ಶಿವಮೊಗ್ಗ: ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದವರಿಗೆ ಕೋವಿಡ್ ಸೋಂಕು ದೃಢ!
Team Udayavani, Jan 7, 2022, 11:30 AM IST
ಶಿವಮೊಗ್ಗ: ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದ ಶಿವಮೊಗ್ಗದ ಆರು ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಂಕು ದೃಢವಾದ ಆರು ಮಂದಿ ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ಶಿವಮೊಗ್ಗದಿಂದ 82 ಬಸ್ಸುಗಳಲ್ಲಿ 4300 ಕ್ಕೂ ಹೆಚ್ಚು ಮಹಿಳೆಯರು ತೆರಳಿದ್ದರು. ಯಾತ್ರೆ ಮುಗಿಸಿ ಬಂದ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಯಾತ್ರೆಗೆ ತೆರಳಿದ್ದ ಎಲ್ಲರನ್ನೂ ಹೊಂ ಕ್ವಾರಂಟೈನ್ ಒಳಪಡಿಸಲಾಗಿತ್ತು. ಹೋಂ ಕ್ವಾರಂಟೈನ್ ನಲ್ಲಿದ್ದವರನ್ನು ಇದೀಗ ಮೇಲ್ವಿಚಾರಣೆ ಮಾಡಲಾಗುತ್ತಿದೆ.
ಮೇಲ್ವಿಚಾರಣೆ ವೇಳೆ ಇಂದು ಬೆಳಗ್ಗೆ ಆರು ಜನರಲ್ಲಿ ಕೋವಿಡ್ ಪಾಸಿಟಿವ್ ದೃಢವಾಗಿದೆ. ಅವರಿಗೆ ಇದೀಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಮಂಡ್ಯದ ಕೆಲವು ಮಹಿಳೆಯರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು.
ಇದನ್ನೂ ಓದಿ:ಪತ್ನಿ ಮೃತಪಟ್ಟಿದ್ದಾಳೆಂದು ನಕಲಿ ಪ್ರಮಾಣ ಪತ್ರ ತಯಾರಿಸಿ ಪಾಲಿಸಿ ಹಣ ಪಡೆದವನಿಗೆ ಜೈಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಆರೋಪಗಳಿಗೆ ಬಿಎಸ್ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ
Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ
Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ
Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!