯಾರೂ ಜಿಲ್ಲೆ ಪ್ರವೇಶಿಸುವಂತಿಲ್ಲ. ಎಪಿಎಂಸಿಗಳಿಗೆ ಆಗಮಿಸುವ ಲಾರಿಗಳ ಚಾಲಕರ ವಿವರ, ಒಂದು ವೇಳೆ ಹಮಾಲಿಗಳು ಆಗಮಿಸಿದ್ದರೆ ಅವರ ವಿವರ, ಆಗಮಿಸಿದ ಹಾಗೂ ಹಿಂತಿರುಗುವ ದಿನಾಂಕ ಇತ್ಯಾದಿಗಳನ್ನು ಎಪಿಎಂಸಿ ಕಾರ್ಯದರ್ಶಿಗಳು ಪಡೆದು ಪೊಲೀಸರಿಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಲಾರಿಯಲ್ಲಿ ಆಗಮಿಸುವವರು ಎಪಿಎಂಸಿ ಆವರಣದ ಹೊರಗೆ ಅಡ್ಡಾಡುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಸಗಟು ಡೀಲರ್ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಅನಾವಶ್ಯಕವಾಗಿ ಹೊರ ಬರಬೇಡಿ: ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ, ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಅಗತ್ಯ ಸಾಮಗ್ರಿಗಳನ್ನು ಮನೆಯ ಸಮೀಪದಲ್ಲೇ ಖರೀದಿಸಬೇಕು. ಯಾವುದೇ ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದರೆ, ಅಂತಹ ಅಂಗಡಿ ಮಾಲಿಕರಿಗೆ ದಂಡ ವಿಧಿಸುವಂತೆ ಜಿಲ್ಲಾ ಧಿಕಾರಿ ಅವರು ತಿಳಿಸಿದರು.
ಸೆಲೂನ್ ಅವಕಾಶ: ಜಿಲ್ಲೆಯಲ್ಲಿ ಸೆಲೂನ್ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಕಡ್ಡಾಯವಾಗಿ ಮಾಸ್ಕ್ ಮತ್ತು ಕೈಗವಸು ಸೇರಿದಂತೆ ಎಲ್ಲಾ ಅಗತ್ಯ ಮುಂಜಾಗರೂಕತೆ ವಹಿಸಿರಬೇಕು ಎಂದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ