ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆಗೆ ಸೂಚನೆ

ಪ್ರತಿ ತಾಲೂಕಿನಲ್ಲಿ ಬಸ್‌ ಮಾರ್ಗ ಅಂತಿಮಗೊಳಿಸಿ: ಡಿಸಿ ಶಿವಕುಮಾರ್‌

Team Udayavani, Jun 7, 2020, 1:35 PM IST

07-June-13

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಇದೇ ತಿಂಗಳ 25ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದಂತೆ ವೈಯಕ್ತಿಕ ಕಾಳಜಿಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಹೇಳಿದರು. ಶನಿವಾರ ಎಸಿ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಬಸ್‌, ಹಾಸ್ಟೆಲ್‌ ಸೌಲಭ್ಯ: ಬಸ್‌ ವ್ಯವಸ್ಥೆ ಹಾಗೂ ಪರೀಕ್ಷೆ ಸಂದರ್ಭದಲ್ಲಿ ಹಾಸ್ಟೆಲ್‌ ವ್ಯವಸ್ಥೆ ಬಯಸಿರುವ ವಿದ್ಯಾರ್ಥಿಗಳ ವಿವರಗಳನ್ನು ಈಗಾಗಲೇ ಪಡೆಯಲಾಗಿದೆ. ಪ್ರತಿ ತಾಲೂಕಿನಲ್ಲಿ ಬಸ್‌ ರೂಟ್‌ ಅಂತಿಮಗೊಳಿಸಬೇಕು. ಪ್ರತಿ ಬಸ್‌ನಲ್ಲಿ ನೋಡೆಲ್‌ ಅಧಿಕಾರಿ ಹಾಜರಿರಬೇಕು. ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾಗಿರುವ ಈ ಬಸ್‌ಗಳನ್ನು ಹೊರತುಪಡಿಸಿ ಪ್ರತಿ ಕ್ಷೇತ್ರ ಶಿಕ್ಷಣಾಧಿಕಾರಿ ಅಧೀನದಲ್ಲಿ ಕನಿಷ್ಟ 5 ವಾಹನಗಳು ಚಾಲಕರೊಂದಿಗೆ ಸನ್ನದ್ಧವಾಗಿರಬೇಕು. ಬಸ್‌ ತಪ್ಪಿ ಹೋದರೆ ಅಥವಾ ಇನ್ನಿತರ ತುರ್ತು ಸಂದರ್ಭಗಳಲ್ಲಿ ವಿದ್ಯಾರ್ಥಿಗಳನ್ನು ಮನೆಯಿಂದ ಕರೆತರಲು ಈ ವಾಹನ ಬಳಸಬಹುದಾಗಿದೆ. ಇದನ್ನು ಹೊರತುಪಡಿಸಿ ಪಿಡಿಒಗಳು ಸಹ ತಮ್ಮ ಹಂತದಲ್ಲಿ ವಾಹನಗಳನ್ನು ಸಜ್ಜುಗೊಳಿಸಿರಬೇಕು. ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ವಿದ್ಯಾರ್ಥಿಯೂ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು ಎಂದು ಹೇಳಿದರು. ಯಾವುದೇ ವಿದ್ಯಾರ್ಥಿ ಪರೀಕ್ಷೆ ದಿನಗಳಲ್ಲಿ ಹಾಸ್ಟೆಲ್‌ನಲ್ಲಿ ಇರಬಯಸಿದರೆ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳೊಂದಿಗೆ ಪಾಲಕರಿಗೂ ಹಾಸ್ಟೆಲ್‌ನಲ್ಲಿ ಉಚಿತ ಅವಕಾಶ ಕಲ್ಪಿಸಲಾಗುವುದು ಎಂದರು.

ಮಾರ್ಗಸೂಚಿ ಪಾಲನೆ: ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಇಲಾಖೆ ಹೊರಡಿಸಿರುವ ಕೋವಿಡ್‌-19 ಮಾರ್ಗಸೂಚಿಯನ್ನು ಪಾಲಿಸಬೇಕು. ಪ್ರತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತಂಡ ಇರುವುದು. ಪ್ರತಿಯೊಬ್ಬರ ಥರ್ಮಲ್‌ ಸ್ಕ್ಯಾನ್ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಯ ದೇಹದ ತಾಪಮಾನ ಹೆಚ್ಚಿರುವುದು ಕಂಡು ಬಂದರೆ, ಅದನ್ನು ಬಹಿರಂಗಪಡಿಸದೇ, ಗೊಂದಲಕ್ಕೆ ಅವಕಾಶ ನೀಡದೆ, ಅಂತಹ ವಿದ್ಯಾರ್ಥಿಗಳಿಗೆ ಮೀಸಲಾಗಿರಿಸಿರುವ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದರು.

ತಿಂಡಿ ವ್ಯವಸ್ಥೆ: ವಿದ್ಯಾರ್ಥಿಗಳು ಮನೆಯಿಂದಲೇ ಬೆಳಗ್ಗಿನ ತಿಂಡಿ ತಿಂದು ಬರಬೇಕು. ನೀರನ್ನು ಸಹ ಮನೆಯಿಂದಲೇ ತರಬೇಕು. ಒಂದು ವೇಳೆ ನೀರು ತರಲು ಮರೆತು ಬಂದಿರುವ ವಿದ್ಯಾರ್ಥಿಗಳಿಗೆ ಸೀಲ್ಡ್‌ ವಾಟರ್‌ ಬಾಟಲ್‌ ನೀಡಬೇಕು. ಅಗತ್ಯ ಇರುವ ವಿದ್ಯಾರ್ಥಿಗಳಿಗೆ ಬಿಸ್ಕಿಟ್‌ ಪ್ಯಾಕೇಟ್‌, ಚಾಕಲೇಟ್‌ ನೀಡಲು ವ್ಯವಸ್ಥೆ ಮಾಡಬೇಕು ಎಂದರು.

ಮೀಸಲು ಪರೀಕ್ಷಾ ಕೇಂದ್ರ: ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೊಠಡಿಗಳನ್ನು ಮೀಸಲಾಗಿರಿಸಬೇಕು. ಪ್ರತಿ ತಾಲೂಕಿನಲ್ಲಿ ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಮೀಸಲು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಿ ಸಜ್ಜುಗೊಳಿಸಬೇಕು ಎಂದರು.ವಿದ್ಯಾರ್ಥಿಗಳ ವಿವರ: ಜೂ. 25ರಿಂದ ಜು. 3ರವರೆಗೆ ನಡೆಯಲಿರುವ ಪರೀಕ್ಷೆಯನ್ನು ಜಿಲ್ಲೆಯಲ್ಲಿ 24243 ವಿದ್ಯಾರ್ಥಿಗಳು ಬರೆಯಲಿದ್ದು, ಇವರಲ್ಲಿ 12287 ಬಾಲಕರು ಹಾಗೂ 11956 ಬಾಲಕಿಯರು ಇದ್ದಾರೆ. ಒಟ್ಟು 84 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 45 ಸರ್ಕಾರಿ, 24 ಅನುದಾನಿತ, 15ಅನುದಾನ ರಹಿತ ಹಾಗೂ 2 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ ಭದ್ರಾವತಿ 15, ಹೊಸನಗರ 5, ಸಾಗರ 10, ಶಿಕಾರಿಪುರ 11, ಶಿವಮೊಗ್ಗ 26, ಸೊರಬ 10 ಮತ್ತು ತೀರ್ಥಹಳ್ಳಿಯಲ್ಲಿ 7 ಪರೀಕ್ಷಾ ಕೇಂದ್ರಗಳಿವೆ ಎಂದು ಎನ್‌.ಎಂ. ರಮೇಶ ಅವರು ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಎಂ.ಎಲ್‌. ವೈಶಾಲಿ, ಪೊಲೀಸ್‌ ವರಿಷ್ಠಾದಿಕಾರಿ ಕೆ.ಎಂ. ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.