ನದಿ ಪುನಶ್ಚೇತನಕ್ಕೆ ಯೋಜನೆ: ಈಶ್ವರಪ್ಪ
ಪ್ರಾಥಮಿಕ ಹಂತದಲ್ಲಿ 9 ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ
Team Udayavani, Mar 13, 2020, 3:40 PM IST
ಶಿವಮೊಗ್ಗ: ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9 ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.
ಈಶ್ವರಪ್ಪ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಬಗ್ಗೆ ಮಾಹಿತಿ ಒದಗಿಸಲು ಹಾಗೂ ಕ್ರಿಯಾ ಯೋಜನೆಯನ್ನು ರೂಪಿಸುವುದಕ್ಕೆ ಸಂಬಂಧಿಸಿದಂತೆ ಮಾ. 14ರಂದು ಶಿವಮೊಗ್ಗದಲ್ಲಿ ಗ್ರಾಪಂ ಅಧ್ಯಕ್ಷರು, ತಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗುತ್ತಿದೆ.
ಮಾ. 15ರಂದು ಕೋಲಾರದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಹೇಳಿದರು. ಮಳೆಯ ನೀರು ಹರಿದು ಹೋಗಿ ವ್ಯರ್ಥವಾಗಲು ಬಿಡದೆ, ಭೂಮಿಯಲ್ಲಿಯೇ ಇಂಗಿ ಹೋಗುವಂತೆ ಯೋಜನೆಯಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಇದಕ್ಕಾಗಿ ನದಿಯ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಸಿಗಳನ್ನು ನೆಡುವುದು, ಸಣ್ಣಪುಟ್ಟ ಚೆಕ್ಡ್ಯಾಂಗಳ ನಿರ್ಮಾಣ, ಇಂಗು ಗುಂಡಿಗಳ ನಿರ್ಮಾಣದಂತಹ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಪ್ರಥಮ ಹಂತದಲ್ಲಿ ಪೂರ್ವಕ್ಕೆ ಹರಿಯುವ ನದಿಗಳನ್ನು ಪುನಶ್ಚೇತನಗೊಳಿಸಲು ಉದ್ದೇಶಿಸಲಾಗಿದೆ. ನದಿ ಮೂಲದ ಸಂರಕ್ಷಣೆಗೂ ಈ ಸಂದರ್ಭದಲ್ಲಿ ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.
ಈಗಾಗಲೇ ನದಿಗಳ ಪುನಶ್ಚೇತನ ಕಾರ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರದಲ್ಲಿ ಕೈಗೊಳ್ಳಲಾಗಿದೆ. ಇದೀಗ ಶಿವಮೊಗ್ಗ, ಕೋಲಾರ, ತುಮಕೂರು, ಬಳ್ಳಾರಿ, ಯಾದಗಿರಿ, ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ, ಕೊಡಗು, ಉಡುಪಿ ಮತ್ತು ಕಾರವಾರ ಜಿಲ್ಲೆಯ 2 ತಾಲೂಕುಗಳಲ್ಲಿ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯಡಿ ನದಿಗೆ ಸೇರುವ ಪ್ರಮುಖ ಹಳ್ಳಕೊಳ್ಳಗಳ ನಕ್ಷೆ ತಯಾರಿಸಿ, ಅದನ್ನು ಸಂರಕ್ಷಿಸುವ ಕಾರ್ಯವನ್ನು ಸಹ ಕೈಗೊಳ್ಳಲಾಗುವುದು ಎಂದು ಹೇಳಿದರು.
ಚೆಕ್ಡ್ಯಾಂ: ತುಂಗಾ ನದಿಗೆ ಮತ್ತೂರು ಬಳಿ ನಿರ್ಮಿಸಲಾಗಿರುವ ಚೆಕ್ಡ್ಯಾಂ ಅತ್ಯಂತ ಯಶಸ್ವಿಯಾಗಿದ್ದು, ಇದೇ ರೀತಿ ಇನ್ನೂ ನಾಲ್ಕು ಚೆಕ್ಡ್ಯಾಂಗಳನ್ನು ನಿರ್ಮಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಸಣ್ಣ ನೀರಾವರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಉದ್ಯೋಗ ಖಾತ್ರಿ ಉತ್ತಮ ಸಾಧನೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಬಾಕಿ ಪಾವತಿ ಮಾಡಲಾಗಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದ್ದು, 30ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದ್ದು, 130ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಯೋಜನಾ ನಿರ್ದೇಶಕ ವೀರಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ